![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಟೀನೇಜ್ ಫೋಟೋ ಹಂಚಿಕೊಂಡ ಮೋಹಕ ತಾರೆ…ಸಾಮಾಜಿಕ ಜಾಲತಾಣದಲ್ಲಿ ವೈರಲ್
ಸಾಲು ಸಾಲು ಚಿತ್ರಗಳು ಅವರನ್ನು ಇತರ ಚಿತ್ರರಂಗದಲ್ಲಿ ನಟಿಸುವಂತಹ ಅವಕಾಶ ಕೊಟ್ಟಿತು.
Team Udayavani, Aug 3, 2022, 11:50 AM IST
![tdy-2](https://www.udayavani.com/wp-content/uploads/2022/08/tdy-2-4-620x372.jpg)
ಬೆಂಗಳೂರು:ನಟಿ ರಮ್ಯಾ ಬಣ್ಣದ ಲೋಕದಿಂದ ದೂರ ಉಳಿದು ಕೆಲ ವರ್ಷಗಳೇ ಉರುಳಿವೆ. ಅವರು ಕಮ್ ಬ್ಯಾಕ್ ಮಾಡುತ್ತಾರೆ ಎನ್ನುವ ಸುದ್ದಿ ಆಗಾಗ ಅಲಲ್ಲಿ ಕೇಳಿ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಮೋಹಕ ತಾರೆ ರಮ್ಯಾ ಚಿತ್ರರಂಗದ ಜೊತೆಗಿನ ನಂಟನ್ನು ಮತ್ತೆ ಬೆಳೆಸಿಕೊಂಡಿದ್ದಾರೆ. ಹೊಸ ಚಿತ್ರದ ಟ್ರೇಲರ್,ಟೀಸರ್, ಪೋಸ್ಟರ್ ಗಳನ್ನು ಹಂಚಿಕೊಂಡು ಆ ತಂಡಕ್ಕೆ ಶುಭಾಶಯವನ್ನು ಕೋರುತ್ತಾರೆ.
ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ಸದಾ ಸಕ್ರಿಯ. ಅವರು ಏನು ಪೋಸ್ಟ್ ಮಾಡಿದರೂ ಅದು ಅಭಿಮಾನಿಗಳಿಗೆ ಸಂತಸ. ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಸ್ಯಾಂಡಲ್ ವುಡ್ ಕ್ವೀನ್ ತನ್ನ ಹಳೆಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಆಗಷ್ಟೇ ಕಾಲೇಜು ಮೆಟ್ಟಿಲು ಹತ್ತಿದ ಹುಡುಗಿ ರಮ್ಯಾ ತನ್ನ 18ನೇ ವಯಸ್ಸಿನ ಹಳೆಯ ಐಡಿ ಕಾರ್ಡ್ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ತೋರಿಸಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೋಹಕ ತಾರೆ ತನ್ನ 23ನೇ ವಯಸ್ಸಿನಲ್ಲಿ ಅಪ್ಪು ಜೊತೆ ʼಅಭಿʼ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಯಾದರು. ಆ ಬಳಿಕ ಅವರು ತನ್ನ ನಟನೆಯ ಮೂಲಕ ಬೇಡಿಕೆಯ ನಟಿಯಾಗಿ ಬೆಳೆದರು. ಸಾಲು ಸಾಲು ಚಿತ್ರಗಳು ಅವರನ್ನು ಇತರ ಚಿತ್ರರಂಗದಲ್ಲಿ ನಟಿಸುವಂತಹ ಅವಕಾಶ ಕೊಟ್ಟಿತು.
ರಮ್ಯಾ ಚಿತ್ರ ರಂಗಕ್ಕೆ ಬರುತ್ತಾರೆ ಎನ್ನುವ ಸುದ್ದಿಗಳು ಕೇಳಿ ಬರುತ್ತಿದೆ. ಇತ್ತೀಚಿಗೆ ಅವರು ಡಾಲಿ ಧನಂಜಯ ಅವರ ʼಹೊಯ್ಸಳʼ ಚಿತ್ರದ ಸೆಟ್ ಗೆ ಭೇಟಿ ನೀಡಿದ್ದರು. ರಕ್ಷಿತ್ ಶೆಟ್ಟಿ ಅವರ ʼ777 ಚಾರ್ಲಿʼ ನೋಡಿ ಭಾವುಕರಾಗಿದ್ದರು.ಅವರು ಮತ್ತೆ ಬಣ್ಣದ ಲೋಕಕ್ಕೆ ಬರಲಿ ಎನ್ನುವುದು ಅಪಾರ ಅಭಿಮಾನಿಗಳ ಆಸೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.