Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


Team Udayavani, Mar 19, 2024, 12:16 PM IST

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

ರವಿಚಂದ್ರನ್‌ ಸಿನಿಕೆರಿಯರ್‌ನ ಸೂಪರ್‌ ಹಿಟ್‌ ಸಿನಿಮಾ “ಪ್ರೇಮಲೋಕ’ದ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಈಗ ಇದೇ “ಪ್ರೇಮಲೋಕ’ ಸಿನಿಮಾವನ್ನು ಮತ್ತೆ ಅಭಿಮಾನಿಗಳ ಮುಂದೆ ತರುವ ತಯಾರಿಯಲ್ಲಿದ್ದಾರೆ ನಟ ಕಂ ನಿರ್ದೇಶಕ ಕ್ರೇಜಿಸ್ಟಾರ್‌ ರವಿಚಂದ್ರನ್‌.

ಹೌದು, ರವಿಚಂದ್ರನ್‌ “ಪ್ರೇಮಲೋಕ-2′ ಸಿನಿಮಾಕ್ಕೆ ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ “ಪ್ರೇಮಲೋಕ-2′ ಸಿನಿಮಾದ ಬಹುತೇಕ ಸ್ಕ್ರಿಪ್ಟ್ ಕೆಲಸಗಳನ್ನು ಪೂರ್ಣಗೊಳಿಸಿರುವ ರವಿಚಂದ್ರನ್‌, ಇದೇ ಮೇ. 30ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ತಮ್ಮ ಕನಸಿನ ಸಿನಿಮಾದ ಮುಹೂರ್ತವನ್ನು ನೆರವೇರಿಸಿ ಚಿತ್ರೀಕರಣಕ್ಕೆ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿರುವ ರವಿಚಂದ್ರನ್‌, “ನನ್ನ ಹೊಸ “ಪ್ರೇಮಲೋಕ’ದಲ್ಲಿ ನಿಮಗೆ ನೋಡಲು ಹತ್ತಾರು ಹೊಸ ವಿಷಯಗಳಿರುತ್ತವೆ. ಇದು ಇಂದಿನ ಜನರೇಶನ್‌ ಸಿನಿಮಾ. ಪ್ರೀತಿ, ಪ್ರೇಮ ಎಂಬುದು ಕೇವಲ ಕೆಲವೇ ಭಾಷೆ, ರಾಜ್ಯಗಳು ಅಥವಾ ಕೆಲವೇ ದೇಶಗಳಿಗಷ್ಟೇ ಸೀಮಿತವಾದ ವಿಷಯವಲ್ಲ. ಅದು ಪ್ರಪಂಚದ ಎಲ್ಲ ಕಡೆಗೂ ವ್ಯಾಪಿಸಿರುತ್ತದೆ. ಹಾಗೇ “ಪ್ರೇಮಲೋಕ’ ಸಿನಿಮಾ ಕೂಡ. ಇದು ಕೇವಲ ಕನ್ನಡಕ್ಕೆ ಮಾತ್ರವಲ್ಲ, ಇಡೀ ಪ್ರಪಂಚಕ್ಕೆ ಅನ್ವಯವಾಗುವಂಥ ಸಿನಿಮಾ. ಪ್ರಪಂಚದಲ್ಲಿರುವ ಪ್ರತಿಯೊಬ್ಬರೂ, ಪ್ರತಿಯೊಂದು ಪಾತ್ರಗಳೂ ಈ ಸಿನಿಮಾಕ್ಕೆ ಕನೆಕ್ಟ್ ಆಗುತ್ತದೆ’ ಎನ್ನುತ್ತಾರೆ.

“ಪ್ರೇಮಲೋಕ’ ಸಿನಿಮಾದಲ್ಲಿ ಬರೋಬ್ಬರಿ ಐವತ್ತಕ್ಕೂ ಹೆಚ್ಚು ಸೆಟ್‌ಗಳನ್ನು ಹಾಕಿ ಅದರಲ್ಲಿ ಸಿನಿಮಾವನ್ನು ಚಿತ್ರೀಕರಿಸುವ ಯೋಜನೆ ಹಾಕಿಕೊಂಡಿದ್ದಾರಂತೆ ರವಿಚಂದ್ರನ್‌.

ಇಡೀ ಸಿನಿಮಾದ ಬಹುಭಾಗ ಸೆಟ್‌ನಲ್ಲಿಯೇ ನಡೆಯಲಿದೆಯಂತೆ. ಪ್ರತಿ ಸೆಟ್‌ಗಳನ್ನು ಕೂಡ ರವಿಚಂದ್ರನ್‌ ತಮ್ಮ ಕಲ್ಪನೆಯ ಪ್ರಕಾರ ವಿನ್ಯಾಸ ಮಾಡಿಸುತ್ತಿದ್ದಾರೆ. ಪ್ರತಿ ಸೆಟ್‌ನಲ್ಲಿ ಹೊಸಥರದಲ್ಲಿ “ಪ್ರೇಮಲೋಕ-2′ ಸಿನಿಮಾದ ಕಥೆ ತೆರೆದುಕೊಳ್ಳಲಿದೆ. ಈಗಾಗಲೇ ಈ ಕೆಲಸಗಳು ಕೂಡ ಆರಂಭವಾಗಿದ್ದು, ಕೆಲ ತಿಂಗಳಲ್ಲಿ “ಪ್ರೇಮಲೋಕ-2′ ಸಿನಿಮಾದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಪೂರ್ಣವಾಗಲಿದೆ ಎಂಬ ಮಾಹಿತಿ ನೀಡುತ್ತಾರೆ ರವಿಚಂದ್ರನ್‌.

“ಪ್ರೇಮಲೋಕ-2′ ಸಿನಿಮಾದಲ್ಲಿ ರವಿಚಂದ್ರನ್‌ ಪುತ್ರ ಮನುರಂಜನ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಸ್ವತಃ ರವಿಚಂದ್ರನ್‌ ಮತ್ತು ಅವರ ಮತ್ತೂಬ್ಬ ಪುತ್ರ ವಿಕ್ರಮ್‌ ಕೂಡ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಬೃಹತ್‌ ಕಲಾವಿದರ ತಾರಾಗಣವೇ ಈ ಸಿನಿಮಾದಲ್ಲಿರದೆ. ಸದ್ಯ “ಪ್ರೇಮಲೋಕ-2′ ಸಿನಿಮಾದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಜೋರಾಗಿ ನಡೆಯುತ್ತಿದ್ದು, ಸಿನಿಮಾದ ಮುಹೂರ್ತದ ವೇಳೆ ಸಿನಿಮಾದ ಬಗ್ಗೆ ಇನ್ನುಳಿತ ಮಾಹಿತಿ ಗಳನ್ನು ನೀಡಲಿದ್ದೇನೆ ಎಂದಿದ್ದಾರೆ ರವಿಚಂದ್ರನ್‌.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.