ದಿನಕರ್‌ ಜೊತೆ ಸೆಲ್ಫಿ ಮಾತು


Team Udayavani, Aug 20, 2018, 12:42 PM IST

dinakar.jpg

“ಸಾರಥಿ’ ನಂತರ ನಿರ್ದೇಶನದಿಂದ ದೂರವೇ ಇದ್ದ ದಿನಕರ್‌ ತೂಗುದೀಪ, ಈಗ ತಮ್ಮ ಹೊಸ ಚಿತ್ರ “ಲೈಫ್ ಜೊತೆ ಒಂದ್‌ ಸೆಲ್ಫಿ’ ಬಿಡುಗಡೆ ಮಾಡುವುದಕ್ಕೆ ಸಜ್ಜಾಗುತ್ತಿದ್ದಾರೆ. ತಮ್ಮ ತೂಗುದೀಪ ಸಂಸ್ಥೆ ಮೂಲಕ ಈ ವಾರ ರಾಜ್ಯಾದ್ಯಂತ ಸುಮಾರು 160 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರೆ. ಇಷ್ಟಕ್ಕೂ ದಿನಕರ್‌ ಈ ಏಳು ವರ್ಷಗಳ ಕಾಲ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಬರಬಹುದು.

“ಸಾರಥಿ’ ಬಳಿಕ “ಬುಲ್‌ ಬುಲ್‌’ ಮತ್ತು “ಮದುವೆಯ ಮಮತೆಯ ಕರೆಯೋಲೆ’ ಚಿತ್ರ ನಿರ್ಮಿಸಿದರು. ಆ ಬಳಿಕ “ಚಕ್ರವರ್ತಿ’ ಚಿತ್ರದಲ್ಲಿ ನಟಿಸಿದರು. ಅದರೊಂದಿಗೆ ವಿತರಣೆ ಮಾಡುವ ಮೂಲಕ ಬಿಜಿಯಾಗಿದ್ದರು. ಇದೇ ಸಮಯದಲ್ಲಿ ಅವರ ಪತ್ನಿ ಮಾನಸ ಕಥೆ ಇಷ್ಟವಾಗಿ, ಅದನ್ನು ತೆರೆಯ ಮೇಲೆ ತಂದಿದ್ದಾರೆ. ಈ ಕುರಿತು ಮಾತನಾಡುವ ಅವರು, “ನನ್ನ ಮೊದಲ ಚಿತ್ರ “ಜೊತೆ ಜೊತೆಯಲಿ’ ಲವ್‌ಸ್ಟೋರಿ ಆಗಿತ್ತು.

“ಸಾರಥಿ’ ಪಕ್ಕಾ ಮಾಸ್‌ ಚಿತ್ರವಾಗಿತ್ತು. “ನವಗ್ರಹ’ ಥ್ರಿಲ್ಲರ್‌ ಆಗಿತ್ತು. ಮೂರು ಬೇರೆ ರೀತಿಯ ಕಥೆ ಇದ್ದ ಚಿತ್ರಗಳು. ಹಾಗಾಗಿ ಈ ಮೂರು ಕಥೆ ಹೊರತುಪಡಿಸಿ ಬೇರೆ ಕಥೆಗೆ ಹುಡುಕುತ್ತಿದ್ದೆ. ಮಾನಸ ಕಥೆ ಇಷ್ಟವಾಯ್ತು. ಅದಕ್ಕೇ ಈ ಚಿತ್ರ ಮಾಡಿದೆ’ ಎನ್ನುತ್ತಾರೆ ದಿನಕರ್‌. “ಈ ಚಿತ್ರದಲ್ಲಿ ಮೂರು ಪಾತ್ರಗಳು ಹೈಲೆಟ್‌. ಪ್ರೇಮ್‌ ನಕುಲ್‌ ಎಂಬ ಪಾತ್ರ ಮಾಡಿದ್ದಾರೆ. ಒಂದು ಮಲ್ಟಿನ್ಯಾಷನಲ್‌ ಕಂಪೆನಿ ಉದ್ಯೋಗಿ ಅವರು.

ಅವರಿಗೊಂದು ಆಸೆ, ತಾನು ನಿರ್ದೇಶಕ ಆಗಬೇಕು ಅನ್ನೋದು. ಇನ್ನು ಪ್ರಜ್ವಲ್‌, ವಿರಾಟ್‌ ಎನ್ನುವ ಪಾತ್ರ ಮಾಡಿದ್ದಾರೆ. ಅವರು ಮಲ್ಟಿಮಿಲೇನಿಯರ್‌. ಲೈಫ‌ಲ್ಲಿ ಎಲ್ಲವೂ ಇದೆ. ಆದರೆ ಏನೋ ಒಂದು ಕೊರಗು. ಹರಿಪ್ರಿಯಾ ಅವರದೂ ಒಂದು ಸಮಸ್ಯೆ. ಈ ಮೂವರು ಲೈಫ‌ಲ್ಲಿ ಒಂದಲ್ಲ ಒಂದು ಕೊರಗಿನಲ್ಲಿದ್ದವರು. ಒಂದು ಬ್ರೇಕ್‌ ತೆಗೆದುಕೊಂಡು ದೂರದ ಗೋವಾಗೆ ಹೋಗುತ್ತಾರೆ.

ಮೂವರೂ ಅಲ್ಲಿ ಫ್ರೆಂಡ್‌ ಆಗ್ತಾರೆ. ಒಬ್ಬೊಬ್ಬರ ಕಥೆ ಅಲ್ಲಿ ಬಿಚ್ಚಿಕೊಳ್ಳುತ್ತವೆ. ಬೇರೆ ಕಡೆಯಿಂದ ಬಂದ ಮೂವರು ಗೋವಾದಲ್ಲಿ ಭೇಟಿಯಾಗುತ್ತಾರೆ. ಒಂದೇ ಕಾಮನ್‌ ವಿಷಯ ಅಂದರೆ, ಮೂವರು ಕನ್ನಡಿಗರು ಅನ್ನೋದು. ಅಲ್ಲಿಂದ ಗೆಳೆತನ ಹೆಚ್ಚಾಗುತ್ತೆ. ಮೊದಲರ್ಧ ಸಮಸ್ಯೆ ಹಂಚಿಕೊಂಡರೆ, ದ್ವಿತಿಯಾರ್ಧ ಅದಕ್ಕೆ ಪರಿಹಾರ ಸಿಗುತ್ತೆ. ಅದು ಏನು ಅನ್ನೋದೇ ಕಥೆ’ ಎಂಬುದು ದಿನಕರ್‌ ಮಾತು.

“ಪ್ರಜ್ವಲ್‌ ಅವರ “ಸಿಕ್ಸರ್‌’ ನೋಡಿದಾಗಿನಿಂದಲೂ ಅವನ ಜೊತೆ ಚಿತ್ರ ಮಾಡಬೇಕು ಎಂಬ ಯೋಚನೆ ಇತ್ತು. ಅದು ಈಗ ಈಡೇರಿದೆ. ಇನ್ನು, ಪ್ರೇಮ್‌ ಜೊತೆ “ಜೊತೆ ಜೊತೆಯಲಿ’ ಮಾಡಿದ ನಂತರ ಇಬ್ಬರೂ ಒಂದು ಸಿನಿಮಾ ಮಾಡಬೇಕು ಅಂತ ಮಾತಾಡಿದ್ದೆವು. ಆಗಿರಲಿಲ್ಲ. ಹರಿಪ್ರಿಯಾ ಒಳ್ಳೇ ಕಲಾವಿದೆ ಅನ್ನೋದು ಅವರ ಹಿಂದಿನ “ಉಗ್ರಂ’, “ನೀರ್‌ದೋಸೆ’ ನೋಡಿ ಗೊತ್ತಾಯ್ತು. ಆ ಹುಡುಗಿಯಲ್ಲಿ ಮೆಚೂರಿಟಿ ಇದೆ.

ಮೂವರು ಪಾತ್ರಕ್ಕೆ ಸರಿಯಾದ ಆಯ್ಕೆ ಎನಿಸಿ ಸಿನಿಮಾ ಮಾಡಿದೆ. ಮೊದಲು ನಾನು ಹೊಸಬರ ಜೊತೆ ಮಾಡಬೇಕು ಅಂದುಕೊಂಡಿದ್ದೆ. ಆದರೆ, ನಿರ್ಮಾಪಕ ಸಮೃದ್ಧಿ ಮಂಜುನಾಥ್‌ ಅವರು, ಮೊದಲ ಚಿತ್ರ, ಸ್ಟಾರ್‌ ಇದ್ದರೆ ಚೆನ್ನಾಗಿರುತ್ತೆ ಅಂದರು. ಒಂದೇ ದಿನದಲ್ಲಿ ಈ ಮೂವರು ಫಿಕ್ಸ್‌ ಆಗಿಬಿಟ್ಟರು. ಒಟ್ಟು 55 ದಿನಗಳ ಕಾಲ ಗೋವಾ, ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣವಾಗಿದೆ’ ಎಂದು ಮಾಹಿತಿ ಕೊಡುತ್ತಾರೆ ದಿನಕರ್‌.

“ಮದುವೆ ಆಗಿ ಇಷ್ಟು ವರ್ಷ ಆಯ್ತು, ಏಳೆಂಟು ಸಲ ಜಗಳ ಆಡಿರಬಹುದಷ್ಟೇ. ಆದರೆ, ಈ ಸಿನಿಮಾ ಮಾಡುವಾಗ, ಸುಮಾರು 150 ಸಲ ಜಗಳ ಆಡಿದ್ದೇನೆ. ಕಾರಣ, ಕಥೆಗಾಗಿ. ಕಥೆ ಹೀಗೆ ಇರಬೇಕು, ಹೀಗೇ ಬರಬೇಕು ಎಂಬ ಆದೇಶ ಅವರದು. ನಾನು ನಿರ್ದೇಶಕ, ನನಗೂ ಗೊತ್ತಿದೆ, ಮಾಡಿ ತೋರಿಸ್ತೀನಿ ಅಂತ ಜಗಳ ಆಡಿದ್ದುಂಟು. ಪ್ರತಿ ಪಾತ್ರವನ್ನೂ ಡೀಟೆಲ್‌ ಆಗಿ ಡಿಸೈನ್‌ ಮಾಡಿದ್ದರು.

ಅದು ಇಷ್ಟ ಆಯ್ತು. ಎಡಿಟ್‌ ಮಾಡಿ ಸಿನಿಮಾ ತೋರಿಸಿದಾಗ ಮಾನಸ ಖುಷಿಯಾದರು. ಒಳ್ಳೆಯ ತಂಡ ಜೊತೆ ಚಿತ್ರ ಮಾಡಿದ್ದಕ್ಕೆ ನನಗೂ ಹೆಮ್ಮೆ ಇದೆ ಎಂಬುದು ದಿನಕರ್‌ ಮಾತು. ಈ ಚಿತ್ರಕ್ಕೆ ವಿ. ಹರಿಕೃಷ್ಣ ಸಂಗೀತ ನೀಡಿದರೆ, ನಿರಂಜನ್‌ಬಾಬು ಛಾಯಾಗ್ರಹಣ ಮಾಡಿದ್ದಾರೆ. ಕೆ.ಎಂ.ಪ್ರಕಾಶ್‌ ಸಂಕಲನವಿದೆ. 

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.