ಕವಿರತ್ನ ಕಾಳಿದಾಸ, ಅಂಜದ ಗಂಡು ನಿರ್ದೇಶಕ ರೇಣುಕಾ ಶರ್ಮಾ ಕೋವಿಡ್ ನಿಂದ ನಿಧನ
Team Udayavani, May 6, 2021, 10:34 AM IST
ಬೆಂಗಳೂರು: ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿಯಂತಹ ಬ್ಲಾಕ್ ಬಾಸ್ಟರ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ(81) ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರನ್ನು ಗಿರಿನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿದ್ದ ಕಾರಣ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ
ಇದನ್ನೂ ಓದಿ: ಲಸಿಕೆ ಅಭಿಯಾನದಲ್ಲಿ ಕೇಂದ್ರದಿಂದ ತಾರತಮ್ಯ, ಕನ್ನಡಿಗರಿಗಾಗಿ ಸೊಲ್ಲೆತ್ತದ ರಾಜ್ಯ ಸರ್ಕಾರ:HDK
1981ರಲ್ಲಿ ಅನುಪಮ ಚಿತ್ರದ ಮೂಲಕ ಅವರು ನಿರ್ದೇಶನ ಕ್ಷೇತ್ರಕ್ಕೆ ಬಂದಿದ್ದರು. ‘ಶಹಬ್ಬಾಸ್ ವಿಕ್ರಮ್, ಕವಿರತ್ನ ಕಾಳಿದಾಸ, ಸತ್ಕಾರ ಹಾಗೂ ನಮ್ಮ ಊರ ದೇವತೆ, ಶಬರಿಮಲೆ ಸ್ವಾಮಿ ಅಯ್ಯಪ್ಪ, ‘ಅಂಜದ ಗಂಡು ಹಾಗೂ ಹಠಮಾರಿ ಹೆಣ್ಣು ಕಿಲಾಡಿ ಗಂಡು,ಕೊಲ್ಲೂರು ಶ್ರೀ ಮೂಕಾಂಬಿಕೆ , ಕಿಂದರಿ ಜೋಗಿ ಮುಂತಾದವು ಅವರ ನಿರ್ದೇಶನದ ಸೂಪರ್ ಹಿಟ್ ಚಿತ್ರಗಳು. 2007-08ರ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ವಿಜೇತರೂ ಆಗಿರುವ ರೇಣುಕಾ ಶರ್ಮಾ ಅವರ ರಕ್ತದ ಒತ್ತಡದಿಂದ ಬಳಲುತ್ತಿದ್ದರು.
ಇದನ್ನೂ ಓದಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವೈಚಾರಿಕ ಸಾಹಿತಿ ಡಾ. ಭಾಸ್ಕರ್ ಮಯ್ಯ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ