Sangamesh Upase: ಹಸಿವು ಮತ್ತು ಹೋರಾಟದ ಸುತ್ತ ‘ರಂಜಾನ್’


Team Udayavani, Apr 8, 2023, 6:33 PM IST

sangamesh upase’s ramzan movie

ಹಾಸ್ಯ ಕಲಾವಿದನಾಗಿ ಪ್ರೇಕ್ಷಕರನ್ನು ರಂಜಿಸಿದ್ದ ನಟ ಸಂಗಮೇಶ್‌ ಉಪಾಸೆ, ಈ ಬಾರಿ ಗಂಭೀರ ವಿಷಯವೊಂದನ್ನು ಇಟ್ಟುಕೊಂಡು, ಮನಮುಟ್ಟುವ ಪಾತ್ರವೊಂದರ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ಸಂಗಮೇಶ್‌ ಉಪಾಸೆ ಸದ್ಯ “ರಂಜಾ ನ್‌’ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದು, ಈಗಾಗಲೇ ತನ್ನೆಲ್ಲ ಕೆಲಸಗಳನ್ನು ಪೂರ್ಣಗೊಳಿಸಿರುವ “ರಂಜಾನ್‌’ ಇದೇ ಏ. 21ಕ್ಕೆ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ.

ಇನ್ನು ಬಹುಕಾಲದ ನಂತರ ಗಂಭೀರ ಚಿತ್ರ ಮತ್ತು ಪಾತ್ರದ ಮೂಲಕ ಬರುತ್ತಿರುವ ಸಂಗಮೇಶ್‌ ಉಪಾಸೆ, ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡುತ್ತಾರೆ. “ಈ ಸಿನಿಮಾದ ಹೆಸರು “ರಂಜಾನ್‌’ ಅಂತಿದ್ದರೂ, ಇದು ಯಾವುದೇ ಧರ್ಮದ ವಿಷಯಕ್ಕೆ ಸೀಮಿತವಾದ ಸಿನಿಮಾವಲ್ಲ. “ರಂಜಾನ್‌’ ಎಂಬ ಹೆಸರಿನ ಬಡ ಮುಸ್ಲಿಂ ರೈತನೊಬ್ಬ ಹಸಿವಿನ ವಿರುದ್ಧ ಮತ್ತು ಭೂಮಿಯನ್ನು ಕಬಳಿಸಲು ಹೊರಟ ಸರ್ಕಾರದ ವಿರುದ್ಧ ಹೇಗೆ ಹೋರಾಡುತ್ತಾನೆ ಎಂಬುದೇ “ರಂಜಾನ್‌’ ಸಿನಿಮಾದ ಕಥೆಯ ಒಂದು ಎಳೆ. ಈ ಸಿನಿಮಾದಲ್ಲಿ “ರಂಜಾನ್‌’ ಎಂಬ ಬಡ ಮುಸ್ಲಿಂ ರೈತನ ಪಾತ್ರದಲ್ಲಿ ನಾನು ಅಭಿನಯಿಸಿದ್ದೇನೆ. ತನ್ನದೇ ಆದ ಅಂಗೈ ಅಗಲದ ಭೂಮಿಯನ್ನು ನಂಬಿ ಪುಟ್ಟ ಸಂಸಾರ ಕಟ್ಟಿಕೊಂಡು, ಬದುಕು ನಡೆಸಲು ಹರಸಾಹಸ ಪಡುತ್ತಿರುವ “ರಂಜಾನ್‌’ನ ಬದುಕಿನಲ್ಲಿ ಏನೇನು ನಡೆಯುತ್ತದೆ ಎನ್ನುವುದರ ಸುತ್ತ ಇಡೀ ಸಿನಿಮಾ ಸಾಗುತ್ತದೆ’ ಎಂದು ತಮ್ಮ ಚಿತ್ರ ಮತ್ತು ಪಾತ್ರ ಪರಿಚಯ ಮಾಡಿಕೊಡುತ್ತಾರೆ ಸಂಗಮೇಶ್‌.

“ಫ‌ಕೀರ್‌ ಮಹಮ್ಮದ್‌ ಕಟಾ³ಡಿ ಅವರ “ನೋಂಬು’ ಕಥೆ ಆಧಾರಿಸಿ, ಈ ಸಿನಿಮಾ ಮಾಡಲಾಗಿದೆ. ಹಸಿವು, ಬಡತನ, ಹೋರಾಟ, ಶಿಕ್ಷಣ, ಆರೋಗ್ಯ, ರೈತರ ಸಮಸ್ಯೆ ಹೀಗೆ ಇಂದಿನ ಸಮಕಾಲಿನ ಸಮಾಜದಲ್ಲಿ ಕಾಣುವ ಹಲವು ಅಂಶಗಳು ಈ ಸಿನಿಮಾದಲ್ಲಿವೆ. ಮಾನವೀಯ ಮೌಲ್ಯಗಳು, ದಾರ್ಮಿಕ ಸಾಮರಸ್ಯ ಮತ್ತು ಸಾಮಾಜಿಕ ಕಳಕಳಿಯ ವಿಷಯ ಗಳನ್ನು ಇಟ್ಟುಕೊಂಡು ಮಾಡಲಾದ ಈ ಸಿನಿಮಾ ಎಲ್ಲ ವರ್ಗದವರೂ ನೋಡುವಂತಿದೆ’ ಎಂಬುದು ಸಂಗಮೇಶ್‌ ಮಾತು.

ಇನ್ನು “ರಂಜಾನ್‌’ ಸಿನಿಮಾದಲ್ಲಿ ಸಂಗಮೇಶ್‌ ಉಪಾಸೆ ಅವರೊಂದಿಗೆ ಪ್ರೇಮಾವತಿ ಉಪಾಸೆ, ಬೇಬಿ ಈಶಾನಿ ಉಪಾಸೆ, ಮಾ. ವೇದಿಕ್‌, ಭಾಸ್ಕರ್‌, ಮಾ.ನೀಲ್,  ಜಯಲಕ್ಷ್ಮೀ ಮಧುರಾಜ್‌, ಮಂಜುನಾಥ್‌ ಕರುವಿನಕಟ್ಟೆ, ಆರ್ಯನ್‌, ಆದ್ಯತಾ ಭಟ್‌ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ಕಲಾವಿದರು ವಿವಿಧ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಪಂಚಾಕ್ಷರಿ ಸಿ. ನಿರ್ದೇಶನದಲ್ಲಿ ಮೂಡಿ ಬಂದಿರುವ “ರಂಜಾನ್‌’ ಸಿನಿಮಾವನ್ನು ಮಡಿವಾಳಪ್ಪ ಎಂ. ಗೋಗಿ ನಿರ್ಮಾಣ ಮಾಡಿದ್ದಾರೆ. ಮಂಗಳೂರು, ಉಡುಪಿ, ಕಟಾಡಿ, ಗುಲ್ವಾಡಿ, ಕುಂದಾಪುರ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.