ಕನ್ನಡತಿ ಧನ್ಯಾಗೆ ಸಿಕ್ಕ ಸುವರ್ಣಾವಕಾಶ!


Team Udayavani, Dec 18, 2019, 2:30 PM IST

18-Decemebr-20

ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ ನಾಯಕನಾಗಿ ನಟಿಸಿರುವ ಚಿತ್ರ ಸಾರ್ವಜನಿಕರಿಗೆ ಸುವರ್ಣಾವಕಾಶ. ಅನೂಪ್ ರಾಮಸ್ವಾಮಿ ನಿರ್ದೇಶನ ಮಾಡಿರುವ ಈ ಚಿತ್ರ ಆರಂಭದಿಂದಲೇ ತನ್ನ ಶೀರ್ಷಿಕೆಯ ಮೂಲಕ ಗಮನ ಸೆಳೆದುಕೊಂಡಿತ್ತು. ಆ ನಂತರದಲ್ಲಿ ಹಾಡುಗಳು ಮತ್ತು ಟ್ರೇಲರ್‌ನೊಂದಿಗೆ ಈ ಚಿತ್ರ ಸಮಸ್ತ ಪ್ರೇಕ್ಷಕರನ್ನೂ ತನ್ನತ್ತ ಸೆಳೆದುಕೊಳ್ಳುವಲ್ಲಿ ಯಶ ಕಂಡಿದೆ. ಇದೇ ವಾರ ಬಿಡುಗಡೆಯಾಗುತ್ತಿರೋ ಈ ಸಿನಿಮಾ ಮೂಲಕ ಬಹುಭಾಷಾ ತಾರೆ ಧನ್ಯಾ ರಾಮಕೃಷ್ಣರಿಗೆ ತಮ್ಮ ತವರು ನೆಲಕ್ಕೆ ಮರಳುವ ಸುವರ್ಣಾವಕಾಶವೊಂದನ್ನು ಕಲ್ಪಿಸಿದೆ.

ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಧನ್ಯಾ ನಾಯಕಿಯಾಗಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಈ ಮೂಲಕವೇ ಅವರು ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಧನ್ಯಾ ಈಗಾಗಲೇ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿ ಮುಖ್ಯ ನಾಯಕಿಯಾಗಿ ಗುರುತಿಸಿಕೊಂಡಿರುವವರು. ಈಗ ಬಹುಭಾಷಾ ತಾರೆಯಾಗಿರೋ ಧನ್ಯಾ ಕನ್ನಡದವರೇ ಎಂಬ ವಿಚಾರ ಅನೇಕರಿಗೆ ಗೊತ್ತಿರಲಿಕ್ಕಿಲ್ಲ. ಧನ್ಯಾ ಮೂಲತಃ ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದು ಅಲ್ಲಿಯೇ ವಿದ್ಯಾಭ್ಯಾಸ ಪೂರೈಸಿಕೊಂಡಿದ್ದ ಅಪ್ಪಟ ಕನ್ನಡದ ಹುಡುಗಿ. ಅವರೀಗ ಈ ಸಿನಿಮಾ ಮೂಲಕ ಕನ್ನಡಿಗರನ್ನು ಮುಖಾಮುಖಿಯಾಗುವ ಖುಷಿಯಿಂದಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಪರಭಾಷಾ ನಟಿಯರ ಆಗಮನವಾಗುವುದೇನು ಹೊಸಾ ವಿಚಾರವಲ್ಲ. ಆದರೆ ಕನ್ನಡದವರೇ ಆಗಿದ್ದುಕೊಂಡು ಪರಭಾಷಾ ಚಿತ್ರರಂಗದಲ್ಲಿ ಮಿಂಚುತ್ತಲೇ ಕನ್ನಡಕ್ಕೆ ಆಗಮಿಸೋ ನಟಿಯರು ಇಲ್ಲವೇ ಇಲ್ಲ ಎಂಬಷ್ಟು ವಿರಳ. ಆ ಸಾಲಿಗೆ ಧನ್ಯಾ ಬಾಲಕೃಷ್ಣ ಸೇರಿಕೊಳ್ಳುತ್ತಾರೆ. ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದು, ಅಲ್ಲಿಯೇ ವಿದ್ಯಾಭ್ಯಾಸ ಪೂರೈಸಿಕೊಂಡಿದ್ದ ಧನ್ಯಾಗೆ ಕನ್ನಡದಲ್ಲಿಯೇ ನಾಯಕಿಯಾಗಿ ಪ್ರಸಿದ್ಧಿ ಪಡೆಯ ಬೇಕೆಂಬ ಹಂಬಲವಿತ್ತಂತೆ. ಆದರೆ ಅವರ ಮುಂದೆ ಅಚ್ಚರಿದಾಯಕವಾಗಿ ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ನಟಿಸೋ ಅವಕಾಶ ಕೂಡಿ ಬಂದಿತ್ತು.

ಹಾಗೆ ತಾನಾಗಿಯೇ ಬಂದ ಅವಕಾಶಗಳನ್ನು ಅನುಸರಿಸಿಕೊಂಡು ಹೊರಟಿದ್ದ ಧನ್ಯಾಗೆ ಮತ್ತೆಂದೂ ತಿರುಗಿ ನೋಡಲು ಅವಕಾಶವೇ ಸಿಗದಷ್ಟು ಸಿನಿಮಾಗಳು ಅರಸಿ ಬರಲಾರಂಭಿಸಿದ್ದವು. ಆದರೆ ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ಬೇಡಿಕೆಯ ನಟಿಯಾಗಿ ಗುರುತಿಸಿಕೊಂಡ ಮೇಲೆಯೂ ಕನ್ನಡದತ್ತ ಸೆಳೆತ ಮಾತ್ರ ಅವರಲ್ಲಿ ಕಡಿಮೆಯಾಗಿರಲಿಲ್ಲ. ತನ್ನ ಮಾತೃಭಾಷೆಯ ಸಿನಿಮಾಗಳಲ್ಲಿ ನಟಿಸಲು ಸಾಧ್ಯವಾಗಲಿಲ್ಲ ಎಂಬ ಕೊರಗು ಅವರಲ್ಲಿ ಇದ್ದೇ ಇತ್ತು. ಅದನ್ನು ಪರಿಹರಿಸುವಂತೆ ಅವರಿಗೆ ಸಾರ್ವಜನಿಕರಿಗೆ ಸುವರ್ಣಾವಕಾಶ ಸಿನಿಮಾ ನಾಯಕಿಯಾಗೋ ಅವಕಾಶ ಸಿಕ್ಕಿದೆ. ಅವರಿಲ್ಲಿ ಮಧ್ಯಮವರ್ಗದ ಹುಡುಗಿಯಾಗಿ ಚೆಂದದ ಪಾತ್ರದಲ್ಲಿ ನಟಿಸಿದ್ದಾರೆ. ಅದು ಈ ವಾರವೇ ನಿಮ್ಮೆಲ್ಲರ ಮುಂದೆ ಅನಾವರಣಗೊಳ್ಳಲಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.