‘ಹಿಂದಿ ದಿವಸ್’ ವಿರುದ್ಧ ಸಿಡಿದ ಕನ್ನಡ ಚಿತ್ರರಂಗ
Team Udayavani, Sep 14, 2021, 1:21 PM IST
ಬೆಂಗಳೂರು: ಇಂದು ಆಚರಿಸಲಾಗುತ್ತಿರುವ ರಾಷ್ಟ್ರೀಯ ಹಿಂದಿ ದಿವಸ್ ವಿರುದ್ಧ ಕನ್ನಡ ಚಿತ್ರರಂಗದ ನಟರು ಹಾಗೂ ನಿರ್ದೇಶಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಟ ಡಾಲಿ ಧನಂಜಯ್ ಟ್ವೀಟ್ ಮಾಡಿ, ಎಲ್ಲಾ ಭಾಷೆ ಗೌರವಿಸುತ್ತೇವೆ. ಆದರೆ, ಯಾವುದೇ ಭಾಷೆಯ ಹೇರಿಕೆ ಸಲ್ಲದು. ಹಿಂದಿಯನ್ನಾಗಲೀ, ಇಂಗ್ಲಿಷ್ ನ್ನಾಗಲೀ ಎಲ್ಲರೂ ಕಲಿಯಬೇಕು ಅನ್ನುವಂಥ ಅವಿವೇಕ ಮತ್ತೊಂದಿಲ್ಲ. ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದು ದಬ್ಬಾಳಿಕೆಯ ಸೂಚನೆಯಲ್ಲದೆ ಮತ್ತೇನು? ಎಂದು ಧನಂಜಯ್ ಪ್ರಶ್ನಿಸಿದ್ದಾರೆ.
#StopHindiImposition pic.twitter.com/DOvgsdtUgs
— Dhananjaya (@Dhananjayaka) September 14, 2021
ಇನ್ನು ಹಿಂದಿ ಹೇರಿಕೆಯನ್ನು ವಿರೋಧಿಸಿರುವ ನಿರ್ದೇಶಕ ಸಿಂಪಲ್ ಸುನಿ, ಭಾರತದ ವೈಶಿಷ್ಟ್ಯತೆಯೇ “ವಿವಿಧತೆಯಲ್ಲಿ ಏಕತೆ” ಹಲವಾರು ವೇಶ,,ಭಾಷೆ, ಭಕ್ಷ್ಯಭೋಜನ, ಆಟನೋಟ, ಸಂಸ್ಕೃತಿ, ಸಂಪ್ರದಾಯ ಇದ್ದರೂ ಒಂದಾಗಿರುವ ಹೆಗ್ಗಳಿಕೆ ನಮ್ಮದು. ಹೀಗಿರುವಾಗ ಒಂದೇ ಭಾಷೆಯನ್ನು ಹೇರುವುದು ತಪ್ಪು ಎನ್ನುವುದು ನನ್ನ ಅಭಿಪ್ರಾಯ. ಅವರವರ ರಾಜ್ಯದಲ್ಲಿ ಆ ಮಣ್ಣಿನ ಮಾತೃಭಾಷೆಗೆ ಪ್ರಥಮ ಸ್ಥಾನವಿರಬೇಕು ಎಂದು ಸುನಿ ಆಗ್ರಹಿಸಿದ್ದಾರೆ.
ಭಾರತದ ವೈಶಿಷ್ಟ್ಯತೆಯೇ “ವಿವಿಧತೆಯಲ್ಲಿ ಏಕತೆ” ಹಲವಾರು ವೇಶ,,ಭಾಷೆ,,ಭಕ್ಷ್ಯಭೋಜನ,, ಆಟನೋಟ,, ಸಂಸ್ಕೃತಿ,, ಸಂಪ್ರದಾಯ ಇದ್ದರೂ ಒಂದಾಗಿರುವ ಹೆಗ್ಗಳಿಕೆ ನಮ್ಮದು..
ಹೀಗಿರುವಾಗ ಒಂದೇ ಭಾಷೆಯನ್ನು ಹೇರುವುದು ತಪ್ಪು ಅಭಿಪ್ರಾಯ ..
ಅವರವರ ರಾಜ್ಯದಲ್ಲಿ ಆ ಮಣ್ಣಿನ ಮಾತೃಭಾಷೆಗೆ ಪ್ರಥಮಸ್ಥಾನವಿರಬೇಕು..#StopHindiImposition— ಸುನಿ/SuNi (@SimpleSuni) September 14, 2021
ಇನ್ನು ಹಿಂದಿ ದಿವಸ್ ವಿರುದ್ಧ ಕರ್ನಾಟಕದಲ್ಲಿಂದು ಕರಾಳ ದಿನ ಆಚರಿಸಲಾಗುತ್ತಿದೆ. ನಿನ್ನೆಯಷ್ಟೆ ಮಾಜಿ ಸಿಎಂ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ. ಕುಮಾರ ಸ್ವಾಮಿ ಅವರೂ ಕೂಡ ಹಿಂದಿ ಹೇರಿಕೆ ವಿರುದ್ಧ ಗುಡುಗಿದ್ದರು. ಒತ್ತಾಯದಿಂದ ಯಾವುದೇ ಭಾಷೆ ಹೇರುವುದು ತಪ್ಪು, ಇದರ ಪರಿಣಾಮ ನೀವು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸೆಪ್ಟೆಂಬರ್ 14 ರಂದು ಕೇಂದ್ರ ಸರ್ಕಾರದ ವತಿಯಿಂದ ಆಚರಿಸುವ ‘ಹಿಂದಿ ದಿವಸ’ ಆಚರಣೆ ವಿರೋಧಿಸಿ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.#hindidiwas2021 #StopHindiImposition pic.twitter.com/1Xr6ADkqmT
— Janata Dal Secular (@JanataDal_S) September 13, 2021
ಇನ್ನು ಟ್ವಿಟರ್ ನಲ್ಲಿಯೂ ಹಿಂದಿ ಹೇರಿಕೆ ವಿರುದ್ಧ ಅಭಿಯಾನ ಶುರುವಾಗಿದೆ. ಈ ಅಭಿಯಾನಕ್ಕೆ ಸಾಕಷ್ಟು ಜನರ ಬೆಂಭಲ ಕೂಡ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿಂದು ಹಲವು ಕನ್ನಡಪರ ಸಂಘಟನೆಗಳು ಹಿಂದಿ ದಿವಸ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ