ತೆರೆಗೆ ಆರು, ಅದರಲ್ಲಿ ಗೆಲ್ಲೋರು ಯಾರು?


Team Udayavani, Dec 5, 2019, 12:20 PM IST

Babru-Kannada

ಹೊಸ ವರ್ಷ ಶುರುವಾಗಲು ಇನ್ನೇನು ಮೂರು ವಾರಗಳು ಬಾಕಿ ಉಳಿದಿವೆ. ಹೀಗಾಗಿ, ಈ ವರ್ಷವೇ ತಮ್ಮ ಚಿತ್ರಗಳನ್ನು ಬಿಡಗುಡೆ ಮಾಡಬೇಕು ಎಂಬ ಕಾರಣಕ್ಕೆ ಈಗಾಗಲೇ ಹಲವು ಕನ್ನಡ ಚಿತ್ರಗಳು ಬಿಡುಗಡೆಗೆ ಸಾಲುಗಟ್ಟಿವೆ. ಕಳೆದ ವಾರವನ್ನು ಸೂಕ್ಷ್ಮವಾಗಿ ಗಮನಿಸಿದರೆ, ಬರೋಬ್ಬರಿ
ಹತ್ತು ಚಿತ್ರಗಳು ಬಿಡುಗಡೆಯಾಗಿದ್ದವು. ಈ ವಾರವೂ ಸಹ ಆರು ಚಿತ್ರಗಳು ಚಿತ್ರಮಂದಿರಕ್ಕೆ ಲಗ್ಗೆ ಇಡುತ್ತಿವೆ.

ಹೌದು, ಹಾಗೆ ನೋಡಿದರೆ, ಈ ವಾರ ಬಿಡುಗಡೆಯಾಗುತ್ತಿರುವ ಆರು ಚಿತ್ರಗಳ ಪೈಕಿ “ಕಥಾ
ಸಂಗಮ’ ಚಿತ್ರವನ್ನು ಹೊರತುಪಡಿಸಿದರೆ, ಬಹುತೇಕ ಹೊಸಬರ ಚಿತ್ರಗಳೇ ಪ್ರೇಕ್ಷಕರ ಮುಂದೆ ಬರುತ್ತಿವೆ.

ರಿಷಭ್‌ಶೆಟ್ಟಿ ಅವರ ಬ್ಯಾನರ್‌ನಲ್ಲಿ ತಯಾರಾಗಿರುವ “ಕಥಾ ಸಂಗಮ’ ಚಿತ್ರ ಒಂದಷ್ಟು ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಕಾರಣ, ಏಳು ಕಥೆಗಳನ್ನು ಹೊಂದಿರುವ ಚಿತ್ರ. ಅಷ್ಟೇ ಅಲ್ಲ, ಏಳು ಜನ ನಿರ್ದೇಶಕರು, ಏಳು ಜನ ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ. ಒಂದೊಂದು ಕಥೆ ಕೂಡ ಹೊಸದೊಂದು ವಿಷಯ ಹೇಳುವ ಮೂಲಕ ನೋಡುಗರನ್ನು ಗೆಲ್ಲುತ್ತವೆ ಎಂಬ ನಂಬಿಕೆ ಚಿತ್ರತಂಡದ್ದು. ಹೊಸ ಪ್ರಯೋಗದ ಈ ಪ್ರಯತ್ನದಲ್ಲಿ ಪ್ರಕಾಶ್‌ ಬೆಳವಾಡಿ, ಹರಿಪ್ರಿಯಾ, ರಾಜ್‌ ಬಿ ಶೆಟ್ಟಿ, ಸೇರಿದಂತೆ ಅನೇಕ ನಟರು ಅಭಿನಯಿಸಿದ್ದಾರೆ.

ಇನ್ನು, ‘ಅಳಿದು ಉಳಿದವರು’ ಚಿತ್ರದಲ್ಲಿ ಆಶು ಬೇದ್ರ ಮತ್ತು ಸಂಗೀತಾ ಭಟ್‌ ನಟಿಸಿದ್ದಾರೆ. ಅರವಿಂದ್‌ ಶಾಸ್ತ್ರಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದೊಂದು ಸಸ್ಪೆನ್ಸ್‌ -ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ “ಲೂಸಿಯಾ’ ಖ್ಯಾತಿಯ ನಿರ್ದೇಶಕ ಪವನ್‌ ಕುಮಾರ್‌ ಕೂಡ ಒಂದು ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.

ಉಳಿದಂತೆ ಹಾಸ್ಯ ಕಲಾವಿದ ಧರ್ಮಣ್ಣ ಹಾಗು ಇತರರು ನಟಿಸಿದ್ದಾರೆ. ಬಹುತೇಕ ಹೊಸಬರೇ ಸೇರಿ ಮಾಡಿರುವ “ಐ1′ ಚಿತ್ರ ಕೂಡ ತೆರೆಗೆ ಬರುತ್ತಿದ್ದು, ಇದು ಸಹ ಸಸ್ಪೆನ್ಸ್‌ -ಥ್ರಿಲ್ಲರ್‌ ಕಥಾಹಂದರ ಹೊಂದಿದೆ.

ಚಿತ್ರದಲ್ಲಿ ಹೊಸ ಪ್ರತಿಭೆಗಳಾದ ಕಿಶೋರ್‌, ಧೀರಜ್‌ ಪ್ರಸಾದ್‌, ರಂಜನ್‌ ಅಭಿನಯಿಸಿದ್ದಾರೆ. ಚಿತ್ರಕ್ಕೆ ಎಸ್‌.ರಾಜಕುಮಾರ್‌ ನಿರ್ದೇಶಕರು. ಶೈಲಜಾ ಪ್ರಕಾಶ್‌ ನಿರ್ಮಾಣವಿದೆ. ಇದರೊಂದಿಗೆ ಹಿರಿಯ ನಿರ್ದೇಶಕ ದಿನೇಶ್‌ ಬಾಬು ಅವರ ನಿರ್ದೇಶನದ “ಹಗಲು ಕನಸು’ ಚಿತ್ರ ಕೂಡ
ಬರುತ್ತಿದೆ. ಆನಂದ್‌ ನಾಯಕರಾದರೆ, ಸನಿಹಾ ಯಾದವ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಸುಮನ್‌ ನಗರ್‌ಕರ್‌ ನಿರ್ಮಾಣ ಮತ್ತು ನಟನೆಯ “ಬಬ್ರೂ’ ಚಿತ್ರ ಕೂಡ ಈ ವಾರ ತೆರೆಗೆ ಬರುತ್ತಿದ್ದು, ಈ ಚಿತ್ರ ಬಹುತೇಕ ಯುಎಸ್‌ಎನಲ್ಲೇ ಚಿತ್ರೀಕರಣಗೊಂಡಿದೆ. ಸುಜಯ್‌ ರಾಮಯ್ಯ ನಿರ್ದೇಶನದ ಈ ಚಿತ್ರ ಒಂದು ಜರ್ನಿ ಸುತ್ತ ಸಾಗಲಿದೆ. ಚಿತ್ರದಲ್ಲಿ “ಬಬ್ರೂ’ ಎಂಬ ಕಾರು ಕೂಡ
ಪ್ರಮುಖ ಪಾತ್ರ ವಹಿಸಿದೆ. ಚಿತ್ರದಲ್ಲಿ ಮಾಹಿ ಹಿರೇಮಠ, ಸನ್ನಿ, ಗಾನಭಟ್‌ ಸೇರಿದಂತೆ ಹಲವರು ನಟಿಸಿದ್ದಾರೆ. “19 ಏಜ್‌ ನಾನ್ಸೆನ್ಸ್‌’ ಎಂಬ ಇನ್ನೊಂದು ಚಿತ್ರದಲ್ಲೂ ಹೊಸಬರೇ ತುಂಬಿದ್ದಾರೆ.

ಗಿಣಿ ನಿರ್ದೇಶನದ ಈ ಚಿತ್ರದಲ್ಲಿ ಮನುಶ್‌ ಹೀರೋ. ಮಧುಮಿತ ನಾಯಕಿಯಾಗಿದ್ದಾರೆ. ಲೋಕೇಶ್‌ ಚಿತ್ರದ ನಿರ್ಮಾಪಕರು. ಇದೊಂದು ಟೀನೇಜ್‌ ಸ್ಟೋರಿಯಾಗಿದ್ದು, ಎಲ್ಲಾ ಅಂಶಗಳನ್ನೂ ಒಳಗೊಂಡಿದೆ ಎಂಬುದು ಚಿತ್ರತಂಡದ ಮಾತು.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.