ಚಿಕಿತ್ಸೆ ಬಳಿಕ ಲಂಡನ್‌ನಿಂದ ಬೆಂಗಳೂರಿಗೆ ಬಂದ ಶಿವಣ್ಣ

ಪ್ರೀತಿಯ ಸ್ವಾಗತ ಕೋರಿದ ಅಭಿಮಾನಿಗಳು

Team Udayavani, Jul 25, 2019, 3:03 AM IST

shivanna

ತೀವ್ರ ಭುಜದ ನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯಲು ಲಂಡನ್‌ಗೆ ತೆರಳಿದ್ದ ಶಿವರಾಜಕುಮಾರ್‌, ಮಂಗಳವಾರ ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಶಿವರಾಜಕುಮಾರ್‌ ಬರುವ ಸುದ್ದಿ ಹೊರಬೀಳುತ್ತಿದ್ದಂತೆಯೇ, ಅವರ ಅಪಾರ ಅಭಿಮಾನಿಗಳು, ಗೆಳೆಯರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿಶೇಷ ಸ್ವಾಗತ ಕೋರಿದ್ದಾರೆ. ಭುಜದ ನೋವು ಇದ್ದ ಕಾರಣ, ಅವರು ಹೆಚ್ಚಿನ ಚಿಕಿತ್ಸೆ ಪಡೆಯಲು ಲಂಡನ್‌ಗೆ ಹೋಗಿದ್ದರು.

ಜು.10 ರಂದು ವೈದ್ಯ ಆಂಡ್ರೂ ವ್ಯಾಲೇಸ್‌ ಅವರು ಶಿವಣ್ಣ ಅವರಿಗೆ ಯಶಸ್ವಿಯಾಗಿ ಸರ್ಜರಿ ನಡೆಸಿದ್ದರು. ಸರ್ಜರಿ ನಂತರ ಯಾವುದೇ ಸಮಸ್ಯೆ ಇಲ್ಲ ಎಂದು ವೈದರು ಸ್ಪಷ್ಟಪಡಿಸಿದ್ದರು. ಸ್ವಲ್ಪ ದಿನಗಳ ಕಾಲ ಅಲ್ಲೇ ವಿಶ್ರಾಂತಿ ಪಡೆದ ಶಿವರಾಜಕುಮಾರ್‌, ಮಂಗಳವಾರ ರಾತ್ರಿ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಈ ಸಂದರ್ಭದಲ್ಲಿ ಶಿವರಾಜಕುಮಾರ್‌ ಅವರ ಆಪ್ತ ಗೆಳೆಯರಾದ ನಿರ್ದೇಶಕ ರಘುರಾಮ್‌, ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ ಸೇರಿದಂತೆ ಅಭಿಮಾನಿಗಳು, ಹಿತೈಷಿಗಳು ಹಾಜರಿದ್ದು, ಸ್ವಾಗತಿಸಿದ್ದಾರೆ.

ಇನ್ನು, ಲಂಡನ್‌ನಲ್ಲಿ ಯಶಸ್ವಿ ಚಿಕಿತ್ಸೆ ಮಾಡಿ, ಪ್ರೀತಿಯ ಕಾಳಜಿ ತೋರಿದ ವೈದ್ಯ ಆಂಡ್ರೂ ವ್ಯಾಲೇಸ್‌ ಅವರಿಗೆ ಶಿವರಾಜಕುಮಾರ್‌ ಅವರು ತಮ್ಮ ಫೇಸ್‌ಬುಕ್‌ ಹಾಗು ಟ್ವಿಟ್ಟರ್‌ನಲ್ಲಿ ಧನ್ಯವಾದ ತಿಳಿಸಿ, “ಆಂಡ್ರೂ ವ್ಯಾಲೇಸ್‌ ಅವರು ಸದಾ ನಗುತ್ತಾ ಮತ್ತು ಪಾಸಿಟಿವ್‌ ಆಗಿಯೇ ಇರುತ್ತಾರೆ’ ಎಂದು ಬರೆದುಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಅಂದಹಾಗೆ, ಶಿವರಾಜಕುಮಾರ್‌ ಅವರು ಸದ್ಯ ಕೆಲ ತಿಂಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಬೇಕಿದೆ.

ನಂತರದ ದಿನಗಳಲ್ಲಿ ಅವರು ಮಾತಿನ ಭಾಗದ ಚಿತ್ರೀಕರಣದಲ್ಲಿ ತೊಡಗಿದರೂ, ಡ್ಯಾನ್ಸ್‌ ಹಾಗು ಫೈಟ್‌ ದೃಶ್ಯಗಳಲ್ಲಿ ತಮ್ಮ ಭುಜದ ನೋವು ಕಡಿಮೆಯಾದ ಬಳಿಕ ಆ ದೃಶ್ಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಶಿವರಾಜಕುಮಾರ್‌ ಈಗ ದ್ವಾರಕೀಶ್‌ ಬ್ಯಾನರ್‌ನಲ್ಲಿ “ಆಯುಷ್ಮಾನ್‌ಭವ’ ಹಾಗು ಪ್ರಮೋದ್‌ ಚಕ್ರವರ್ತಿ ನಿರ್ದೇಶನದ “ದ್ರೋಣ’ ನಿರ್ದೇಶನದ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುತೇಕ ಈ ಎರಡು ಚಿತ್ರಗಳ ಚಿತ್ರೀಕರಣ ಮುಗಿಯುವ ಹಂತದಲ್ಲಿವೆ.

ಟಾಪ್ ನ್ಯೂಸ್

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

arjun kapikad kaljiga movie

Arjun Kapikad; ತುಳುನಾಡಿನ ಕಲ್ಜಿಗದ ಕಥೆ: ಕರಾವಳಿ ಮಂದಿಯ ಮತ್ತೊಂದು ಸಾಹಸ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.