“ರಣಭೂಮಿ’ಯಲ್ಲಿ ಶೀತಲ್‌ ಶೆಟ್ಟಿ ಖಳನಟಿ

ನ.8ರಂದು ಚಿತ್ರ ಬಿಡುಗಡೆ

Team Udayavani, Nov 3, 2019, 5:00 AM IST

Ranabhoom

ನಿರಂಜನ್‌ ಒಡೆಯರ್‌ ಹಾಗು ಕಾರುಣ್ಯರಾಮ್‌ ಅಭಿನಯದ “ರಣಭೂಮಿ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ನವೆಂಬರ್‌ 8 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ಶೀತಲ್‌ಶೆಟ್ಟಿ ನಟಿಸಿದ್ದು, ಇದೇ ಮೊದಲ ಬಾರಿಗೆ ಅವರು ನೆಗೆಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದು ವಿಶೇಷವೆಂದರೆ, ಇದುವರೆಗೆ ನೆಗೆಟಿವ್‌ ಪಾತ್ರದಲ್ಲಿ ಮಿಂಚುತ್ತಿದ್ದ ನಟ “ಭಜರಂಗಿ’ ಲೋಕಿ ಅವರಿಲ್ಲಿ ಪಾಸಿಟಿವ್‌ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರೆ.

“ಜೋಕಾಲಿ’ ಮೂಲಕ ನಿರ್ದೇಶಕರಾಗಿದ್ದ ಚಿರಂಜೀವಿ ದೀಪಕ್‌ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಂಜುನಾಥ್‌ ಪ್ರಭು ಹಾಗು ಹೇಮಂತ್‌ ದೇಶಹಳ್ಳಿ ಅವರ ಜೊತೆ ಸೇರಿ ನಿರ್ಮಾಣದಲ್ಲೂ ಚಿರಂಜೀವಿ ದೀಪಕ್‌ ಕೈ ಜೋಡಿಸಿದ್ದಾರೆ. “ರಣಭೂಮಿ’ ಅಂದಾಕ್ಷಣ, ಯುದ್ಧದ ನೆನಪಾಗುತ್ತೆ. ಇಲ್ಲಿ ಯಾವುದೇ ಯುದ್ಧ ಚಿತ್ರಣವಿಲ್ಲ. ಆದರೆ, ದ್ವೇಷ ಹೆಚ್ಚಾಗಿದ್ದು, ಮಾಸ್‌ ಪ್ರಿಯರಿಗೆ ಪಕ್ಕಾ ಆ್ಯಕ್ಷನ್‌ ಅಂಶಗಳು ಇಲ್ಲಿರಲಿವೆ.

ಶೀತಲ್‌ಶೆಟ್ಟಿ ಅವರು ಮೊದಲ ಸಲ ವಿಶೇಷ ಪಾತ್ರ ಎಂಬಂತೆ ನೆಗೆಟಿವ್‌ ರೋಲ್‌ ಮಾಡಿದ್ದಾರೆ. ಆ ಪಾತ್ರ, ನನಗೆ ಅದು ಬೇಕು ಅಂತ ಡಿಸೈಡ್‌ ಮಾಡಿದರೆ, ಏನಾದರೂ ಸರಿ, ಮಾಡಿ ಪಡೆದುಕೊಳ್ಳುವಂತಹ ಪಾತ್ರ. ಅದೊಂದು ಚಿತ್ರದ ಹೈಲೈಟ್‌. ಹಾಗೆಯೇ “ಭಜರಂಗಿ’ ಲೋಕಿ ಅವರೂ ಇಲ್ಲಿ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರೆ. ಅವರದೂ ಒಂದು ವಿಶೇಷತೆ ಇಲ್ಲಿದೆ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಚಿರಂಜೀವಿ ದೀಪಕ್‌.

ಅಂದಹಾಗೆ, ಚಿತ್ರದಲ್ಲಿ ನಿರಂಜನ್‌ ಒಡೆಯರ್‌ ಹಾಗು ಕಾರುಣ್ಯರಾಮ್‌ ಇಬ್ಬರೂ ಸಾಫ್ಟ್ವೇರ್‌ ಕ್ಷೇತ್ರದವರಾಗಿದ್ದು, ಕೆಲ ಅನಿರೀಕ್ಷಿತ ಘಟನೆಗಳಿಗೆ ಅವರು ಸಿಲುಕುತ್ತಾರೆ. ಅದರಿಂದ ಅವರ ಹೊರಬರುತ್ತಾರೋ, ಇಲ್ಲವೋ ಅನ್ನೋದು ಕಥೆ. ಇಲ್ಲಿ ಸಸ್ಪೆನ್ಸ್‌ ಜೊತೆ ಥ್ರಿಲ್ಲರ್‌ ಕೂಡ ಇದೆ. ಹಾಗೆಯೇ ಹಾರರ್‌ ಕೂಡ ಚಿತ್ರದ ಇನ್ನೊಂದು ಅಂಶ. ಸಿನಿಮಾ ಮುಗಿಯುವ ಹೊತ್ತಿಗೆ, ಇದು ಹಾರರ್‌ ಸಿನಿಮಾನಾ ಎಂಬಷ್ಟರ ಮಟ್ಟಿಗೆ ಚಿತ್ರ ಮೂಡಿಬಂದಿದ್ದು, ವಿಎಫೆಕ್ಟ್ ಇಡೀ ಚಿತ್ರವನ್ನು ಆವರಿಸಿಕೊಂಡಿದೆ.

ಇನ್ನು, ಚಿತ್ರದ ಶೀರ್ಷಿಕೆಗೆ “ಹುಟ್ಟು ಅನಿವಾರ್ಯ ಆದ್ರೆ ಸಾವು ಚರಿತ್ರೆ ಆಗಬೇಕು’ ಎಂಬ ಅಡಿಬರಹವಿದೆ. ಇಲ್ಲಿ ಹೋರಾಟದ ಹಾದಿ ಕುರಿತ ವಿಷಯವಿದೆ. ಬದುಕಿನ ಮೌಲ್ಯಗಳಿವೆ. ಚಿತ್ರವನ್ನು ಅಕ್ಷರ ಫಿಲಂಸ್‌ ವಿತರಣೆ ಮಾಡುತ್ತಿದ್ದು, ಚಿತ್ರಕ್ಕೆ ಪ್ರದೀಪ್‌ ವರ್ಮಾ ಸಂಗೀತ ನೀಡಿದ್ದಾರೆ. ನಾಗಾರ್ಜುನ್‌ ಛಾಯಾಗ್ರಹಣ ಮಾಡಿದ್ದಾರೆ. ಬಹುತೇಕ ಬೆಂಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಚಿತ್ರೀಕರಣ ನಡೆದಿದ್ದು, ಚಿತ್ರದಲ್ಲಿ ಒಂದು ಹಾಡಿದೆ.

ಉಳಿದಂತೆ “ಕೆಜಿಎಫ್’ ಸೇರಿದಂತೆ ಹಲವು ಚಿತ್ರಗಳಿಗೆ ಸಾಹಸ ನಿರ್ದೇಶಿಸಿರುವ ವಿಕ್ರಮ್‌, ಈ ಚಿತ್ರದಲ್ಲೊಂದು ಭರ್ಜರಿ ಫೈಟ್‌ ಮಾಡಿದ್ದಾರೆ. ಮಾನಸಿ ಫಿಲ್ಮ್ಸ್ ಬ್ಯಾನರ್‌ನಲ್ಲಿ ತಯಾರಾಗಿರುವ “ರಣಭೂಮಿ’ಗೆ “ಕರ್ವ’ ಖ್ಯಾತಿಯ ವೆಂಕಿ ಸಂಕಲನ ಮಾಡಿದ್ದಾರೆ. ಚಿತ್ರದಲ್ಲಿ ರಮೇಶ್‌ಭಟ್‌, ಡ್ಯಾನಿ ಕುಟ್ಟಪ್ಪ, ಮುನಿ ಸೇರಿದಂತೆ ಹಲವರು ನಟಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.