‘ವಿಕ್ರಾಂತ್ ರೋಣ’ನಿಗೆ ಸ್ಯಾಂಡಲ್ ವುಡ್ ಸಾಥ್; ಇಂದು ಟ್ರೇಲರ್‌ ರಿಲೀಸ್‌


Team Udayavani, Jun 23, 2022, 10:59 AM IST

‘ವಿಕ್ರಾಂತ್ ರೋಣ’ನಿಗೆ ಸ್ಯಾಂಡಲ್ ವುಡ್ ಸಾಥ್; ಇಂದು ಟ್ರೇಲರ್‌ ರಿಲೀಸ್‌

ಕನ್ನಡ ಚಿತ್ರರಂಗ ಒಂದು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಅದು ಒಬ್ಬ ನಟನ ಸಿನಿಮಾಕ್ಕೆ ಬೇರೆ ನಟರು ಸಾಥ್‌ ಕೊಡುವುದು. ಈ ಮೂಲಕ ನಾವೆಲ್ಲರೂ ಒಂದು ಎಂಬ ಸಂದೇಶ ರವಾನಿಸುತ್ತಿದ್ದಾರೆ ನಮ್ಮ ಸ್ಯಾಂಡಲ್‌ವುಡ್‌ ಸ್ಟಾರ್.

ಇತ್ತೀಚೆಗೆ ನೀವು ಸೂಕ್ಷ್ಮವಾಗಿ ಗಮನಿಸಿದರೆ ಬೇರೆ ನಟರ ಸಿನಿಮಾಗಳ ಆಡಿಯೋ, ಟೀಸರ್‌, ಟ್ರೇಲರ್‌ ರಿಲೀಸ್‌ಗಳಿಗೆ ಸ್ಯಾಂಡಲ್‌ವುಡ್‌ನ‌ ನಟರೆಲ್ಲರೂ ಒಟ್ಟಿಗೆ ಹರಸಿ ಬರುತ್ತಾರೆ. ಇಂತಹ ಒಂದು ಉತ್ತಮ ಬೆಳವಣಿಗೆಗೆ ದೊಡ್ಡ ಮಟ್ಟದಲ್ಲಿ ಸಾಕ್ಷಿಯಾಗಿದ್ದು ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ’ ಚಿತ್ರದ ಪ್ರೀ ಟ್ರೇಲರ್‌ ರಿಲೀಸ್‌ ಕಾರ್ಯಕ್ರಮ.

ಕಿಚ್ಚ ಸುದೀಪ್‌ ನಟನೆಯ ಬಹುನಿರೀಕ್ಷಿತ “ವಿಕ್ರಾಂತ್‌ ರೋಣ’ ಚಿತ್ರದ ಟ್ರೇಲರ್‌ ಇಂದು ಬಿಡುಗಡೆಯಾಗುತ್ತಿದೆ. ಆದರೆ, ಒಂದು ದಿನ ಮುಂಚೆ (ಜೂ.22) ಚಿತ್ರತಂಡ ಪ್ರೀ ಟ್ರೇಲರ್‌ ಇವೆಂಟ್‌ ಮಾಡಿತ್ತು. ಈ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್‌ನ‌ ಅನೇಕ ಮುಂಚೂಣಿ ನಟರು ಬಂದು ಶುಭ ಹಾರೈಸಿದರು.

ನಟರಾದ ಶಿವರಾಜ್‌ ಕುಮಾರ್‌, ರವಿಚಂದ್ರನ್‌, ರಮೇಶ್‌ ಅರವಿಂದ್‌, ಸೃಜನ್‌ ಲೋಕೇಶ್‌, ಧನಂಜಯ್‌, ರಕ್ಷಿತ್‌ ಶೆಟ್ಟಿ, ರಿಷಭ್‌ ಶೆಟ್ಟಿ, ರಾಜ್‌ ಶೆಟ್ಟಿ, ನಿರ್ದೇಶಕರಾದ ಯೋಗರಾಜ್‌ ಭಟ್‌, ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕರು ಸಾಕ್ಷಿಯಾದರು. ಟ್ರೇಲರ್‌ ನೋಡಿದ ಎಲ್ಲರಿಂದಲೂ ಒಂದೇ ಮಾತು, “ಇದು ಕನ್ನಡ ಚಿತ್ರರಂಗದಿಂದ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾದ ನೆಕ್ಸ್ಟ್ ಲೆವೆಲ್‌ ಸಿನಿಮಾ’ ಎಂಬುದು.

ಇದನ್ನೂ ಓದಿ:ಇಂದಿನಿಂದ ರಿಷಭ್‌ ‘ಹರಿಕಥೆ ಅಲ್ಲ ಗಿರಿಕಥೆ’ ಶುರು

ಅದರಲ್ಲೂ ನಟ ಶಿವರಾಜ್‌ಕುಮಾರ್‌, ಸುದೀಪ್‌ ಹಾಗೂ ತಮ್ಮ ನಡುವಿನ ನಂಟಿನ ಬಗ್ಗೆ ಮಾತನಾಡುವ ಜೊತೆಗೆ ವಿಕ್ರಾಂತ್‌ ರೋಣ ಟ್ರೇಲರ್‌ಗೆ ಮೆಚ್ಚುಗೆ ಸೂಚಿಸಿದರು. ಜೊತೆಗೆ ಚಿತ್ರದ “ರ..ರ.. ರಕ್ಕಮ್ಮ’ ಹಾಡಿಗೆ ಸ್ಟೆಪ್‌ ಕೂಡಾ ಹಾಕಿದರು.

ಇದೇ ವೇಳೆ ಇಡೀ ಚಿತ್ರತಂಡ ಚಿತ್ರದ ಬಗ್ಗೆ ಮಾತನಾಡಿತು. ರವಿಚಂದ್ರನ್‌, ಶಿವಣ್ಣ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್‌ ಆಗುವ ಬಗ್ಗೆ ಮಾತನಾಡಿದರೆ, ರಕ್ಷಿತ್‌, ರಿಷಭ್‌, ರಾಜ್‌ ಸೇರಿದಂತೆ ಇತರ ನಟರು ಸುದೀಪ್‌ ಅವರ ಸಿನಿಮಾ ಪ್ರೀತಿ, ಅವರು ಸ್ಫೂರ್ತಿಯಾಗುವ ರೀತಿಯನ್ನು ಕೊಂಡಾಡಿದರು. “ನಾನು ಈ ಸಿನಿಮಾ ಮಾಡುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಸುದೀಪ್‌ ಅವರಿಗೆ ಕಥೆ ಹೇಳಿದಾಗ, ಮಾಡುವುದಾದರೆ ಈ ಸಿನಿಮಾವನ್ನು ಬೇರೆ ಲೆವೆಲ್‌ಗೆ ಮಾಡಬೇಕು ಅಂದರು. ಆಗ ಅರ್ಥವಾಗಲಿಲ್ಲ. ಈಗ ಟ್ರೇಲರ್‌ ನೋಡಿದಾಗ ಸಿನಿಮಾ ಯಾವ ಮಟ್ಟಕ್ಕೆ ಮೂಡಿಬಂದಿದೆ ಎಂದು ಗೊತ್ತಾಗುತ್ತದೆ’ ಎಂದು ಸಿನಿಮಾ ಬಗ್ಗೆ ಹೇಳಿದರು ನಿರ್ಮಾಪಕ ಜಾಕ್‌ ಮಂಜು.

ನಿರ್ದೇಶಕ ಅನೂಪ್‌ ಭಂಡಾರಿ, ರೋಣ ಒಂದು ವಿಶೇಷ ಅನುಭವ ಕೊಡುವ ಸಿನಿಮಾ ಎನ್ನಲು ಮರೆಯಲಿಲ್ಲ. ಚಿತ್ರದ ರಕ್ಕಮ್ಮ ಹಾಡಿನಲ್ಲಿ ಕಾಣಿಸಿಕೊಂಡ ಜಾಕ್ವೇಲಿನ್‌ ಫ‌ರ್ನಾಂಡಿಸ್‌ ಕೂಡಾ ಚಿತ್ರದ ಬಗ್ಗೆ ಮಾತನಾಡಿದರು.

ಈ ವೇಳೆ ಮಾತನಾಡಿದ ಕಿಚ್ಚ ಸುದೀಪ್‌, ಮೊದಲು ನಾನು ಈ ಕಥೆ ಕೇಳಲು ಕಾರಣ ನನ್ನ ಪತ್ನಿ ಪ್ರಿಯಾ. ಆ ನಂತರ ಅನೂಪ್‌ ಈ ಕಥೆಯನ್ನು ಸಣ್ಣ ಸಣ್ಣ ಸೂಕ್ಷ್ಮ ಅಂಶಗಳೊಂದಿಗೆ ಕಟ್ಟಿಕೊಟ್ಟಿದ್ದಾರೆ. ಈ ಸಿನಿಮಾದ ಸೆಟ್‌ವರ್ಕ್‌, ಕ್ಯಾಮರಾ, ಮ್ಯೂಸಿಕ್‌ ಎಲ್ಲವೂ ತುಂಬಾ ಸೊಗಸಾಗಿ ಮೂಡಿಬಂದಿದೆ ಎಂದರೆ ಅದಕ್ಕೆ ಕಾರಣ ಆಯಾ ಡಿಪಾರ್ಟ್‌ಮೆಂಟ್‌ನವರ ಶ್ರಮ. ಯಾರೂ ಏನೇ ಕನಸು ಕಂಡರೂ, ಈ ಸಿನಿಮಾ ಆಗೋಕೆ ಮುಖ್ಯ ಕಾರಣ ನಿರ್ಮಾಪಕ, ನನ್ನ ಗೆಳೆಯ ಜಾಕ್‌ ಮಂಜು. ಅವರಿಲ್ಲದೇ ಈ ಸಿನಿಮಾ ಆಗಲು ಸಾಧ್ಯವಿಲ್ಲ. ಸಿನಿಮಾಕ್ಕಾಗಿ ಆತನ ಜೊತೆ ಸಾಕಷ್ಟು ಜಗಳವಾಡಿದ್ದೇನೆ. ಆತನ ಸಿನಿಮಾ ಪ್ರೀತಿಯಿಂದ ಇವತ್ತು “ವಿಕ್ರಾಂತ್‌ ರೋಣ’ ಈ ಮಟ್ಟಕ್ಕೆ ಬಂದಿದೆ ಎಂದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.