ಆಲ್ಬಂ ಸಾಂಗ್‌ನಲ್ಲಿ ಮೇಘಾ ಶೆಟ್ಟಿ ಗ್ಲಾಮರಸ್‌ ಲುಕ್‌


Team Udayavani, Feb 4, 2021, 9:59 AM IST

ಆಲ್ಬಂ ಸಾಂಗ್‌ನಲ್ಲಿ ಮೇಘಾ ಶೆಟ್ಟಿ ಗ್ಲಾಮರಸ್‌ ಲುಕ್‌

ಕಿರುತೆರೆಯ “ಜೊತೆ ಜೊತೆಯಲಿ…’ ಧಾರಾವಾಹಿಯ ಮೂಲಕ ಗಮನ ಸೆಳೆದಿರುವ ನಟಿ ಮೇಘಾ ಶೆಟ್ಟಿ, ಸದ್ಯ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ “ತ್ರಿಬಲ್‌ ರೈಡಿಂಗ್‌’ ಚಿತ್ರದ ಮೂಲಕ ಹಿರಿತೆರೆಗೆ ಪ್ರವೇಶ ಪಡೆಯಲು ರೆಡಿಯಾಗಿದ್ದಾರೆ. ಈಗಾಗಲೇ “ತ್ರಿಬಲ್‌ ರೈಡಿಂಗ್‌’ ಚಿತ್ರದ ಒಂದಷ್ಟು ಭಾಗದ ಚಿತ್ರೀಕರಣ ಪೂರ್ಣಗೊಳಿಸಿರುವ ನಟಿ ಮೇಘಾ ಶೆಟ್ಟಿ, ಇದರ ನಡುವೆಯೇ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.

ಹೌದು, ಕನ್ನಡದ ರ್ಯಾಪರ್‌ ಚಂದನ್‌ ಶೆಟ್ಟಿ ಸಂಗೀತ ಸಂಯೋಜಿಸಿ, ಜೊತೆಗೆ ಧ್ವನಿಯಾಗಿರುವ “ನೋಡುಶಿವ…’ ಎಂಬ ಮ್ಯೂಸಿಕ್‌ ಆಲ್ಬಂನಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ “ಪರಾರಿ’ ಎಂಬ ಚಿತ್ರವನ್ನು ನಿರ್ಮಿಸಿದ್ದ ಸುಮಿತ್‌ ಎಂ.ಕೆ ಈ ಮ್ಯೂಸಿಕ್‌ ಆಲ್ಬಂ ನಿರ್ಮಿಸುತ್ತಿದ್ದು, ಹಾಡಿಗೆ ಸಾಹಿತ್ಯ ರಚಿಸಿರುವುದರ ಜೊತೆಗೆ ಮೇಘಾ ಶೆಟ್ಟಿ ಜೊತೆಗೆ ಆಲ್ಬಂ ಹಾಡಿಗೆ ಹೆಜ್ಜೆಯನ್ನೂ ಹಾಕಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್‌ ದೇವರಾಜ್‌ ಹೊಸಚಿತ್ರಕ್ಕೆ ಅದಿತಿ ಪ್ರಭುದೇವ ನಾಯಕಿ

ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗಿರುವ “ನೋಡು ಶಿವ…’ ಮ್ಯೂಸಿಕ್‌ ಆಲ್ಬಂನಲ್ಲಿ ಮೇಘಾ ಶೆಟ್ಟಿ, ಸುಮಿತ್‌ ಎಂ.ಕೆ ಅವರೊಂದಿಗೆ ಗಾಯಕ ಚಂದನ್‌ ಶೆಟ್ಟಿ ಕೂಡ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿ¨ªಾರೆ. ಉಳಿದಂತೆ ಸುಮಾರು 60ಕ್ಕೂ ಹೆಚ್ಚು ನೃತ್ಯ ಕಲಾವಿದರು, 150ಕ್ಕೂ ಅಧಿಕ ಸಹಕಲಾವಿದರು ಈ ಮ್ಯೂಸಿಕ್‌ ಆಲ್ಬಂನ ಹಾಡಿನಲ್ಲಿ ಅಭಿನಯಿಸಿದ್ದಾರೆ.

ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಎ.ಎಂ.ಸಿ ಇಂಜನಿಯರಿಂಗ್‌ ಕಾಲೇಜ್‌ ಆವರಣದಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. “ಎಂ.ಕೆ ಆರ್ಟ್ಸ್’ ಬ್ಯಾನರ್‌ನಲ್ಲಿ ಮೋನಿಕಾ ಕಲ್ಲುರಿ ಈ ಆಲ್ಬಂ ಸಾಂಗ್‌ ನಿರ್ಮಾಣ ಮಾಡಿದ್ದು, ಭಜರಂಗಿ ಮೋಹನ್‌ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. “ಹೆಬ್ಬುಲಿ’ ಖ್ಯಾತಿಯ ಕರುಣಾಕರ್‌ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ.

ಸಾಮಾನ್ಯವಾಗಿ ಸಿನಿಮಾದ ಹಾಡುಗಳನ್ನು ಅದ್ಧೂರಿಯಾಗಿ ಚಿತ್ರೀಕರಿಸುತ್ತಾರೆ. ಆದರೆ ಮ್ಯೂಸಿಕ್‌ ಆಲ್ಬಂ ಹಾಡಿಗೆ ಇಷ್ಟೊಂದು ವೆಚ್ಚ ಮಾಡು ವುದು ಅಪರೂಪ. ನಮಗೆ ಗೊತ್ತಿರುವಂತೆ, ಕನ್ನಡದ ಮಟ್ಟಿಗೆ ಇಷ್ಟು ಅದ್ಧೂರಿಯಾಗಿ ಮೂಡಿ ಬಂದಿರುವ ಮೊದಲ ಮ್ಯೂಸಿಕ್‌ ಆಲ್ಬಂ ಸಾಂಗ್‌ ಎನ್ನುವುದು ತಂಡದ ಮಾತು.

ಸುಮಾರು ಮೂರುವರೆ ನಿಮಿಷಗಳ ಅವಧಿಯ “ನೋಡು ಶಿವಾ…’ ಮ್ಯೂಸಿಕ್‌ ವಿಡಿಯೋ ಆಲ್ಬಂ ಸಾಂಗ್‌ ಇದೇ ತಿಂಗಳ ಕೊನೆಗೆ ಆನಂದ್‌ ಆಡಿಯೋ ಯೂ-ಟ್ಯೂಬ್‌ ಚಾನಲ್‌ನಲ್ಲಿ ಬಿಡುಗಡೆಯಾಗಲಿದೆ.

ಇನ್ನು ಇಲ್ಲಿಯವರೆಗೆ ಟ್ರೆಡಿಷನಲ್‌ ಲುಕ್‌ನಲ್ಲಿ ಕಾಣಿಸಿಕೊಂಡು ನೋಡುಗರ ಗಮನ ಸೆಳೆದಿದ್ದ ಮೇಘಾ ಶೆಟ್ಟಿ, ಈ ಮ್ಯೂಸಿಕ್‌ ಆಲ್ಬಂನಲ್ಲಿ ತುಂಬ ಗ್ಲಾಮರಸ್‌ ಆಗಿ, ಬೋಲ್ಡ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಒಟ್ಟಾರೆ ಮೇಘಾ ಶೆಟ್ಟಿಯ ಹೊಸ ಲುಕ್‌ ನೋಡುಗರಿಗೆ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಈ ಮ್ಯೂಸಿಕ್‌ ಆಲ್ಬಂ ರಿಲೀಸ್‌ ಆದ ಮೇಲಷ್ಟೇ ಗೊತ್ತಾಗಲಿದೆ.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.