ಟ್ರೇಲರ್ನಲ್ಲಿ ಸೀತಾರಾಮ ಕಲ್ಯಾಣ ದರ್ಶನ
Team Udayavani, Jan 21, 2019, 6:01 AM IST
ಸದ್ಯ ಸ್ಯಾಂಡಲ್ವುಡ್ನಲ್ಲಿ ತನ್ನ ಪೋಸ್ಟರ್, ಟೀಸರ್ ಹಾಗು ಹಾಡುಗಳ ಮೂಲಕ ಸದ್ದು ಮಾಡುತ್ತಿರುವ “ಸೀತಾರಾಮ ಕಲ್ಯಾಣ’ ಚಿತ್ರ ಅಧಿಕೃತ ಟ್ರೇಲರ್ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಶನಿವಾರ (ಫೆ. 19) ಸಂಜೆ ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ “ಸೀತಾರಾಮ ಕಲ್ಯಾಣ’ ಚಿತ್ರದ ಮೊದಲ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
“ಸೀತಾರಾಮ ಕಲ್ಯಾಣ’ ಚಿತ್ರ ಇದೇ ಜ. 25ರಂದು ತೆರೆಗೆ ಬರುತ್ತಿದ್ದು, ಚಿತ್ರದ ಅಂತಿಮ ಹಂತದ ಪ್ರಮೋಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ, ಚಿತ್ರವನ್ನು ಪ್ರೇಕ್ಷಕರಿಗೆ ತಲುಪಿಸುವ ಕಾರ್ಯದಲ್ಲಿ ನಿರತವಾಗಿದೆ. ಇನ್ನು “ಸೀತಾರಾಮ ಕಲ್ಯಾಣ’ದ ಟ್ರೇಲರ್ ಬಿಡುಗಡೆಯಾದ ಒಂದೇ ದಿನದಲ್ಲಿ ಯು-ಟ್ಯೂಬ್ನಲ್ಲಿ ಸುಮಾರು ಎರಡೂವರೆ ಮಿಲಿಯನ್ ವೀಕ್ಷಣೆ ಪಡೆದುಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಟ್ರೇಲರ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ನಿಖಿಲ್ ಕುಮಾರ್ ಹಾಗೂ ರಚಿತಾ ರಾಮ್ ಮುಖ್ಯಭೂಮಿಕೆಯಲ್ಲಿರುವ “ಸೀತಾರಾಮ ಕಲ್ಯಾಣ’ ಚಿತ್ರಕ್ಕೆ ಎ. ಹರ್ಷ ನಿರ್ದೇಶನ ಮಾಡಿದ್ದಾರೆ. ಉಳಿದಂತೆ ಚಿತ್ರದಲ್ಲಿ ರವಿಶಂಕರ್, ಶರತ್ ಕುಮಾರ್, ಮಧುಬಾಲಾ, ಆದಿತ್ಯ ಮೆನನ್, ಚಿಕ್ಕಣ್ಣ, ಸಾಧು ಕೋಕಿಲ, ನಯನಾ, ಗಿರಿಜಾ ಲೋಕೇಶ್, ಚೇತನ್ ಸೇರಿದಂತೆ ಹಲವು ಕಲಾವಿದರ ಬೃಹತ್ ತಾರಾಗಣವಿದೆ.
“ಚೆನ್ನಾಂಬಿಕ ಫಿಲಂಸ್’ ಬ್ಯಾನರ್ನಲ್ಲಿ ಅನಿತಾ ಕುಮಾರಸ್ವಾಮಿ ಅದ್ದೂರಿ ವೆಚ್ಚದಲ್ಲಿ “ಸೀತಾರಾಮ ಕಲ್ಯಾಣ’ ಚಿತ್ರವನ್ನು ಸಿನಿಮಾ ನಿರ್ಮಾಣ ಮಾಡಿದ್ದಾರೆ. “ಸೀತಾರಾಮ ಕಲ್ಯಾಣ’ ಕರ್ನಾಟಕ ರಾಜ್ಯದಾದ್ಯಂತ ಸುಮಾರು 400ಕ್ಕೂ ಹೆಚ್ಚಿನ ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಏಕಕಾಲಕ್ಕೆ ಇತರೆ ರಾಜ್ಯಗಳು ಮತ್ತು ವಿದೇಶಗಳಲ್ಲೂ ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.