“ಪರಿಮಳ ಲಾಡ್ಜ್’ನಲ್ಲಿ ಸತೀಶ್‌

ವಿಜಯ್‌ ಪ್ರಸಾದ್‌ ನಿರ್ದೇಶನದ ಲಾಡ್ಜ್ನಲ್ಲಿ ಬೀಡು ಬಿಟ್ಟ ಯೋಗಿ

Team Udayavani, Aug 29, 2019, 3:04 AM IST

parimala

ನಟ ಸತೀಶ್‌ ನೀನಾಸಂ ಇತ್ತೀಚೆಗಷ್ಟೇ “ಬ್ರಹ್ಮಚಾರಿ’ ಚಿತ್ರ ಮಾಡುತ್ತಿದ್ದಾರೆ ಎಂಬ ಸುದ್ದಿಯನ್ನು ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆ ಸಿನಿಮಾ ಇನ್ನೇನು ಪೂರ್ಣಗೊಳ್ಳುವ ಹೊತ್ತಿಗೆ, ಸತೀಶ್‌ ನೀನಾಸಂ ಮತ್ತೂಂದು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಹೌದು, ಅವರೀಗ ಹೊಸ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರೊಂದಿಗೆ ಲೂಸ್‌ಮಾದ ಯೋಗಿ ಕೂಡ ನಟಿಸುತ್ತಿದ್ದಾರೆ. ಅಂದಹಾಗೆ, ಆ ಚಿತ್ರಕ್ಕೆ “ಪರಿಮಳ ಲಾಡ್ಜ್’ ಎಂದು ಹೆಸರಿಡಲಾಗಿದೆ.

ಬುಧವಾರ ಪೂಜೆ ನೆರವೇರಿದ್ದು, ಸಣ್ಣದ್ದೊಂದು ಟೀಸರ್‌ ಅನ್ನು ನಟ ದರ್ಶನ್‌ ಬಿಡುಗಡೆ ಮಾಡಿದ್ದಾರೆ. ಇನ್ನು, ಈ ಚಿತ್ರವನ್ನು ವಿಜಯ್‌ ಪ್ರಸಾದ್‌ ನಿರ್ದೇಶನ ಮಾಡುತ್ತಿದ್ದಾರೆ. ಪ್ರಸನ್ನ ನಿರ್ಮಾಣ ಮಾಡುತ್ತಿದ್ದಾರೆ. “ಪರಿಮಳ ಲಾಡ್ಜ್’ ಹೆಸರು ಕೇಳುತ್ತಿದ್ದಂತೆಯೇ ಒಬ್ಬೊಬ್ಬರಿಗೆ ಒಂದೊಂದು ಕಲ್ಪನೆ ಮೂಡುತ್ತೆ. ಹಾಗಾದರೆ, ಚಿತ್ರದ ಕಥೆ ಏನು? ಈ ಕುರಿತು ನಿರ್ದೇಶಕ ವಿಜಯ್‌ ಪ್ರಸಾದ್‌ ಹೇಳುವುದು ಹೀಗೆ. “ಸಾಮಾನ್ಯವಾಗಿ ಲಾಡ್ಜ್ ಅಂದರೆ ಅದೊಂದು ತರಹೇವಾರಿ ಚಟುವಟಿಕೆಯ ತಾಣ ಎಂಬುದು ನೆನಪಾಗುತ್ತೆ.

ಜಗತ್ತಿನಲ್ಲಿರುವ ಪ್ರತಿಯೊಬ್ಬರದೂ ಒಂದೊಂದು ಕಥೆ ಇದ್ದೇ ಇರುತ್ತೆ. ಹಾಗೆಯೇ ಪ್ರತಿ ರೂಮ್‌ನಲ್ಲೂ ಒಂದು ಬದುಕು, ನೋವು, ಗಾಢವಾದ ಕಥೆ ಇದ್ದೇ ಇರುತ್ತೆ. ಇಲ್ಲಿ ವಿಡಂಬನೆ ಇದೆ, ಮನರಂಜನೆಯೂ ಇದೆ. ಗಂಭೀರವಾಗಿ ಸಾಗುವ ಕಥೆಯೇ ಚಿತ್ರದ ಜೀವಾಳ’ ಎಂದು ವಿವರ ಕೊಡುವ ನಿರ್ದೇಶಕ ವಿಜಯ್‌ ಪ್ರಸಾದ್‌, ಚಿತ್ರ ನೋಡಿದವರಿಗೆ ಆ ಲಾಡ್ಜ್ನಲ್ಲಿ ಎಂಥಾ “ಪರಿಮಳ’ ಸೂಸುತ್ತದೆ ಅನ್ನೋದು ಗೊತ್ತಾಗುತ್ತದೆ’ ಎನ್ನುತ್ತಾರೆ.

ಇದೇ ಮೊದಲ ಸಲ ನೀನಾಸಂ ಸತೀಶ್‌ ಮತ್ತು ಲೂಸ್‌ಮಾದ ಜೊತೆಗೂಡಿ ನಟಿಸುತ್ತಿದ್ದಾರೆ. ಅವರೊಂದಿಗೆ ಸುಮನ್‌ ರಂಗನಾಥ್‌, ಬುಲೆಟ್‌ ಪ್ರಕಾಶ್‌ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ವಿಜಯ್‌ ಪ್ರಸಾದ್‌ ಈಗಾಗಲೇ ಲೂಸ್‌ಮಾದ ಜೊತೆ “ಸಿದ್ಲಿಂಗು’ ಚಿತ್ರ ಮಾಡಿದ್ದರು. ಇದು ಎರಡನೇ ಕಾಂಬಿನೇಷನ್‌. ಇನ್ನು, “ನೀರ್‌ದೋಸೆ’ ಮೂಲಕ ಪ್ರಸನ್ನ, ಆನೂಪ್‌ ಸೀಳಿನ್‌ ಜೊತೆ ಕೆಲಸ ಮಾಡಿದ್ದ ನಿರ್ದೇಶಕರು ಪುನಃ “ಪರಿಮಳ ಲಾಡ್ಜ್’ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅನೂಪ್‌ ಸೀಳಿನ್‌ ಸಂಗೀತವಿದ್ದು, ನಾಲ್ಕು ಹಾಡುಗಳು ಇರಲಿವೆ.

ನಿರಂಜನ್‌ ಬಾಬು ಛಾಯಾಗ್ರಹಣವಿದೆ. ಸುರೇಶ್‌ ಅರಸ್‌ ಸಂಕಲನವಿದೆ. ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯದ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿರುವ ವಿಜಯ್‌ಪ್ರಸಾದ್‌, ಗುರುವಾರದಿಂದ (ಇಂದು) ಒಂದು ವಾರ ಚಿತ್ರೀಕರಣ ನಡೆಸಲಿದ್ದಾರೆ. ಸದ್ಯಕ್ಕೆ ನಿರ್ದೇಶಕ ವಿಜಯ್‌ ಪ್ರಸಾದ್‌, ಜಗ್ಗೇಶ್‌ ಅಭಿನಯದ “ತೋತಾಪುರಿ’ ಚಿತ್ರ ಮಾಡುತ್ತಿದ್ದು, ಇನ್ನು ಸ್ವಲ್ಪ ಚಿತ್ರೀಕರಣ ಮಾಡಿದರೆ, ಆ ಚಿತ್ರ ಪೂರ್ಣಗೊಳ್ಳಲಿದೆ. ಸದ್ಯಕ್ಕೆ ಅವರೀಗ “ಪರಿಮಳ ಲಾಡ್ಜ್’ನಲ್ಲೇ ಬೀಡುಬಿಡುವ ಯೋಚನೆಯಲ್ಲಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.