ಸತೀಶ ಈಗ “ಬ್ರಹ್ಮಾಚಾರಿ’


Team Udayavani, Apr 3, 2019, 3:00 AM IST

sathish

ಕೆಲ ತಿಂಗಳ ಹಿಂದಷ್ಟೇ ನೀನಾಸಂ ಸತೀಶ್‌ ಅಭಿನಯದ ‘ಚಂಬಲ್‌’ ಚಿತ್ರ ತೆರೆಗೆ ಬಂದಿದ್ದು ನಿಮಗೆ ನೆನಪಿರಬಹುದು. ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು, ಭಾರೀ ಸದ್ದು ಮಾಡಿಕೊಂಡು ತೆರೆಗೆ ಬಂದಿದ್ದ “ಚಂಬಲ್‌’ ಚಿತ್ರಕ್ಕೆ ಪ್ರೇಕ್ಷಕರಿಂದ, ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೂ, ಚಿತ್ರ ಮಾತ್ರ ಬಾಕ್ಸಾಫೀಸ್‌ನಲ್ಲಿ ಹೇಳಿಕೊಳ್ಳುವಷ್ಟು ಸದ್ದು ಮಾಡಲಿಲ್ಲ.

“ಚಂಬಲ್‌’ ಚಿತ್ರದ ಬಳಿಕ ನಟ ಸತೀಶ್‌ ಯಾವ ಚಿತ್ರ ಮಾಡುತ್ತಾರೆ ಎಂಬ ಪ್ರಶ್ನೆಗೆ, ಸತೀಶ್‌ ನಟನೆಯಿಂದ ನಿರ್ದೇಶನದತ್ತ ಮುಖ ಮಾಡುತ್ತಿದ್ದಾರೆ ಎಂಬ ಉತ್ತರ ಕೇಳಿ ಬಂದಿತ್ತು. ಅದಕ್ಕೆ ಪೂರಕವಾಗಿ ಚಿತ್ರದ ಟೈಟಲ್‌ ಕೂಡಾ ಲಾಂಚ್‌ ಆಯಿತು. ಆ ನಂತರ ಸತೀಶ್‌ ನಿರ್ದೇಶನದ ಚಿತ್ರದ ಬಗ್ಗೆ ಅಧಿಕೃತವಾಗಿ ಯಾವ ಸುದ್ದಿಯೂ ಹೊರಬರಲಿಲ್ಲ.

ಇವೆಲ್ಲದರ ನಡುವೆ ಈಗ ಸತೀಶ್‌ “ಬ್ರಹ್ಮಾಚಾರಿ’ಯಾಗುತ್ತಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಹೌದು, ಸತೀಶ್‌ ಅಭಿನಯದ ಮುಂಬರುವ ಚಿತ್ರಕ್ಕೆ “ಬ್ರಹ್ಮಾಚಾರಿ’ ಎಂದು ಟೈಟಲ್‌ ಇಡಲಾಗಿದೆ. ಉದಯ್‌ ಮೆಹ್ತಾ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಲವ್‌ ಇನ್‌ ಮಂಡ್ಯ’ ಚಿತ್ರದಲ್ಲಿ ಒಂದಾಗಿದ್ದ ಸತೀಶ್‌ ಮತ್ತು ನಿರ್ಮಾಪಕ ಉದಯ್‌ ಮೆಹ್ತಾ ಜೋಡಿ ಈ ಚಿತ್ರದಲ್ಲಿ ಮತ್ತೆ ಒಂದಾಗಲಿದೆ.

ಇನ್ನು ಇಲ್ಲಿಯವರೆಗೆ ಕಾಣಿಸಿಕೊಂಡಿರದ ಪಾತ್ರದಲ್ಲಿ ಸತೀಶ್‌ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, “ಬ್ರಹ್ಮಾಚಾರಿ’ ಚಿತ್ರದ ಟೈಟಲ್‌ಗೆ “100 ಪರ್ಸೆಂಟ್‌ ವರ್ಜಿನ್‌’ ಎನ್ನುವ ಸಬ್‌ ಟೈಟಲ್‌ ಅನ್ನೂ ಇಟ್ಟಿದೆ. ಇನ್ನು ಹೆಸರೇ ಹೇಳುವಂತೆ, “ಬ್ರಹ್ಮಾಚಾರಿ’ ಪಕ್ಕಾ ಕಾಮಿಡಿ ಸಿನಿಮಾ.

ಈ ಹಿಂದೆ “ಬಾಂಬೆ ಮಿಠಾಯಿ’ ಮತ್ತು “ಡಬಲ್‌ ಇಂಜಿನ್‌’ ಕಾಮಿಡಿ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಚಂದ್ರ ಮೋಹನ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಂದಹಾಗೆ, ಇದೇ ಯುಗಾದಿ ಹಬ್ಬಕ್ಕೆ “ಬ್ರಹ್ಮಾಚಾರಿ’ ಚಿತ್ರ ಪ್ರಾರಂಭವಾಗಲಿದ್ದು, “ಬ್ರಹ್ಮಾಚಾರಿ’ ಬಳಗದಲ್ಲಿ ಯಾರೆಲ್ಲ ಇರಲಿದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.