ಹೊಸಬೆಳಕು ಮೂಡುತಿದೆ.. ಸ್ಟಾರ್‌ ಸಿನಿಮಾಗಳ ರಿಲೀಸ್‌ ಡೇಟ್‌ ಅನೌನ್ಸ್‌


Team Udayavani, Jul 25, 2021, 3:54 PM IST

ಹೊಸಬೆಳಕು ಮೂಡುತಿದೆ.. ಸ್ಟಾರ್‌ ಸಿನಿಮಾಗಳ ರಿಲೀಸ್‌ ಡೇಟ್‌ ಅನೌನ್ಸ್‌

ಅಭಿಮಾನಿಗಳ ಮೊಗದಲ್ಲಿ ಮತ್ತೆ ಹರ್ಷ ಮೂಡಿದೆ. ಚಿತ್ರಮಂದಿರಗಳ ಮಾಲೀಕರು ಕೂಡಾ ಸಣ್ಣಗೆ ನಗೆ ಬೀರಲಾರಂಭಿಸಿದ್ದಾರೆ. ಇತ್ತಕಡೆ ನಿರ್ಮಾಪಕರು ಭರವಸೆಯೊಂದಿಗೆ ತಮ್ಮ ಸಿನಿಮಾಗಳ ಡೇಟ್‌ ಅನೌನ್ಸ್‌ ಮಾಡಲಾರಂಭಿಸಿದ್ದಾರೆ. ಹೌದು, ಎರಡನೇ ಲಾಕ್‌ಡೌನ್‌ ಬಳಿಕ ಸ್ಟಾರ್‌ ಸಿನಿಮಾಗಳು ಮತ್ತೆ ಸದ್ದು ಮಾಡುತ್ತಿವೆ. ಆಯಾ ಚಿತ್ರಗಳ ನಿರ್ಮಾಪಕರು ತಮ್ಮ ಸಿನಿಮಾಗಳ ಡೇಟ್‌ ಅನೌನ್ಸ್‌ ಮಾಡಲಾರಂಭಿಸಿದ್ದಾರೆ.

ಈ ಮೂಲಕ ಮತ್ತೆ ಕನ್ನಡ ಚಿತ್ರರಂಗ ಗರಿಗೆದರುತ್ತಿದೆ. ಸತತ ಒಂದೂವರೆ ವರ್ಷಗಳ ಲಾಕ್‌ಡೌನ್‌ ನಿಂದ ಕಂಗೆಟ್ಟಿರುವ ಚಿತ್ರರಂಗದಲ್ಲಿ ಕಳೆದ ಬಾರಿ ಬಿಡುಗಡೆಯಾದ ಮೂರು ಸ್ಟಾರ್‌ ಸಿನಿಮಾಗಳು (ಪೊಗರು, ರಾಬರ್ಟ್‌, ಯುವರತ್ನ) ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿವೆ. ಈಗ ಎರಡನೇ ಇನ್ನಿಂಗ್ಸ್‌ನಲ್ಲಿ ಮತ್ತಷ್ಟು ಸ್ಟಾರ್‌ ಸಿನಿಮಾಗಳು ರೆಡಿಯಾಗಿವೆ. “ಸಲಗ’, “ಭಜರಂಗಿ-2′, “ಕೋಟಿಗೊಬ್ಬ-3′, “ಕೆಜಿಎಫ್-2′ ಚಿತ್ರಗಳು ಬಿಡುಗಡೆಗೆ ಅಣಿಯಾಗಿವೆ. ಈ ಎಲ್ಲಾ ಚಿತ್ರಗಳು ನಾನಾಕಾರಣಗಳಿಗಾಗಿ ಕುತೂಹಲ ಹೆಚ್ಚಿಸಿವೆ.

ಈಗಾಗಲೇ “ಸಲಗ’ ಹಾಗೂ “ಭಜರಂಗಿ-2′ ಚಿತ್ರಗಳು ಬಿಡುಗಡೆಯ ದಿನಾಂಕ ಘೋಷಿಸಿವೆ. ಆಗಸ್ಟ್‌ 20 ವರಮಹಾಲಕ್ಷ್ಮೀ ಹಬ್ಬದಂದು “ಸಲಗ’ ಚಿತ್ರ ಬಿಡುಗಡೆಯಾದರೆ, ಸೆಪ್ಟೆಂಬರ್‌ 10 ಗಣೇಶನ ಹಬ್ಬದಂದು “ಭಜರಂಗಿ-2′ ಚಿತ್ರ ಬಿಡುಗಡೆಯಾಗಲಿದೆ. ಇನ್ನು, “ಕೋಟಿಗೊಬ್ಬ-3′ ಹಾಗೂ “ಕೆಜಿಎಫ್-2′ ಚಿತ್ರಗಳು ಶೀಘ್ರದಲ್ಲಿಯೇ ತಮ್ಮ ಡೇಟ್‌ ಅನೌನ್ಸ್‌ ಮಾಡಲಿವೆ.

ಮೊದಲ ಹಂತವಾಗಿ ದೊಡ್ಡ ಮಟ್ಟದಲ್ಲಿ ಮಾಸ್‌ ಓಪನಿಂಗ್‌ ಪಡೆಯಲಿರುವ ಚಿತ್ರವೆಂದರೆ ಅದು “ಸಲಗ’. ದುನಿಯಾ ವಿಜಯ್‌ ನಿರ್ದೇಶನ, ನಟನೆಯ “ಸಲಗ’ ಚಿತ್ರ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆಕಾರಣ ಈಗಾಗಲೇ ಹಿಟ್‌ಲಿಸ್ಟ್‌ ಸೇರಿರುವ ಚಿತ್ರದ ಹಾಡುಗಳು ಹಾಗೂ ಟೀಸರ್‌. ಮೇಲ್ನೋಟಕ್ಕೆ ಇದು ಪಕ್ಕಾ ಮಾಸ್‌ ಸಿನಿಮಾವಾದರೂ ಚಿತ್ರದಲ್ಲೊಂದು ಲವ್‌ಸ್ಟೋರಿ, ಮದರ್‌ ಸೆಂಟಿಮೆಂಟ್‌ ಇರುವುದರಿಂದ ಎಲ್ಲಾ ವರ್ಗದ ಜನರನ್ನು ಸೆಳೆಯುವ ನಿರೀಕ್ಷೆ ಇದೆ.

ಇದನ್ನೂ ಓದಿ:‘ಝೂ: ಕೇರ್ ಆಫ್ ‘ಡಿ’ ಬಾಸ್’ : ಇದು ದರ್ಶನ್ ಅಭಿಮಾನಿಯ ಅಭಿಮಾನದ ಕಥೆ

ಇನ್ನು, ಎ.ಹರ್ಷ ನಿರ್ದೇಶನದ ಈ ಚಿತ್ರವನ್ನು ಜಯಣ್ಣ ಮತ್ತು ಭೋಗೇಂದ್ರ ನಿರ್ಮಾಣ ಮಾಡುತ್ತಿದ್ದಾರೆ. “ಭಜರಂಗಿ’ಕನ್ನಡ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಪಡೆದಿತ್ತು. ಅದೇ ಯಶಸ್ಸಿನ ಬಳಿಕ ನಿರ್ದೇಶಕ ಹರ್ಷ ಅವರು “ಭಜರಂಗಿ 2′ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್‌, ಟೀಸರ್‌ ನೋಡಿದವರಿಗೆ ಇಲ್ಲೂ ಹೊಸದೊಂದು ಕಥೆ ಬಿಚ್ಚಿಕೊಳ್ಳುವ ನಿರೀಕ್ಷೆ ಹೆಚ್ಚಿದೆ. ಅದೇನೆ ಇರಲಿ, “ಭಜರಂಗಿ’ ಮೂಲಕ ಶಿವರಾಜಕುಮಾರ್‌ ಹೊಸ ವಿಷಯ ಹೇಳಿದ್ದರು. ಈ ಬಾರಿ “ಭಜರಂಗಿ 2′ ಮೂಲಕವೂ ಹೊಸತನ ಕಟ್ಟಿಕೊಡುತ್ತಾರೆ ಎಂಬ ನಂಬಿಕೆ ಅವರ ಅಭಿಮಾನಿಗಳಲ್ಲಿದೆ.

ಉಳಿದಂತೆ “ಕೋಟಿಗೊಬ್ಬ-3′ ಹಾಗೂ “ಕೆಜಿಎಫ್-2′ ಚಿತ್ರಗಳು ಕೂಡಾ ದಿನದಿಂದ ದಿನಕ್ಕೆ ನಿರೀಕ್ಷೆ ಹೆಚ್ಚು ಮಾಡಿಕೊಳ್ಳುತ್ತಿವೆ. ಇದರ ಜೊತೆಗೆ ಸಾಕಷ್ಟು ಹೊಸಬರ ಚಿತ್ರಗಳು ಕೂಡಾ ಬಿಡುಗಡೆಯಾಗಲಿವೆ. ಸರ್ಕಾರ ಆಗಸ್ಟ್‌1 ರಿಂದ ಹೌಸ್‌ಫ‌ುಲ್‌ ಪ್ರದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇರುವುದರಿಂದ ಹೊಸಬರು ಸೇರಿದಂತೆ, ಸ್ಟಾರ್‌ಗಳ ಸಿನಿಮಾಗಳು ಬಿಡುಗಡೆಯ ಸಿದ್ಧತೆಯಲ್ಲಿವೆ. ಇನ್ನೊಂದಿಷ್ಟು ಸಿನಿಮಾಗಳು ಸೆನ್ಸಾರ್‌ ಪ್ರಕ್ರಿಯೆಯಲ್ಲಿ ತೊಡಗಿವೆ. “ನಿನ್ನ ಸನಿಹಕೆ’,”ಲಂಕೆ’, “ರೈಮ್ಸ್‌’, “ಕ್ರಿಟಿಕಲ್‌ ಕೀರ್ತನೆಗಳು’ ಸೇರಿದಂತೆ ಅನೇಕ ಚಿತ್ರಗಳು ಬಿಡುಗಡೆಯಾಗಲಿವೆ.

ದೊಡ್ಡ ಸಿನಿಮಾಗಳ ಡೇಟ್‌ ಅನೌನ್ಸ್‌ಕಾಯುತ್ತಿದ್ದಾರೆ ಹೊಸಬರು: ಅನೇಕ ಹೊಸಬರು ತಮ್ಮ ಸಿನಿಮಾಗಳನ್ನು ಸಿದ್ಧಪಡಿಸಿಕೊಂಡು, ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಆದರೆ, ಅವರೆಲ್ಲರೂ ಸ್ಟಾರ್‌ ಸಿನಿಮಾಗಳ ನಡೆಯನ್ನು ನೋಡಿಕೊಂಡು ಬರಲಿದ್ದಾರೆ. ಅದೇಕಾರಣದಿಂದ ಸ್ಟಾರ್‌ ಸಿನಿಮಾಗಳು ಯಾವಾಗ ಡೇಟ್‌ ಅನೌನ್ಸ್‌ ಮಾಡುತ್ತವೆ ಎಂದು ಎದುರು ನೋಡುತ್ತಿವೆ. ಈ ಗ್ಯಾಪ್‌ನಲ್ಲಿ ಹೊಸಬರು ತಮ್ಮ ಸಿನಿಮಾ ಬಿಡುಗಡೆ ಮಾಡಲಿದ್ದಾರೆ. ಸ್ಟಾರ್‌ ಸಿನಿಮಾಗಳ ನಿರ್ಮಾಪಕರು ಕೂಡಾ ಈ ನಿಟ್ಟಿನಲ್ಲಿ ಒಂದು ಸ್ಪಷ್ಟತೆ ನೀಡುವ ಅಗತ್ಯವಿದೆ.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.