ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸಂಕ್ರಾಂತಿ ಸಂಭ್ರಮ: ಸೆಟ್ಟೇರಿದವು ಹಲವು ಚಿತ್ರಗಳು


Team Udayavani, Jan 15, 2022, 9:04 AM IST

ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಸಂಕ್ರಾಂತಿ ಸಂಭ್ರಮ: ಸೆಟ್ಟೇರಿದವು ಹಲವು ಚಿತ್ರಗಳು

ಒಮಿಕ್ರಾನ್‌ ಆತಂಕದಿಂದ ನಡುವೆಯೇ ಹೊಸವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸ್ಯಾಂಡಲ್‌ವುಡ್‌ ಸಡಗರಿಂದ ಸಂಭ್ರಮಿಸಿದೆ. ಕಳೆದ ಎರಡು ವರ್ಷಗಳಂತೆ ಈ ಬಾರಿಯೂ ಕೋವಿಡ್‌ ಆತಂಕ, ಸ್ಯಾಂಡಲ್‌ವುಡ್‌ನ‌ ಅದ್ಧೂರಿ ಸಂಕ್ರಾಂತಿ ಸಂಭ್ರಮಕ್ಕೆ ಬ್ರೇಕ್‌ ಹಾಕಿದ್ದರಿಂದ ಬಹುತೇಕ ಸ್ಟಾರ್, ಕಲಾವಿದರು, ನಿರ್ಮಾಪಕ-ನಿರ್ದೇಶಕರು, ತಂತ್ರಜ್ಞರು ಸರಳವಾಗಿ ಸಂಕ್ರಾಂತಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇನ್ನು ವಾಡಿಕೆಯಂತೆ ಈ ಬಾರಿಯೂ ಸಂಕ್ರಾಂತಿ ಹಬ್ಬಕ್ಕೆ ಒಂದಷ್ಟು ಹೊಸ ಸಿನಿಮಾಗಳು ಸರಳವಾಗಿ ಸೆಟ್ಟೇರಿದರೆ, ಇನ್ನೊಒಂದಷ್ಟು ಸಿನಿಮಾಗಳು ತಮ್ಮ ಟೈಟಲ್‌, ಫ‌ಸ್ಟ್ ಲುಕ್‌ ಪೋಸ್ಟರ್‌, ಟೀಸರ್‌-ಟ್ರೇಲರ್‌, ಸಾಂಗ್ಸ್‌ ಬಿಡುಗಡೆ ಮಾಡಿವೆ. ಈ ಸಂಕ್ರಾಂತಿ ಹಬ್ಬಕ್ಕೆ ಅಪ್‌ಡೇಟ್‌ ನೀಡಿದ ಒಂದಷ್ಟು ಹೊಸ ಸಿನಿಮಾಗಳು ಇಲ್ಲಿವೆ…

ಉತ್ತರ ಪ್ರದೇಶದಲ್ಲಿ ಭೈರವ ಸೆಟ್ಟೇರಿದ

“ಕಮರೊಟ್ಟು ಚೆಕ್‌ಪೋಸ್ಟ್‌’ ಚಿತ್ರದ ಖ್ಯಾತಿಯ ಸನತ್‌ ಮತ್ತು “ಒಂದು ಮೊಟ್ಟೆ ಖ್ಯಾತಿಯ’ ಶೈಲಶ್ರೀ ಮುಲ್ಕಿ ಜೋಡಿಯಾಗಿ ಅಭಿನಯಿಸುತ್ತಿರುವ ಹೊಸಚಿತ್ರ “ಬೈರವ’ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಸೆಟ್ಟೇರಿದೆ. ಉತ್ತರ ಪ್ರದೇಶದ ಗೋವಿಂದಪುರದ ಹನುಮಂತನ ಸನ್ನಿಧಿಯಲ್ಲಿ “ಭೈರವ’ ಚಿತ್ರದ ಮುಹೂರ್ತ ನೆರವೇರಿದೆ. ರಾಮತೇಜ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ ಕ್ಲಾಪ್‌ ಮಾಡಿದರೆ, ವೈಭವ್‌ ಬಜಾಜ್‌ ಹಾಗೂ ಹನಿ ಚೌಧರಿ (ವಿಸಿಕಾ ಫಿಲಂ ಸಂಸ್ಥೆ) ಕ್ಯಾಮೆರಾ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ಮಾಡಿದರು. ಉತ್ತರ ಪ್ರದೇಶದ ಬಿಜೆಪಿ ಮುಖಂಡ ಡಾ. ಮಂಜು ಶಿವಾಜ್‌, ವಕೀಲ ರಾಜಕುಮಾರ ಗುಪ್ತ, ಡಾ. ಸಂಜೀವ ಚೌಧರಿ ಸೇರಿದಂತೆ ಅನೇಕರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಚಿತ್ರದಲ್ಲಿ ಉಮೇಶ ಸಕ್ಕರೆನಾಡು ಖಳನಾಯಕನಾಗಿ ಅಭಿನಯಿಸುತ್ತಿದ್ದು, ಚಿತ್ರಕ್ಕೆ ಸಂದೀಪ್‌ ಫ್ರೆಡ್ರಿಕ್‌ ಛಾಯಾಗ್ರಹಣವಿದೆ.

ವಾಮನ ಅವತಾರದಲ್ಲಿ ಧನ್ವೀರ್‌

“ಬಜಾರ್‌’ ಮತ್ತು “ಬೈ ಟು ಲವ್‌’ ಸಿನಿಮಾಗಳ ಬಳಿಕ ಇತ್ತೀಚೆಗಷ್ಟೇ ನಟ ಧನ್ವೀರ್‌ ತಮ್ಮ ಮೂರನೇ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಈಗ ಧನ್ವೀರ್‌ ಅಭಿನಯಿಸುತ್ತಿರುವ ಈ ಸಿನಿಮಾಕ್ಕೆ ಚಿತ್ರತಂಡ “ವಾಮನ’ ಎಂದು ಹೆಸರಿಟ್ಟಿದೆ. ಇದೇ ಸಂಕ್ರಾಂತಿಯಂದು ಈ ಸಿನಿಮಾದ ಟೈಟಲ್‌ ಅನೌನ್ಸ್‌ ಆಗಿದ್ದು, ಜೊತೆಗೆ ಚಿತ್ರತಂಡ “ವಾಮನ’ನ ಫ‌ಸ್ಟ್‌ಲುಕ್‌ ಪೋಸ್ಟರ್‌ ಮತ್ತು  ಟೈಟಲ್‌ ಮೋಶನ್‌ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿದೆ. ಮೇಲ್ನೋಟಕ್ಕೆ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯ ಮಾಫಿಯಾ ಕಥಾಹಂದರದ ಸಿನಿಮಾದಂತೆ ಕಾಣುವ “ವಾಮನ’ನ ಚಿತ್ರದ ಪೋಸ್ಟರ್‌ನಲ್ಲಿ ನಟ ಧನ್ವೀರ್‌ ಕೈಯಲ್ಲಿ ಚಾಕು ಹಿಡಿದು ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಈಗಾಗಲೇ ಕನ್ನಡ ಮತ್ತು ತೆಲುಗಿನ ಹಲವು ಚಿತ್ರಗಳಿಗೆ ಸ್ಕ್ರಿಪ್ಟ್ರೈ ಟರ್‌ ಆಗಿ ಕೆಲಸ ಮಾಡಿದ ಅನುಭವವಿರುವ ಶಂಕರ್‌ ರಾಮನ್‌ ಈ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಪರಿಚಯವಾಗುತ್ತಿದ್ದಾರೆ. “ಈಕ್ವಿನಾಕ್ಸ್‌ ಗ್ಲೋಬಲ್‌ ಎಂಟರ್ಟೆನ್ಮೆಂಟ್ಸ್‌ ಪ್ರೊಡಕ್ಷನ್‌’ ಬ್ಯಾನರ್‌ನಲ್ಲಿ ಚೇತನ್‌ ಕುಮಾರ್‌ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ. ಸದ್ಯ ಟೈಟಲ್‌ ಪೋಸ್ಟರ್‌ನಲ್ಲಿ “ವಾಮನ’ನನ್ನು ಪರಿಚಯಿಸಿರುವ ಚಿತ್ರತಂಡ 2-3 ತಿಂಗಳಲ್ಲಿ ಚಿತ್ರೀಕರಣಕ್ಕೆ ಹೊರಡುವ ಯೋಚನೆಯಲ್ಲಿದೆ.

ಹೊಯ್ಸಳನಾಗಲು ಧನಂಜಯ್‌ ರೆಡಿ

ಸದ್ಯ “ಬಡವ ರಾಸ್ಕಲ್‌’ ಸಿನಿಮಾದ ಸಕ್ಸಸ್‌ ಖುಷಿಯಲ್ಲಿರುವ ನಟ ಡಾಲಿ ಧನಂಜಯ್‌ ಅವರ ಹೊಸಚಿತ್ರ ಇದೇ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅನೌನ್ಸ್‌ ಆಗಿದೆ. ಅಂದಹಾಗೆ, ಇದು ಧನಂಜಯ್‌ ಅಭಿನಯಿಸುತ್ತಿರುವ 25ನೇ ಚಿತ್ರವಾಗಿದ್ದು, ಈ ಹೊಸಚಿತ್ರಕ್ಕೆ “ಹೊಯ್ಸಳ’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಧನಂಜಯ್‌ ಮತ್ತೂಮ್ಮೆ ಖಾಕಿ ತೊಡಲಿದ್ದು, ಚಿತ್ರದ ಫ‌ಸ್ಟ್‌ಲುಕ್‌ ಪೋಸ್ಟರ್‌ ಕೂಡ ಬಿಡುಗಡೆಯಾಗಿದೆ. ಉತ್ತರ ಕರ್ನಾಟಕದ ದಿಟ್ಟ ಪೊಲೀಸ್‌ ಅಧಿಕಾರಿಯ ಸುತ್ತ ಚಿತ್ರ ನಡೆಯಲಿದ್ದು, ಚಿತ್ರದ ಬಹುತೇಕ ಚಿತ್ರೀಕರಣ ಬೆಳಗಾವಿ ಸುತ್ತಮುತ್ತ ನಡೆಯಲಿದೆ. ಈ ಚಿತ್ರಕ್ಕೆ ಎಸ್‌ .ಎಸ್‌ .ತಮನ್‌ ಸಂಗೀತ, ದೀಪು ಎಸ್‌. ಕುಮಾರ್‌ ಸಂಕಲನ, ಮಾಸ್ತಿ ಸಂಭಾಷಣೆ ಇದೆ.

ಇದನ್ನೂ ಓದಿ:ಸ್ಯಾಂಡಲ್ ವುಡ್ ಬೆಡಗಿ Vainidhi Jagdish ಟ್ರೆಂಡಿ ಲುಕ್ಸ್

ಹಿಂದೆ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ “ಗೀತಾ’ ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್‌ ನಾಗೇಂದ್ರ ಈ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ವಿಜಯ್‌ ಕಿರಗಂದೂರು ಅರ್ಪಿಸುತ್ತಿರುವ ಈ ಚಿತ್ರವನ್ನು ಕಾರ್ತಿಕ್‌ ಮತ್ತು ಯೋಗಿ ಜಿ. ರಾಜ್‌ ನಿರ್ಮಿಸುತ್ತಿದ್ದಾರೆ. ಏಪ್ರಿಲ್‌ ತಿಂಗಳಿನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಚಿತ್ರದ ಇತರ ಕಲಾವಿದರು ಮತ್ತುತಂತ್ರಜ್ಞರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಹೊರಬಂತು ಬನಾರಸ್‌ ಹೊಸ ಪೋಸ್ಟರ್‌

ರಾಜಕಾರಣಿ ಜಮೀರ್‌ ಅಹಮದ್‌ ಖಾನ್‌ ಪುತ್ರ ಝೈದ್‌ ಖಾನ್‌ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ “ಬನಾರಸ್‌’ ಚಿತ್ರದ ಮತ್ತೂಂದು ಹೊಸ ಪೋಸ್ಟರ್‌ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. “ಬನಾರಸ್‌’ ಚಿತ್ರದಲ್ಲಿ ಝೈದ್‌ ಖಾನ್‌ಗೆ ಸೋನಾಲ್‌ ಮಾಂಟೆರೊ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. “ನ್ಯಾಷನಲ್‌ ಖಾನ್ಸ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ತಿಲಕ್‌ ರಾಜ್‌ ಬಲ್ಲಾಳ್‌ ಬಹುಭಾಷೆಗಳಲ್ಲಿ ನಿರ್ಮಿಸುತ್ತಿರುವ “ಬನಾರಸ್‌’ ಚಿತ್ರಕ್ಕೆ ಜಯತೀರ್ಥ ನಿರ್ದೇಶನವಿದೆ. “ಬನಾರಸ್‌’ ಚಿತ್ರದ ಹಾಡುಗಳಿಗೆ ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಅದ್ವೆçತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ ಪ್ರಕಾಶ್‌ ಈ ಚಿತ್ರದ ಸಂಕಲನವಿದೆ. ಸದ್ಯ ಮಕರ ಸಂಕ್ರಾಂತಿಯ ಸಂದರ್ಭದಲ್ಲಿ “ಬನಾರಸ್‌’ ಹೊಸ ಪೋಸ್ಟರ್‌ ಅನಾವರಣಗೊಳಿಸುವ ಮೂಲಕ ಚಿತ್ರತಂಡ ಸಿನಿಪ್ರಿಯರಿಗೆ ಹಬ್ಬದ ಶುಭಾಶಯ ಹೇಳಿದೆ.

ಇದಲ್ಲದೆ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ವೇದಿಕಾ ಅಭಿನಯದ “ಹೋಮ್‌ ಮಿನಿಸ್ಟರ್‌’ ಚಿತ್ರದ ಪೋಸ್ಟರ್‌, ನಿರಂಜನ್‌ ಸುಧೀಂದ್ರ ಅಭಿನಯದ “ನಮ್ಮ ಹುಡುಗರು’ ಚಿತ್ರದ ಪೋಸ್ಟರ್‌, ಸೇರಿದಂತೆ ಹಲವು ಹೊಸ ಚಿತ್ರಗಳ ಟೈಟಲ್‌, ಫಸ್ಟ್ ಲುಕ್‌ ಪೋಸ್ಟರ್‌, ಟೀಸರ್‌, ಟ್ರೇಲರ್‌ ಮತ್ತು ಹಾಡುಗಳು, ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿ ಸ್ಯಾಂಡಲ್‌ವುಡ್‌ ಮಂದಿಯ ಸಂಭ್ರಮ ಇನ್ನಷ್ಟು ಹೆಚ್ಚಿಸಿದೆ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.