ಶರಣ್‌ ಈಗ “ಅವತಾರ್‌’ ಪುರುಷ


Team Udayavani, Feb 6, 2019, 5:53 AM IST

avatara.jpg

ನಟ ಶರಣ್‌ ಹಾಗೂ ನಿರ್ದೇಶಕ ಸುನಿ ಕಾಂಬಿನೇಶನ್‌ನಲ್ಲಿ ಹೊಸ ಸಿನಿಮಾ ಬರುತ್ತಿದ್ದು, ಈ ಸಿನಿಮಾವನ್ನು ಪುಷ್ಕರ್‌ ನಿರ್ಮಿಸಲಿದ್ದಾರೆಂಬ ವಿಷಯ ನಿಮಗೆ ಗೊತ್ತೇ ಇದೆ. ಸಹಜವಾಗಿಯೇ ಈ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಚಿತ್ರದ ಟೈಟಲ್‌ ಏನಿರಬಹುದು ಎಂಬ ಕುತೂಹಲ ಅನೇಕರಿಗಿತ್ತು. ಈಗ ಆ ಕುತೂಹಲಕ್ಕೆ ತೆರೆಬಿದ್ದಿದೆ. ಚಿತ್ರಕ್ಕೆ “ಅವತಾರ್‌ ಪುರುಷ’ ಎಂದು ಹೆಸರಿಡಲಾಗಿದೆ.

ಕನ್ನಡದಲ್ಲಿ ಅಂಬರೀಶ್‌ ಅವರು “ಅವತಾರ ಪುರುಷ’ ಎಂಬ ಸಿನಿಮಾ ಮಾಡಿದ್ದರು. ಹಾಗಂತ ಆ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇನ್ನು,  ಹಾಲಿವುಡ್‌ನ‌ಲ್ಲಿ “ಅವತಾರ್‌’ ಸಿನಿಮಾ ಬಂದು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ “ಅವತಾರ್‌’ನ ಮೇಕಪ್‌, ಗೆಟಪ್‌ ಎಲ್ಲರ ಮನಸೂರೆಗೊಂಡಿತ್ತು. ಈಗ ಶರಣ್‌ “ಅವತಾರ್‌ ಪುರುಷ’ದ ವಿಶೇಷತೆ ಏನು ಎಂದು ಕೇಳಬಹುದು.

ಹಾಲಿವುಡ್‌ನ‌ “ಅವತಾರ್‌’ ಚಿತ್ರದ ಪೋಸ್ಟರ್‌ ಅನ್ನು ಹೋಲುವಂತೆ “ಅವತಾರ್‌ ಪುರುಷ’ದ ಫೋಟೋಶೂಟ್‌ ಮಾಡಿದ್ದು, ಚಿತ್ರತಂಡ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿದೆ. ಚಿತ್ರದ ಟೈಟಲ್‌ ಫ‌ಂಟ್‌ ಕೂಡಾ “ಅವತಾರ್‌’ ಶೈಲಿಯಲ್ಲೇ ಇದೆ. ಹಾಗಂತ ಆ ಚಿತ್ರಕ್ಕೂ ಈ ಚಿತ್ರಕ್ಕೂ ಏನಾದರೂ ಸಂಬಂಧವಿದೆಯಾ ಎಂದು ನೀವು ಕೇಳುವಂತಿಲ್ಲ. ಏಕೆಂದರೆ ಇದು ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಸುನಿ, “ಇಲ್ಲಿ ಹೀರೋ ಜೂನಿಯರ್‌ ಆರ್ಟಿಸ್ಟ್‌. ಹಾಗಾಗಿ, ತುಂಬಾ ಅವತಾರಗಳನ್ನು ತಾಳುತ್ತಾನೆ. ಒಂದು ಹಂತದಲ್ಲಿ ಆತ ನಿಜ ಜೀವನದಲ್ಲಿ ಬೇರೆ ಅವತಾರವೆತ್ತಬೇಕಾಗಿ ಬರುತ್ತದೆ. ಅದಕ್ಕೊಂದು ಕಾರಣವಿರುತ್ತದೆ.  ಹಾಗಾಗಾಗಿ, ಟೈಟಲ್‌ ಕಥೆಗೆ ಚೆನ್ನಾಗಿ ಹೊಂದಿಕೆಯಾಗುತ್ತದೆ. ಜೊತೆಗೆ ಚಿತ್ರದಲ್ಲಿ ರಾಮಾಯಣದಲ್ಲಿ ಬರುವ ತ್ರಿಶಂಕು ಸ್ವರ್ಗ ಮತ್ತು ಮಹಾಭಾರತದ ಒಂದು ಎಳೆಯನ್ನು ಇಟ್ಟುಕೊಂಡು, ಅದನ್ನು ಇಂದಿನ ಕಾಲಮಾನಕ್ಕೆ ಅನ್ವಯಿಸಿದರೆ ಹೇಗಿರುತ್ತದೆ ಎಂಬ ಪರಿಕಲ್ಪನೆಯಲ್ಲಿ ಈ ಚಿತ್ರವನ್ನು ಮಾಡುತ್ತಿದ್ದೇವೆ’ ಎನ್ನುತ್ತಾರೆ. 

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಪುಷ್ಕರ್‌, “ಇದೊಂದು ಸಂಪೂರ್ಣ ಮನರಂಜನಾತ್ಮಕ ಸಿನಿಮಾವಾಗಿ ಎಲ್ಲರಿಗೂ ಇಷ್ಟವಾಗುತ್ತದೆ. ಶರಣ್‌ ಹಾಗೂ ಸುನಿ ಕಾಂಬಿನೇಶನ್‌ನಲ್ಲಿ ಈ ಥರದ ಚಿತ್ರವನ್ನು ಯಾವತ್ತೋ, ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಿರಲಿಲ್ಲ. ಈಗ ಅದಕ್ಕೆ ಸಮಯ ಬಂದಿದೆ. ಇದೊಂದು ಹೊಸಥರ‌ದ ಸಬ್ಜೆಕ್ಟ್ ಚಿತ್ರ. ನೋಡುಗರಿಗಂತೂ ಮನರಂಜನೆಗೆ ಮೋಸವಿಲ್ಲ’ ಎನ್ನುತ್ತಾರೆ. ಅಂದಹಾಗೆ, ಇಂದು ಶರಣ್‌ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅವರ “ಅವತಾರ್‌ ಪುರುಷ’ ಅವರಿಗೆ ಖುಷಿ ನೀಡಲಿದೆ. 

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.