ಶರಣ್ ಹೊಸ ಸಿನಿಮಾಕ್ಕೆ ಮುಹೂರ್ತ
Team Udayavani, Dec 18, 2021, 2:13 PM IST
ಶರಣ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಈ ಚಿತ್ರವನ್ನು ಕರ್ವಖ್ಯಾತಿಯ ನವನೀತ್ ನಿರ್ದೇಶಿಸುತ್ತಿದ್ದಾರೆ. ತರುಣ್ ಟಾಕೀಸ್ನಡಿ ಚಿತ್ರ ನಿರ್ಮಾಣವಾಗುತ್ತಿದೆ. ಈ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಚಿತ್ರದ ಮೊದಲ ಸನ್ನಿವೇಶಕ್ಕೆ ಮಾನಸ ತರುಣ್ ಆರಂಭ ಫಲಕ ತೋರಿದರೆ, ನಿರ್ದೇಶಕ ತರುಣ್ ಸುಧೀರ್ ಕ್ಯಾಮೆರಾ ಚಾಲನೆ ಮಾಡಿದರು. ಹಾರಾರ್ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ,ಕಥೆ, ಚಿತ್ರಕಥೆ ಬರೆದಿದ್ದಾರೆ.
ಇದನ್ನೂ ಓದಿ:‘ಕೆಜಿಎಫ್’ ಚಿತ್ರಕ್ಕೆ ಹೋಲಿಸಿ ಇದೀಗ ಸಖತ್ ಟ್ರೋಲ್ ಆದ ಅಲ್ಲು ಅರ್ಜುನ್ ಚಿತ್ರ ‘ಪುಷ್ಪ’
ಶರಣ್ ನಾಯಕರಾಗಿ ನಟಿಸುತ್ತಿದ್ದು, ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ. ಬೆಂಗಳೂರು ಹಾಗೂ ಉತ್ತರಖಂಡ್ ನಲ್ಲಿ ಚಿತ್ರೀಕರಣ ನಡೆಯಲಿದೆ. ಮಾಸಾಂತ್ಯಕ್ಕೆ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ.
ಸದ್ಯ ನಟ ಶರಣ್ ಅಭಿನಯದ “ಅವತಾರ್ ಪುರುಷ’ ಬಿಡುಗಡೆಗೆ ಬಂದಿದೆ. ಇದು ಔಟ್ಅಂಡ್ ಔಟ್ಕಾಮಿಡಿ ಸಿನಿಮಾ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಸುನಿ ಈ ಚಿತ್ರದ ನಿರ್ದೇಶಕರು. ಶರಣ್ ಎಂದರೆ ಕಾಮಿಡಿಗೆ ಫೇಮಸ್. ಇನ್ನು, ಸುನಿ ಅವರು ತಮ್ಮದೇ ಶೈಲಿಯ ಸಿನಿಮಾಗಳಿಂದ ಗುರುತಿಸಿಕೊಂಡವರು. ಈಗ ಅವರಿಬ್ಬರ ಕಾಂಬಿನೇಷನ್ನಲ್ಲಿ ಅವತಾರ ಪುರುಷ’ ಮೂಡಿಬಂದಿದ್ದು ಪ್ರೇಕ್ಷಕರಿಗೆ ಹೊಸ ಬಗೆಯ ಮನರಂಜನೆ ಸಿಗಲಿದೆ ಎಂಬ ಭರವಸೆ ನೀಡುತ್ತದೆ ಚಿತ್ರತಂಡ.
ವಿಶೇಷ ಏನೆಂದರೆ, ಈ ಸಿನಿಮಾದಲ್ಲಿ ಸಾಕಷ್ಟು ಜನ ಅನುಭವಿ ಕಲಾವಿದರು ನಟಿಸಿದ್ದಾರೆ. ಶ್ರೀನಗರಕಿಟ್ಟಿ ಒಂದು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಾಯಿಕುಮಾರ್, ಆಶುತೋಷ್ ರಾಣಾ, ಸುಧಾರಾಣಿ ಮುಂತಾದಕಲಾವಿದರ ಬಳಗ ಈ ಚಿತ್ರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…