ಥಿಯೇಟರ್‌ಗಳಲ್ಲಿ ಶೇ.50 ಸೀಟಿಗೆ ಮಾತ್ರ ಅವಕಾಶ:ಸರ್ಕಾರದ ದ್ವಂದ್ವನೀತಿಗೆ ಸಿನಿಮಂದಿ ಸಿಡಿಮಿಡಿ


Team Udayavani, Feb 3, 2021, 1:29 PM IST

ಥಿಯೇಟರ್‌ಗಳಲ್ಲಿ ಶೇ.50 ಸೀಟಿಗೆ ಮಾತ್ರ ಅವಕಾಶ:ಸರ್ಕಾರದ ದ್ವಂದ್ವನೀತಿಗೆ ಸಿನಿಮಂದಿ ಸಿಡಿಮಿಡಿ

ಬೆಂಗಳೂರು: ರಾಜ್ಯ ಸರ್ಕಾರವು ಕೊರೊನಾ 2ನೇ ಅಲೆಯ ನೆಪ ಹೇಳಿ ಫೆ.28ರವರೆಗೆ ಥಿಯೇಟರ್‌ ಗಳಲ್ಲಿ ಶೇ.50ರಷ್ಟು ಸೀಟು ಭರ್ತಿಗೆ ಮಾತ್ರ ಅನುಮತಿ ನೀಡಿರುವುದು ಕನ್ನಡ ಚಿತ್ರರಂಗದ ಆಕ್ರೋಶಕ್ಕೆ ಕಾರಣವಾಗಿದೆ.

ಮಂಗಳವಾರ ರಾಜ್ಯಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿ ವಿರುದ್ಧ ಸಿಡಿದೆದ್ದಿರುವ ಸಿನಿಮಂದಿ, “ಒಂದೋ ನಮ್ಮನ್ನು ನಮ್ಮ ಪಾಡಿಗೆ ಉದ್ಯಮ ನಡೆಸಲು ಬಿಡಿ, ಇಲ್ಲವೆಂದಾದರೆ ಸಿನಿಮಾ ಕ್ಷೇತ್ರವನ್ನೇ ಮುಚ್ಚುವುದಾಗಿ ಘೋಷಿಸಿ’ ಎಂದು ಆಕ್ರೋಶಭರಿತರಾಗಿ ನುಡಿದಿದ್ದಾರೆ. ಇತ್ತೀಚೆಗಷ್ಟೇ ಶೇ.100ರಷ್ಟು ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅವಕಾಶ ನೀಡಿತ್ತು.

ಇದನ್ನೂ ಓದಿ:ಪೋಸ್ಟರ್‌ನಲ್ಲಿ ಹಾಫ್ ಹೀರೋಯಿನ್‌: ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬಳು ಮಲೆಯಾಳಿ ಚೆಲುವೆ

ಕಳೆದ 11 ತಿಂಗಳಿನಿಂದ ಸಂಕಷ್ಟದಲ್ಲಿದ್ದ ಚಿತ್ರರಂಗ ಈಗಷ್ಟೇ ಚೇತರಿಕೆ ಕಾಣುತ್ತಿದೆ. ಅದರಲ್ಲೂ ಈ ತಿಂಗಳು ಸಾಕಷ್ಟು ಬಿಗ್‌ ಬಜೆಟ್‌ ಸಿನಿಮಾಗಳು ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿವೆ. ಇಂತಹ ಸಮಯದಲ್ಲಿ ಕೇವಲ ಶೇ.50ರಷ್ಟು ಸೀಟು ಭರ್ತಿ ಯಲ್ಲಿ ಸಿನಿಮಾ ಪ್ರದರ್ಶಿಸಿದರೆ ಹಾಕಿದ ಬಂಡವಾಳ ವಾಪಸ್‌ ಬರುವುದಾದರೂ ಹೇಗೆ ಎನ್ನುವುದು ನಿರ್ಮಾಪಕರ ಪ್ರಶ್ನೆ. ಲಕ್ಷಗಟ್ಟಲೆ ವ್ಯಯಿಸಿ ಪ್ರಮೋಶನ್‌ ಆರಂಭಿಸಲಾಗಿದ್ದು, ಸರ್ಕಾರದ ನಿರ್ಧಾರ ಚಿತ್ರೋದ್ಯಮಕ್ಕೆ ದೊಡ್ಡ ಹೊಡೆತವನ್ನೇ ನೀಡಿದೆ. ಪ್ರತಿ ವರ್ಷ ಸಿನಿಮಾ ಕ್ಷೇತ್ರದಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಯಾಗುತ್ತದೆ.

ಬೇರೆಲ್ಲಾ ಉದ್ಯಮಗಳಿಗೆ ಇಲ್ಲದ ನಿರ್ಬಂಧ ಸಿನಿಮಾ ಉದ್ಯಮಕ್ಕೆ ಮಾತ್ರ ಯಾಕೆ ಎಂದು ನಿರ್ಮಾಪಕರು ಪ್ರಶ್ನೆ ಮಾಡುತ್ತಿದ್ದಾರೆ. ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಈ ನಿರ್ಧಾರ ಖಂಡನೀಯ. ಈಗಷ್ಟೇ ಉದ್ಯಮ ಚೇತರಿಕೆಯ ಹಾದಿಯಲ್ಲಿದೆ. ಸಿನಿಮಾವನ್ನೇ ನಂಬಿಕೊಂಡ ನಮ್ಮಂಥವರು ಎಲ್ಲಿ ಹೋಗಬೇಕು? ಈ ಬಗ್ಗೆ ಶೀಘ್ರವೇ ಸಭೆ ನಡೆಸಿ, ಮುಂದಿನ ನಿರ್ಧಾರದ ಬಗ್ಗೆ ಚರ್ಚಿಸಲಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಗೆಲುವಿನ ನಗೆ ಬೀರಿದ ರಾಮಾರ್ಜುನ: ಅನೀಶ್‌ ಮೊಗದಲ್ಲಿ ನಗು

ನಿರ್ಧಾರ ಕೇಳಿ ಶಾಕ್‌ ಆಗಿದೆ: ಕೇಂದ್ರ ಸರ್ಕಾರ ಶೇ.100ರಷ್ಟು ಪ್ರವೇಶಕ್ಕೆ ಅನುಮತಿ ನೀಡಿದ್ದರಿಂದ ನಿರ್ಮಾಪಕರು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದರು. ಈಗ ಏಕಾಏಕಿ ರಾಜ್ಯ ಸರ್ಕಾರ ಮತ್ತೆ ಹಿಂದಿನ ನಿಯಮವನ್ನೇ ಜಾರಿ ಮಾಡಲು ಮುಂದಾಗಿ ರುವುದನ್ನ ಕೇಳಿ ಶಾಕ್‌ ಆಗಿದೆ. ನಿರ್ಮಾಪಕರು, ಪ್ರದರ್ಶಕರ ಪಾಲಿಗೆ ಇದೊಂಥರಾ ಬಿಸಿ ತುಪ್ಪದಂತಾಗಿದೆ. ಫ‌ುಲ್‌ ಮೀಲ್ಸ್‌ ಮುಂದೆ ಇಟ್ಟು, ಅದರಲ್ಲಿ ಅರ್ಧ ಮಾತ್ರ ತಿನ್ನುವಂತೆ ಹೇಳಿದ್ರೆ ನಿರ್ಮಾಪಕರು ಏನು ಮಾಡಬೇಕು?

ಸರ್ಕಾರದ ಈ ನಿರ್ಧಾರ ಹಿಂಪಡೆಯುವಂತೆ ಮನವಿ ಮಾಡುತ್ತಿದ್ದೇವೆ. ಚಿತ್ರೋದ್ಯಮದ ಸಂಕಷ್ಟವನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಒತ್ತಾಯಿಸಿದ್ದಾರೆ.

ಎಲ್ಲೆಲ್ಲಿ 100% ಭರ್ತಿ?

ಪಶ್ಚಿಮ ಬಂಗಾಳ, ದೆಹಲಿ, ತಮಿಳು ನಾಡು, ಗುಜರಾತ್‌ ಸೇರಿದಂತೆ ಹಲವು ರಾಜ್ಯಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ.

ನಮ್ಮನ್ನು ನಮ್ಮ ಪಾಡಿಗೆ ಬಿಡಿ

ಕೊರೊನಾ ದೇಶವನ್ನು ಹಾಳು ಮಾಡಿತು. ಸರ್ಕಾರದ ರಾಜನೀತಿಗಳು ನಮ್ಮ ಉದ್ಯಮವನ್ನು ಹಾಳು ಮಾಡುತ್ತಿವೆ. ನಷ್ಟದಲ್ಲಿರುವ ಚಿತ್ರರಂಗಕ್ಕೆ ರಾಜ್ಯ ಸರ್ಕಾರ ಒಂದು ರೂಪಾಯಿ ಕೂಡ ಸಹಾಯ ಮಾಡಿಲ್ಲ. ಕೊನೇ ಪಕ್ಷ ನಮ್ಮ ಪಾಡಿಗೆ ಉದ್ಯಮ ನಡೆಸಲು ಬಿಡುತ್ತಾರೆ ಅಂದ್ರೆ, ಅದಕ್ಕೂ ಅವಕಾಶ ಕೊಡುತ್ತಿಲ್ಲ. ಇದಕ್ಕಿಂತ ಸರ್ಕಾರ ಚಿತ್ರೋದ್ಯಮ ಮುಚ್ಚುವಂತೆ ಘೋಷಿಸುವುದು ಒಳ್ಳೆಯದು ಎಂದು ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ ಚಂದ್ರಶೇಖರ್‌ ಕಿಡಿಕಾರಿದ್ದಾರೆ. ದಿನಕ್ಕೊಂದು ನಿರ್ಧಾರ ಮಾಡುತ್ತಾ ಹೋದ್ರೆ, ರಾಜ್ಯ- ಕೇಂದ್ರ ದ್ವಂದ್ವ ನಿಲುವು ಹೊಂದಿದ್ದರೆ ಹೇಗೆ? ಹಲವು ಸಿನಿಮಾಗಳು ರಿಲೀಸ್‌ಗೆ ರೆಡಿಯಾಗಿದ್ದು, ಪ್ರಚಾರಕ್ಕೆ ಲಕ್ಷಾಂತರ ರೂ. ಖರ್ಚು ಮಾಡುತ್ತಿವೆ. ಇವರೆಲ್ಲರ ಗತಿ ಏನಾಗಬೇಕು ಎಂದೂ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.