ಶಾನ್ವಿ ಕಣ್ಣಲ್ಲಿ ‘ಕಸ್ತೂರಿ ಮಹಲ್’ ಕನಸು: 19 ರಂದು ಲಿರಿಕಲ್ ವಿಡಿಯೋ ರಿಲೀಸ್
Team Udayavani, Mar 16, 2021, 9:39 AM IST
ಹಿರಿಯ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ “ಕಸ್ತೂರಿ ಮಹಲ್’ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಪ್ರಚಾರದ ಮೊದಲ ಹಂತವಾಗಿ ಮಾರ್ಚ್ 19ರಂದು “ಕಸ್ತೂರಿ ಮಹಲ್’ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಬರೆದಿರುವ “ನಾನ್ಯಾರು ನನಗೆ ಯಾರು…’ ಎಂಬ ಈ ಲಿರಿಕಲ್ ವಿಡಿಯೋ ಹಾಡನ್ನು ಅನುರಾಧಾ ಭಟ್ ಹಾಡಿದ್ದಾರೆ.
ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಸಸ್ಪೆನ್ಸ್ ಕಂ ಹಾರರ್ – ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಸ್ತೂರಿ ಮಹಲ್’ ಚಿತ್ರದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮಾ ರಫಿ, ನೀನಾಸಂ ಅಶ್ವಥ್ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇದನ್ನೂ ಓದಿ:4ನೇ ದಿನವೂ ಬಾಕ್ಸಾಫೀಸ್ನಲ್ಲಿ ನಾಗಾಲೋಟ: ಹೊಸ ದಾಖಲೆ ಬರೆದ ‘ರಾಬರ್ಟ್’
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಸ್ತೂರಿ ಮಹಲ್’ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ “ಕಸ್ತೂರಿ ಮಹಲ್’ ಚಿತ್ರೀಕರಣ ನಡೆಸಲಾಗಿದೆ.
“ಶ್ರೀಭವಾನಿ ಆರ್ಟ್ಸ್’ ಬ್ಯಾನರ್ನಲ್ಲಿ ರವೀಶ್ ಆರ್. ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್.ಸಿ ಹಾಗೂ ಅಕ್ಷಯ್ ಸಿ.ಎಸ್ ಅವರ ಸಹ ನಿರ್ಮಾಣವಿದೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನ “ಕಸ್ತೂರಿ ಮಹಲ್ ಗಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಜೂನ್ ಮೊದಲ ವಾರ “ಕಸ್ತೂರಿ ಮಹಲ್’ ಪ್ರೇಕ್ಷಕರ ಮುಂದೆ ಬರುವ ಯೋಚನೆಯಲ್ಲಿದೆ.
ಇದನ್ನೂ ಓದಿ: ಮಾ.16: ಉದಯವಾಣಿ ತೆರೆದಿದೆ ಮನೆ ಬಾ ಅತಿಥಿ ಫೇಸ್ ಬುಕ್ ಲೈವ್ ನಲ್ಲಿ ರಿಷಬ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ