ಕೀಬೋರ್ಡ್ ಬಿಟ್ಟು ಗುದ್ದಲಿ ಹಿಡಿದ ಹಂಸಲೇಖ:ಸಂಗೀತಮಾಂತ್ರಿಕನ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ
Team Udayavani, Apr 22, 2020, 10:42 AM IST
ಬೆಂಗಳೂರು: ಕೋವಿಡ್-19 ಲಾಕ್ ಡೌನ್ ನ ಅವಧಿಯಲ್ಲಿ ಚಿತ್ರರಂಗ ಸಂಪೂರ್ಣ ಸ್ತಬ್ಧವಾಗಿದೆ. ಹಲವು ನಟ-ನಟಿಯರು ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡು ನೆರವಿನ ಹಸ್ತ ಚಾಚುತ್ತಿದ್ದಾರೆ. ಅಂತೆಯೇ ಸ್ಯಾಂಡಲ್ವುಡ್ನ ಸಂಗೀತ ಮಾಂತ್ರಿಕ ಹಂಸಲೇಖ ಲಾಕ್ಡೌನ್ ಅವಧಿಯಲ್ಲಿ ವಿಶೇಷ ಕಾರ್ಯವೊಂದನ್ನು ಮಾಡಿದ್ದಾರೆ.
ಹಂಸಲೇಖ ಅವರು ಕೈಯಲ್ಲಿ ಹಾರೆ, ಗುದ್ದಲಿ ಹಿಡಿದುಕೊಂಡು ರಸ್ತೆಗೆ ಕಾಂಕ್ರೀಟ್ ಹಾಕುವ ಕೆಲಸ ಮಾಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿರುವ ತಮ್ಮ ಮನೆಯ ಮುಂದೆ ಹಾದು ಹೋಗುವ ರಸ್ತೆಯ ಗುಂಡಿಯನ್ನು ಮುಚ್ಚಿದ್ದಾರೆ.
ಇತ್ತೀಚಿಗಷ್ಟೆ ಹಂಸಲೇಖ ಅವರು ಕೋವಿಡ್ 19 ವಿರುದ್ಧ ಜಾಗೃತಿ ಮೂಡಿಸಲು ಬಾಯ್ ಬಾಯ್ ಕೋವಿಡ್ ಹಾಡನ್ನು ರಚಿಸಿ, ಸಂಗೀತ ಸಂಯೋಜಿಸಿ ಬಿಡುಗಡೆ ಮಾಡಿದ್ದರು. ಈ ಹಾಡನ್ನು ಅವರ ಪತ್ನಿ ಮತ್ತು ಮಗಳೊಂದಿಗೆ ಹಾಡಿಸಿದ್ದರು. ಈ ಹಾಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ