ಮಲ್ಲಿಗೆ ಮುಡಿದು ಬಂದ ಸೀತಮ್ಮ!


Team Udayavani, Jun 21, 2018, 4:56 PM IST

seethamma-bandalu139-sam.jpg

ತೆಲುಗಿನಲ್ಲಿ ಕೆಲವು ವರ್ಷಗಳ ಹಿಂದೆ “ಸೀತಮ್ಮ ವಾಕಿಟ್ಲೊ ಸಿರಿಮಲ್ಲೆ ಚೆಟ್ಟು’ ಎಂಬ ಚಿತ್ರ ಬಂದಿದ್ದು ನೆನಪಿರಬಹುದು. ಈಗ ಅದೇ ತರಹದ ಹೆಸರಿರುವ ಚಿತ್ರವೊಂದು ಕನ್ನಡದಲ್ಲಿ ಬರುತ್ತಿದೆ. ಅದೇ  “ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು’. ಬಹುತೇಕ ಹೊಸಬರೇ ಸೇರಿ ಮಾಡಿದ ಚಿತ್ರವಿದು. ಚಿತ್ರದ ಶೀರ್ಷಿಕೆ ಕೇಳಿದಾಗಲೇ, ಇದು ಕಲಾತ್ಮಕ ಜಾತಿಯ ಸಿನಿಮಾ ಎಂಬುದನ್ನು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ನಿರ್ದೇಶಕ ಅಶೋಕ್‌ ಕೆ. ಕಡಬ ಈ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಇನ್ನು, ಇಂತಹ ಚಿತ್ರಗಳಿಗೆ ಹಣ ಹಾಕುವ ನಿರ್ಮಾಪಕರ ಸಂಖ್ಯೆ ತೀರಾ ವಿರಳ. 

ಹನುಮಂತರರಾಜು ಬಿ. ಅವರು ನಿರ್ದೇಶಕರ ಕಥೆ ಮೆಚ್ಚಿಕೊಂಡು ಚಿತ್ರಕ್ಕೆ ಹಣ ಹಾಕುವ ಮೂಲಕ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಚಿತ್ರ ಪೂರ್ಣಗೊಂಡಿದೆ. ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡಲು ತಮ್ಮ ತಂಡದೊಂದಿಗೆ ಆಗಮಿಸಿದ್ದರು ನಿರ್ದೇಶಕರು. ಅಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ನಿರ್ದೇಶಕ ಪಿ.ಶೇಷಾದ್ರಿ, ಅನಿರುದ್ಧ, ಭಾವನಾ, ಲಹರಿ ಆಡಿಯೋ ಸಂಸ್ಥೆಯ ಮುಖ್ಯಸ್ಥ ವೇಲು ಇತರರು ಆಡಿಯೋ ಬಿಡುಗಡೆಗೆ ಸಾಕ್ಷಿಯಾದರು. ಚಿತ್ರತಂಡ ಈ ವೇಳೆ ಸಾ.ರಾ.ಗೋವಿಂದು, ಅನಿರುದ್ಧ, ಪಿ. ಶೇಷಾದ್ರಿ ಅವರನ್ನು ಸನ್ಮಾನಿಸಿ, ಗೌರವಿಸಿತು.

ಆಡಿಯೋ ಬಿಡುಗಡೆ ಮಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, “ಕಮರ್ಷಿಯಲ್‌ ಮತ್ತು ಕಲಾತ್ಮಕ ಚಿತ್ರಗಳೆಂಬ ಭೇದಭಾವ ಇರಬಾರದು. ಜನರು ಇಷ್ಟಪಟ್ಟರೆ ಎಂಥಾ ಚಿತ್ರವೂ ಗೆದ್ದು ಬಿಡುತ್ತೆ. ಈ ಚಿತ್ರ ಕಲಾತ್ಮಕವಾದರೂ, ಶೀರ್ಷಿಕೆ ಗಮನ ಸೆಳೆಯುತ್ತೆ. 

ಈಗಂತೂ ಯಾವ ಚಿತ್ರಗಳೂ ಚಿತ್ರಮಂದಿರದಲ್ಲಿ ಹೆಚ್ಚು ಕಾಲ ನಿಲ್ಲುತ್ತಿಲ್ಲ. ವರ್ಷಕ್ಕೆ ಅತೀ ಹೆಚ್ಚು ಚಿತ್ರಗಳ ಬಿಡುಗಡೆಯೇ ಇದಕ್ಕೆ ಕಾರಣ. ತಾಂತ್ರಿಕತೆ ಬೆಳೆದಿದೆ. ಚಿತ್ರರಂಗವೂ ಬೆಳೆಯುತ್ತಿದೆ. ಆದರೆ, ಚಿತ್ರಗಳ ಯಶಸ್ಸು ಮಾತ್ರ ಇಲ್ಲ. ಬಿಡುಗಡೆ ವೇಳೆ ಯಾರೋ ಬಳಿ ಹೋಗಿ ಒದ್ದಾಡುವುದಕ್ಕಿಂತ, ಮಂಡಳಿ ಸಂಪರ್ಕಿಸಿದರೆ, ಸಲಹೆಗಳು ಸಿಗುತ್ತವೆ. 

ಹೊಸಬರು ಎಚ್ಚರಿಕೆಯಿಂದ ಸಿನಿಮಾ ಮಾಡಬೇಕು’ ಎಂಬುದು ಸಾ.ರಾ.ಗೋವಿಂದು ಅವರ ಕಿವಿಮಾತು. ನಿರ್ದೇಶಕ ಅಶೋಕ್‌ ಕೆ ಕಡಬ, “ಚಿತ್ರದ ಹೀರೋ ಇಲ್ಲಿ  ಪತ್ರಕರ್ತ. ಒಂದು ಸುದ್ದಿ ಬೆನ್ನತ್ತಿ ಒಂದು ಊರಿಗೆ ಹೋಗುತ್ತಾನೆ. ಗೆಳಯನ ಹೆಂಡತಿ ವಿಧವೆ ಅನ್ನೋದು ಗೊತ್ತಾಗುತ್ತೆ. ಕೊನೆಗೆ ಅವನು ಹುಡುಕಿ ಹೊರಟ ಸುದ್ದಿ ಸಿಗುತ್ತಾ, ತನ್ನ ಗೆಳೆಯನ ಹೆಂಡತಿಗೆ ಹೊಸ ಬಾಳು ಕಲ್ಪಿಸಿಕೊಡಲು ಮುಂದಾಗುತ್ತಾನಾ ಎಂಬುದು ಕಥೆ.  

ನಂದೀಶ್‌ ಚಿತ್ರದ ಹೀರೋ. ಅವರಿಗೆ ಮೊದಲ ಚಿತ್ರ. ಅವರು ವೃತ್ತಿಯಲ್ಲಿ ವಕೀಲರು. ಇನ್ನು, ನಾಯಕಿ ಸಂಹಿತಾಗೆ ಇದು ಎರಡನೇ ಚಿತ್ರ. ಕಾರ್ತಿಕ್‌ ವೆಂಕಟೇಶ್‌ ಸಂಗೀತ ನೀಡಿದ್ದಾರೆ. ಮೂರು ಹಾಡುಗಳ ಪೈಕಿ ಒಂದು ಹಾಡನ್ನು ಗಾಯಕ ಸಿ.ಅಶ್ವತ್ಥ್ ಅವರಿಗೆ ಅರ್ಪಿಸಲಾಗಿದೆ’ ಎಂದು ವಿವರ ನೀಡಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.