“ಪ್ರಾರಂಭ’ಕ್ಕೆ ಸೆನ್ಸಾರ್ ಅಸ್ತು
Team Udayavani, Mar 19, 2020, 7:00 AM IST
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ಅಭಿನಯದ “ಪ್ರಾರಂಭ’ ಚಿತ್ರ ತೆರೆಗೆ ಬರಲು ಸಿದ್ಧವಾಗುತ್ತಿದೆ. ಇತ್ತೀಚೆಗೆ “ಪ್ರಾರಂಭ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯಾವುದೇ ಕಟ್ಸ್ ಹೇಳದೆ, “ಯು/ಎ’ ಅರ್ಹತಾ ಪ್ರಮಾಣ ಪತ್ರವನ್ನು ನೀಡಿದೆ.
ಇದೇ ಖುಷಿಯಲ್ಲಿರುವ ಚಿತ್ರತಂಡ, ಎಲ್ಲವೂ ಅಂದುಕೊಂಡಂತೆ ನಡೆದರೆ ಏಪ್ರಿಲ್ ವೇಳೆಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ. ಮನು ಕಲ್ಯಾಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು “ಜೇನುಶ್ರೀ ತನುಷ ಪ್ರೊಡಕ್ಷನ್ಸ್’ ಬ್ಯಾನರ್ನಲ್ಲಿ ಜಗದೀಶ್ ಕಲ್ಯಾಡಿ ನಿರ್ಮಿಸಿದ್ದಾರೆ.
ಲವ್ ಕಂ ರೊಮ್ಯಾಂಟಿಕ್ ಕಥಾ ಹಂದರ ಹೊಂದಿರುವ “ಪ್ರಾರಂಭ’ ಚಿತ್ರದಲ್ಲಿ ಮನುರಂಜನ್ ರವಿಚಂದ್ರನ್ಗೆ ನಾಯಕಿಯಾಗಿ ನಾಯಕಿಯಾಗಿ ಕೀರ್ತಿ ಕಲಕೇರಿ ಜೋಡಿಯಾಗಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ, ರಾಘು ಶ್ರೀವಾಸ್ತವ್, ಶಾಂಭವಿ, ಸೂರಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಚಿತ್ರದ ಐದು ಹಾಡುಗಳಿಗೆ ಪ್ರಜ್ವಲ್ ಪೈ ಸಂಗೀತ ಸಂಯೋಜನೆಯಿದೆ. ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಚಿತ್ರದ ಎರಡು ಸಾಹಸ ಸನ್ನಿವೇಶಗಳನ್ನು ಸಂಯೋಜಿಸಿದ್ದಾರೆ. ಚಿತ್ರಕ್ಕೆ ಸುರೇಶ್ಬಾಬು ಛಾಯಾಗ್ರಹಣ, ವಿಜಯ್ ಎನ್. ಕುಮಾರ್ ಸಂಕಲನವಿದೆ.