‘ಭಗವಂತ ನಿಮಗೆ ಒಳ್ಳೆಯದನ್ನು ಮಾಡಲಿ’ : ಉಪ್ಪಿ ಗೆ ಹಿರಿಯ ನಟ ಉಮೇಶ್ ಹಾರೈಕೆ
Team Udayavani, May 22, 2021, 4:12 PM IST
ಬೆಂಗಳುರು: ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗದ ಕಲಾವಿದರಿಗೆ ನೆರವು ನೀಡುತ್ತಿರುವ ನಟ ಉಪೇಂದ್ರ ಅವರ ಕಾರ್ಯಕ್ಕೆ ಹಿರಿಯ ನಟ ಉಮೇಶ್ ಅವರು ಶುಭ ಹಾರೈಕೆ ಜೊತೆಗೆ ಧನ್ಯವಾದ ಹೇಳಿದ್ದಾರೆ.
ಕೋವಿಡ್ ಎರಡನೇ ಅಲೆಗೆ ಸಿಲುಕಿ ನಲುಗುತ್ತಿರುವ ಕನ್ನಡ ಚಿತ್ರರಂಗದ ಕಲಾವಿದರಿಗೆ, ಕಾರ್ಮಿಕರಿಗೆ ನಟ-ನಿರ್ದೇಶಕ ಉಪೇಂದ್ರ ಅವರು ನೆರವಿನ ಹಸ್ತ ಚಾಚಿದ್ದಾರೆ. ಕೆಲಸ ಇಲ್ಲದೆ ಬದುಕು ನಡಿಸಲು ದುಸ್ತರವಾದಂತಹ ಪರಿಸ್ಥಿತಿಯಲ್ಲಿರುವ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಿಗೆ ಹಾಗೂ ಸಿನಿ ಕಾರ್ಮಿಕರ ಸಾವಿರಾರು ಕುಟುಂಬಗಳಿಗೆ ಆಹಾರ ಹಾಗೂ ದಿನಸಿ ಕಿಟ್ ಹಂಚುವ ಕಾರ್ಯ ಉಪ್ಪಿ ಅವರಿಂದ ನಿರಂತರವಾಗಿ ನಡೆಯುತ್ತಿದೆ.
ಉಪೇಂದ್ರ ಅವರ ಈ ಕಾರ್ಯಕ್ಕೆ ಚಿತ್ರರಂಗದ ಸಾಕಷ್ಟು ಜನರು ಆರ್ಥಿಕವಾಗಿ ಸಹಾಯ ಮಾಡುತ್ತಿದ್ದಾರೆ. ಈ ಹಣದ ಸದುಪಯೋಗ ಮಾಡಿಕೊಂಡು ಅಗತ್ಯ ವಸ್ತುಗಳನ್ನು ಖರೀದಿಸಿ, ಎಲ್ಲರ ಮನೆ ಬಾಗಿಲಿಗೆ ತಲುಪಿಸುತ್ತಿದ್ದಾರೆ ಉಪೇಂದ್ರ.
ಇನ್ನು ಉಪೇಂದ್ರ ಅವರ ಈ ಕಾರ್ಯಕ್ಕೆ ಹಿರಿಯ ಹಾಸ್ಯ ನಟ ಉಮೇಶ್ ಅವರು ಧನ್ಯವಾದ ಹೇಳಿದ್ದಾರೆ. ಇದುವರೆಗೂ ನೀವು ಮಾಡುತ್ತಿರುವ ಸಮಾಜಿಕ ಕಾರ್ಯವನ್ನು ಸುದ್ದಿ ವಾಹಿನಿಗಳಲ್ಲಿ ನೋಡುತ್ತಿದ್ದೇವು. ಇದೀಗ ಅದನ್ನು ಕಣ್ಣಾರೆ ಕಾಣುತ್ತಿದ್ದೇವೆ. ನೀವು ಕಳುಹಿಸಿ ಕೊಟ್ಟ ದಿನಸಿ ಕಿಟ್ ಇಂದು ನಮ್ಮ ಮನೆಗೆ ಬಂದು ತಲುಪಿದೆ. ನಿಮ್ಮ ಈ ಕಾರ್ಯಕ್ಕೆ ಧನ್ಯವಾದಗಳು ಎಂದು ಉಮೇಶ್ ಅವರು ನುಡಿದಿದ್ದಾರೆ.
??????? ಅಣ್ಣ ನಿಮ್ಮ ಆಶೀರ್ವಾದ ಎಲ್ಲ ಕಲಾವಿದರ ಮತ್ತು ಕಲಾಭಿಮಾನಿಗಳ ಮೇಲೆ ಇರಲಿ ?? pic.twitter.com/DRBpzsdkbw
— Upendra (@nimmaupendra) May 22, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ