ಗೆದ್ದ ಖುಷಿಯಲ್ಲಿ ಶಿವಾಜಿ ಸುರತ್ಕಲ್‌-2: ಮುಂದಿನ ಭಾಗಕ್ಕೆ ತಯಾರಿ


Team Udayavani, Apr 21, 2023, 6:11 PM IST

ಗೆದ್ದ ಖುಷಿಯಲ್ಲಿ ಶಿವಾಜಿ ಸುರತ್ಕಲ್‌-2: ಮುಂದಿನ ಭಾಗಕ್ಕೆ ತಯಾರಿ

ಕಳೆದ ವಾರ ತೆರೆಕಂಡ “ಶಿವಾಜಿ ಸುರತ್ಕಲ್‌-2′ ಸಿನಿಮಾಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಿನಿಮಾ ಬಿಡುಗಡೆಯಾದ ಬಹುತೇಕ ಎಲ್ಲ ಕೇಂದ್ರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ. ದಿನದಿಂದ ದಿನಕ್ಕೆ ಸಿನಿಮಾಕ್ಕೆ ಪ್ರೇಕ್ಷಕರ ಸಂಖ್ಯೆ ಮತ್ತು ಬಾಕ್ಸಾಫೀಸ್‌ ಗಳಿಕೆ ಎರಡೂ ಏರಿಕೆಯಾಗುತ್ತಿದ್ದು, ಚಿತ್ರತಂಡದ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಇದೇ ಖುಷಿಯನ್ನು ಹಂಚಿಕೊಳ್ಳುವ ಸಲುವಾಗಿ ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, “ಶಿವಾಜಿ ಸುರತ್ಕಲ್‌-2′ ಬಿಡುಗಡೆಯ ನಂತರದ ಬೆಳವಣಿಗೆಗಳ ಬಗ್ಗೆ ಮಾತನಾಡಿತು. ಮೊದಲಿಗೆ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಮಾತಿಗಿಳಿದ ನಿರ್ಮಾಪಕ ಅನೂಪ್‌, “ಮೊದಲ ದಿನದಿಂದಲೇ ಸಿನಿಮಾಕ್ಕೆ ಒಳ್ಳೆಯ ಓಪನಿಂಗ್‌ ಸಿಕ್ಕಿದೆ. ಸಿನಿಮಾ ಬಿಡುಗಡೆಯಾದ ಎಲ್ಲ ಕೇಂದ್ರಗಳಲ್ಲೂ ಆಡಿಯನ್ಸ್‌ ಮತ್ತು ಥಿಯೇಟರ್‌ನವರ ಕಡೆಯಿಂದ ನಮ್ಮ ನಿರೀಕ್ಷೆಗೂ ಮೀರಿದ ರೆಸ್ಪಾನ್ಸ್‌ ಸಿಗುತ್ತಿದೆ. ಬಾಕ್ಸಾಫೀಸ್‌ ಕಲೆಕ್ಷನ್‌ ಕೂಡ ಏರಿಕೆಯಾಗುತ್ತಿದೆ. ಸಿನಿಮಾದ ಓಟಿಟಿ, ಡಬ್ಬಿಂಗ್‌ ಮತ್ತು ರೀಮೇಕ್‌ ರೈಟ್ಸ್‌ಗೆ ಸಾಕಷ್ಟು ಡಿಮ್ಯಾಂಡ್‌ ಬಂದಿದೆ’ ಎಂದರು.

“ಸಿನಿಮಾ ಎಲ್ಲ ವರ್ಗದ ಆಡಿಯನ್ಸ್‌ಗೂ ಇಷ್ಟವಾಗುತ್ತಿದೆ. ಸಿನಿಮಾ ನೋಡಿದ ಪ್ರತಿಯೊಬ್ಬರೂ “ಶಿವಾಜಿ’ಯ ಬಗ್ಗೆ ಮಾತನಾಡುತ್ತಿದ್ದಾರೆ. ಸಸ್ಪೆನ್ಸ್‌ ಮತ್ತು ಸೆಂಟಿಮೆಂಟ್‌ ಸಿನಿಮಾದಲ್ಲಿ ವರ್ಕೌಟ್‌ ಆಗಿದೆ. ಸಿನಿಮಾಕ್ಕೆ ಸಿಗುತ್ತಿರುವ ರೆಸ್ಪಾನ್ಸ್‌ ನೋಡಿ “ಶಿವಾಜಿ ಸುರತ್ಕಲ್‌-3′ ಮಾಡುವ ಯೋಚನೆ ಕೂಡ ಬಂದಿದೆ’ ಎನ್ನುವುದು ನಿರ್ದೇಶಕ ಆಕಾಶ್‌ ಶ್ರೀವತ್ಸ ಮಾತು.

ನಟ ರಮೇಶ್‌ ಅರವಿಂದ್‌ ಮಾತನಾಡಿ, “ನಾನು ಇಂಜಿನಿಯರಿಂಗ್‌ ಮಾಡುವಾಗ ನನ್ನ ಸ್ನೇಹಿತರ ಜೊತೆ ಸಿನಿಮಾ ನೋಡುತ್ತಿದ್ದೆ. ಬಹಳ ವರ್ಷಗಳ ನಂತರ ಅದೇ ಸ್ನೇಹಿತರ ಜೊತೆ ಮತ್ತೂಮ್ಮೆ “ಶಿವಾಜಿ ಸುರತ್ಕಲ್‌-2′ ಸಿನಿಮಾ ನೋಡುವಂತಾ ಯಿತು. ಸ್ನೇಹಿತರು, ಫ್ಯಾಮಿಲಿ ಎಲ್ಲರೂ ಸಿನಿಮಾ ನೋಡಿ ತುಂಬ ಒಳ್ಳೆಯ ಮಾತುಗಳನ್ನಾಡು ತ್ತಿದ್ದಾರೆ. ಒಂದು ಒಳ್ಳೆಯ ಸಿನಿಮಾಕ್ಕೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ರೆಸ್ಪಾನ್ಸ್‌ ಸಿಗುತ್ತಿರುವುದು ನಮಗೆ ಖುಷಿತಂದಿದೆ’ ಎಂದರು.

ನಟಿಯರಾದ ಮೇಘನಾ ಗಾಂವ್ಕರ್‌, ರಾಧಿಕಾ ನಾರಾಯಣ್‌, ಸಂಗೀತಾ ಶೃಂಗೇರಿ “ಶಿವಾಜಿ ಸುರತ್ಕಲ್‌-2′ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಮಾತನಾಡಿದರು. ನಟರಾದ ವಿನಾಯಕ ಜೋಶಿ, ರಘು ರಾಮನಕೊಪ್ಪ, ಬೇಬಿ ಆರಾಧ್ಯ, ವಿದ್ಯಾಮೂರ್ತಿ ಸೇರಿದಂತೆ ಚಿತ್ರದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಈ ವೇಳೆ ಹಾಜರಿದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.