ಹೊಸಬರ “ಸಾರ್ವಜನಿಕರಲ್ಲಿ ವಿನಂತಿ” ಜೂನ್ 21ರಂದು ರಾಜ್ಯಾದ್ಯಂತ ಬಿಡುಗಡೆ!
Team Udayavani, Jun 10, 2019, 4:26 PM IST
ಬೆಂಗಳೂರು: ಕೃಪಾ ಸಾಗರ್ ಅವರ ಚೊಚ್ಚಲ ನಿರ್ದೇಶನದ “ ಸಾರ್ವಜನಿಕರಲ್ಲಿ ವಿನಂತಿ” ಚಿತ್ರ ಜೂನ್ 21ರಂದು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ತೆರೆಕಾಣಲು ಸಿದ್ಧವಾಗಿದೆ.
ಎರಡು ವರ್ಷಗಳ ಕಾಲ ಶ್ರಮಪಟ್ಟು ಈ ಪ್ರಯೋಗಾತ್ಮಕ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಹೊರಬರ ತಂಡ ಕೆಲಸ ಮಾಡಿರುವುದು ಇನ್ನೊಂದು ವಿಶೇಷವಾಗಿದೆ. ಮದನ್ ರಾಜಾ ಮತ್ತು ಅಮೃತಾ ಎಂಬ ಹೊಸ ಪ್ರತಿಭೆಗಳು ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಯಗೊಳ್ಳುತ್ತಿದ್ದಾರೆ.
ಈ ಚಿತ್ರದಲ್ಲಿ ಪೊಲೀಸ್ ಪಾತ್ರವೇ ಮುಖ್ಯ ಆಗಿರುವುದರಿಂದ ಈ ಚಿತ್ರವನ್ನು ಕರುನಾಡಿನ ಸಮಸ್ತ ಪೊಲೀಸ್ ಬಳಗಕ್ಕೆ ಅರ್ಪಿಸಿರುವುದಾಗಿ ನಿರ್ದೇಶಕ ಸಾಗರ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಸಿನಿಮಾದಲ್ಲಿ ಪೊಲೀಸರಿಗಾಗಿಯೇ ಒಂದು ಹಾಡನ್ನು ಖ್ಯಾತ ಗಾಯಕ ವಿಜಯ ಪ್ರಕಾಶ್ ಹಾಡಿದ್ದಾರೆ.
ಸಾರ್ವಜನಿಕರಲ್ಲಿ ವಿನಂತಿ ಚಿತ್ರದಲ್ಲಿ ಮಂಡ್ಯ ರಮೇಶ್, ರಮೇಶ್ ಪಂಡಿತ್ ಸೇರಿದಂತೆ ಇನ್ನಿತರರು ಅಭಿನಯಿಸಿದ್ದಾರೆ. ಚಿತ್ರದ ಟ್ರೈಲರ್ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ್ದು, ಸಿನಿಮಾವನ್ನು ಕೂಡಾ ವೀಕ್ಷಿಸುವ ಮೂಲಕ ಚಿತ್ರವನ್ನು ಯಶಸ್ವಿಗೊಳಿಸಬೇಕೆಂದು ಚಿತ್ರತಂಡ ವಿನಂತಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?