ಲೇಡಿ ಗೆಟಪ್‌ನಲ್ಲಿ ಶರಣ್‌-ರವಿಶಂಕರ್‌


Team Udayavani, Aug 28, 2018, 12:09 PM IST

victory-1.jpg

ಶರಣ್‌ ಈ ಹಿಂದೆ “ಜಯಲಲಿತಾ’ ಚಿತ್ರದಲ್ಲಿ ಲೇಡಿ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದರು. ಆ ಗೆಟಪ್‌ನಲ್ಲಿ ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸಿದ್ದರು ಶರಣ್‌. ಈಗ ಮತ್ತೂಮ್ಮೆ ಲೇಡಿ ಗೆಟಪ್‌ನಲ್ಲಿ ನಗಿಸಲು ಶರಣ್‌ ರೆಡಿಯಾಗಿದ್ದಾರೆ. ಅದು “ವಿಕ್ಟರಿ-2′ ಚಿತ್ರಕ್ಕಾಗಿ. ಹೌದು, ಶರಣ್‌ “ವಿಕ್ಟರಿ-2′ ಚಿತ್ರಕ್ಕಾಗಿ ಮತ್ತೆ ಲೇಡಿ ಗೆಟಪ್‌ ಹಾಕಿದ್ದಾರೆ. ಈಗಾಗಲೇ ಅವರ ಗೆಟಪ್‌ನ ಫೋಟೋಗಳು ಬಿಡುಗಡೆಯಾಗಿದ್ದು, ಎಲ್ಲಾ ಕಡೆ ಓಡಾಡುತ್ತಿದೆ.

ಈ ಬಾರಿ ಕೇವಲ ಶರಣ್‌ ಅಷ್ಟೇ ಅಲ್ಲ, ಅವರ ಜೊತೆ ರವಿಶಂಕರ್‌ ಕೂಡಾ ಲೇಡಿ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಫೋಟೋಗಳನ್ನು ನೋಡಿದವರು ಸಿನಿಮಾ ಮಸ್ತ್ ಮಜಾ ಕೊಡೋದು ಗ್ಯಾರಂಟಿ ಎಂಬ ಲೆಕ್ಕಾಚಾರದಲ್ಲಿದ್ದಾರೆ. “ವಿಕ್ಟರಿ’ ಚಿತ್ರದಲ್ಲಿ ರವಿಶಂಕರ್‌ ಪ್ರಮುಖ ಪಾತ್ರ ಮಾಡಿದ್ದು, ಪ್ರೇಕ್ಷಕರು ಇಷ್ಟಪಟ್ಟಿದ್ದರು. ಈಗ “ವಿಕ್ಟರಿ-2’ನಲ್ಲೂ ಆ ಜೋಡಿ ಮುಂದುವರೆದಿದೆ.

ಇಬ್ಬರ ಲೇಡಿ ಗೆಟಪ್‌ ಚಿತ್ರದ ಪ್ರಮುಖ ಸನ್ನಿವೇಶವಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ವಿಶ್ವಾಸ ಚಿತ್ರತಂಡಕ್ಕಿದೆ. ಅಂದಹಾಗೆ, ಈ ದೃಶ್ಯ ಕೇವಲ ಒಂದೆರಡು ನಿಮಿಷ ಬಂದು ಹೋಗುವುದಿಲ್ಲ. ಬರೋಬ್ಬರಿ 40 ನಿಮಿಷಗಳ ಕಾಲ ಬರಲಿದೆ. ಕಥೆಯನ್ನು ಮುನ್ನಡೆಸುವಲ್ಲಿ ಈ ದೃಶ್ಯ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುವುದು ನಿರ್ದೇಶಕ ಸಂತು ಮಾತು. ಶರಣ್‌ ಈ ಗೆಟಪ್‌ಗಾಗಿ ತೂಕ ಇಳಿಸಿಕೊಂಡು ತಯಾರಾಗಿದ್ದು, ರವಿಶಂಕರ್‌ ಕೂಡಾ ಸಾಕಷ್ಟು ಪೂರ್ವತಯಾರಿ ಮಾಡಿಯೇ ಮೇಕಪ್‌ ಹಚ್ಚಿದ್ದಾಗಿ ಹೇಳುತ್ತಾರೆ ಸಂತು.

ಸುಮಾರು 25 ದಿನಗಳ ಕಾಲ ಈ ದೃಶ್ಯಗಳ ಚಿತ್ರೀಕರಣ ಮಾಡಲಾಗಿದೆಯಂತೆ. ಸೋಮವಾರವಷ್ಟೇ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಆಡಿಯೋ ಬಿಡುಗಡೆಯನ್ನು ಅದ್ಧೂರಿಯಾಗಿ ಮಾಡುವ ಆಲೋಚನೆ ಚಿತ್ರತಂಡಕ್ಕಿದೆ. ಈಗಾಗಲೇ ರಷ್ಯಾದ ಸುಂದರ ತಾಣಗಳಲ್ಲಿ ಹಾಡೊಂದನ್ನು ಚಿತ್ರೀಕರಿಸಿಕೊಂಡು ಬಂದಿದೆ ಚಿತ್ರತಂಡ. ಹಾಡಿನಲ್ಲಿ ಯಕ್ಷಗಾನ, ಹುಲಿ ಕುಣಿತ ಸೇರಿದಂತೆ ಕರುನಾಡಿನ ಹಲವು ಕಲಾಪ್ರಾಕಾರಗಳನ್ನು ಈ ಹಾಡಿನಲ್ಲಿ ಬಳಸಿಕೊಳ್ಳಲಾಗಿದೆ.

ವಿ.ನಾಗೇಂದ್ರ ಪ್ರಸಾದ್‌ ಬರೆದಿರುವ “ಪ್ಲೀಸು ಟ್ರಸ್ಟು .. ನಾನು ಚೀಪ್‌ ಅಂಡ್‌ ಬೆಸ್ಟು …’ ಹಾಡನ್ನು ರಷ್ಯಾದಲ್ಲಿ ಚಿತ್ರೀಕರಿಸಲಾಗಿದೆ. ಈ ಚಿತ್ರವನ್ನು ಮಾನಸ ತರುಣ್‌ ಹಾಗೂ ತರುಣ್‌ ಶಿವಪ್ಪ ಸೇರಿ ನಿರ್ಮಿಸುತಿದ್ದಾರೆ. ಚಿತ್ರದಲ್ಲಿ ಅಸ್ಮಿತಾ ಸೂದ್‌ ಹಾಗೂ ಅಪೂರ್ವ ನಾಯಕಿಯರಾಗಿ ನಟಿಸಿದ್ದಾರೆ. 

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MariGold: ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

MariGold ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.