ಟಾಲಿವುಡ್‌ ಕಡೆಗೆ ಚಂದನವನದ “ಬಸಣ್ಣಿ’

ರವಿತೇಜಾ ಚಿತ್ರದಲ್ಲಿ ತಾನ್ಯಾ ಹೋಪ್‌

Team Udayavani, Jul 10, 2019, 3:03 AM IST

tanya

ಕನ್ನಡ ಚಿತ್ರರಂಗದಲ್ಲಿ ಮಿಂಚುವ ನಟಿಯರು ಇತ್ತೀಚೆಗೆ ತಮಿಳು, ತೆಲುಗು ಚಿತ್ರರಂಗದಲ್ಲೂ ನಿಧಾನವಾಗಿ ಬೇಡಿಕೆ ಪಡೆದುಕೊಳ್ಳುತ್ತಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ, ಶ್ರದ್ಧಾ ಶ್ರೀನಾಥ್‌, ಶಾನ್ವಿ ಶ್ರೀವಾಸ್ತವ್‌ ಹೀಗೆ ಸಾಕಷ್ಟು ಹೆಸರುಗಳು ಇರುವಾಗ ಈಗ ಈ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಗುತ್ತಿದೆ. ಆ ಹೆಸರೇ ತಾನ್ಯಾ ಹೋಪ್‌.

ಕನ್ನಡ ಚಿತ್ರರಂಗದಲ್ಲಿ ತಾನ್ಯಾ ಹೋಪ್‌ ಅನ್ನುವುದಕ್ಕಿಂತ ಬಸಣ್ಣಿ ಅಂದ್ರೆ ಅನೇಕರಿಗೆ ಈ ಹುಡುಗಿ ಯಾರು ಅಂಥ ಥಟ್ಟನೆ ನೆನಪಾಗುತ್ತದೆ. “ಯಜಮಾನ’ ಚಿತ್ರದ “ಬಸಣ್ಣಿ ಬಾ…’ ಹಾಡಿಗೆ ಹೆಜ್ಜೆ ಹಾಕಿ ಸಿನಿಪ್ರಿಯರ ಮನಗೆದ್ದಿರುವ ಬಸಣ್ಣಿ ಉರೂಫ್ ತಾನ್ಯಾ ಹೋಪ್‌ ಕನ್ನಡದ ಜೊತೆ ಜೊತೆಗೇ ನಿಧಾನವಾಗಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲೂ ಉತ್ತಮ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ.

“ಉದ್ಘರ್ಷ’, “ಯಜಮಾನ’ ಮತ್ತು “ಅಮರ್‌’ ಚಿತ್ರಗಳ ಬಳಿಕ ಕನ್ನಡ ಮಾತ್ರವಲ್ಲದೆ ಅಕ್ಕಪಕ್ಕದ ಚಿತ್ರರಂಗದಿಂದಲೂ ತಾನ್ಯಾಗೆ ಒಳ್ಳೆಯ ಅವಕಾಶಗಳು ಬರುತ್ತಿವೆ. ಸದ್ಯ ತಾನ್ಯಾ ಹೋಮ್‌, ಕನ್ನಡದಲ್ಲಿ ಚಿರಂಜೀವಿ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ ಆ್ಯಕ್ಷನ್‌ ಚಿತ್ರ “ಖಾಕಿ’ಯಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಇದರ ಬೆನ್ನಲ್ಲೇ ತಾನ್ಯಾ ತೆಲುಗು ಚಿತ್ರವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಕೂಡ ಹೊರಬಿದ್ದಿದೆ. ಹೌದು, ಚಿತ್ರರಂಗದ ಮೂಲಗಳ ಪ್ರಕಾರ ತಾನ್ಯಾ ಹೋಪ್‌ ತೆಲುಗು ನಟ ರವಿ ತೇಜಾ ಅಭಿನಯದ, ಆನಂದ್‌ ವಿ.ಐ ಆಕ್ಷನ್‌-ಕಟ್‌ ಹೇಳುತ್ತಿರುವ “ಡಿಸ್ಕೋ ರಾಜ’ ಚಿತ್ರದಲ್ಲಿ ರಿಸರ್ಚ್‌ ಸೈಂಟಿಸ್ಟ್‌ ಆಗಿ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.

ಸದ್ಯ “ಡಿಸ್ಕೋ ರಾಜ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಶುರುವಾಗಿದ್ದು, ಎರಡನೇ ಹಂತದ ಚಿತ್ರೀಕರಣದಲ್ಲಿ ತಾನ್ಯಾ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ಚಿತ್ರದಲ್ಲಿ ತಾನ್ಯಾ ಹೋಪ್‌ ಜೊತೆ ಕನ್ನಡದ ಮತ್ತೂಬ್ಬ ನಟಿ ನಭಾ ನಟೇಶ್‌ ಕೂಡ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದಲ್ಲಿ ಒಟ್ಟು ಮೂವರು ನಾಯಕಿಯರಿದ್ದು, ಸದ್ಯ ಇಬ್ಬರು ನಾಯಕಿಯರ ಹೆಸರು ಫೈನಲ್‌ ಆಗಿದ್ದು, ಇನ್ನೊಬ್ಬ ನಾಯಕಿ ಯಾರೆಂದು ಇನ್ನಷ್ಟೆ ಗೊತ್ತಾಗಬೇಕಿದೆ. ಇಲ್ಲಿಯವರೆಗೆ ಅಲ್ಲೊಂದು ಇಲ್ಲೊಂದು ತೆಲುಗು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ತಾನ್ಯಾಗೆ ಇದು ನಾಲ್ಕನೇ ತೆಲುಗು ಚಿತ್ರವಾಗಿದ್ದು, ಚಿತ್ರದಲ್ಲಿ ತಾನ್ಯಾ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆಯಂತೆ.

ಆದರೆ ಈ ಚಿತ್ರದ ಬಗ್ಗೆ ಹೆಚ್ಚೇನು ಗುಟ್ಟು ಬಿಟ್ಟುಕೊಡದ ಚಿತ್ರತಂಡ, ತಾನ್ಯಾ ಅವರ ಪಾತ್ರ ತೆರೆಮೇಲೆ ನೋಡಿ ನೋಡಬೇಕು ಎಂದಿದೆ. ಒಟ್ಟಾರೆ ಕನ್ನಡ ಸಿನಿಪ್ರಿಯರ ಮನಗೆದ್ದಿರುವ ಬಸಣ್ಣಿ ಎಷ್ಟರ ಮಟ್ಟಿಗೆ ತೆಲುಗು ಮಂದಿಯ ಮನಗೆಲ್ಲಲು ಯಶಸ್ವಿಯಾಗುತ್ತಾರೆ ಅನ್ನೋದು “ಡಿಸ್ಕೋ ರಾಜ’ ತೆರೆಗೆ ಬಂದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.