“ವಿಶ್ವಾಸಂ’ ನಿರ್ಮಾಪಕರ ಚಿತ್ರದಲ್ಲಿ ಶಿವಣ್ಣ
ಕನ್ನಡಕ್ಕೆ ಬಂದ ತಮಿಳು ನಿರ್ದೇಶಕ
Team Udayavani, Jan 4, 2020, 8:03 AM IST
ತಮಿಳು ನಿರ್ದೇಶಕರ ಸಿನಿಮಾವೊಂದರಲ್ಲಿ ಶಿವರಾಜಕುಮಾರ್ ನಟಿಸಲಿದ್ದಾರೆಂಬ ಸುದ್ದಿಯನ್ನು ನೀವು ಈ ಹಿಂದೆ ಕೇಳಿರಬಹುದು. ಆದರೆ, ಆ ಚಿತ್ರವನ್ನು ಯಾರು ನಿರ್ಮಾಣ ಮಾಡುತ್ತಾರೆ, ಅದರ ನಿರ್ದೇಶಕರು ಯಾರು? ಎಂಬ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಆದರೆ, ಈಗ ಬಹುತೇಕ ಎಲ್ಲವೂ ಅಂತಿಮವಾಗಿದೆ. ತಮಿಳಿನ ಸತ್ಯ ಜ್ಯೋತಿ ಫಿಲಂಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.
ಈ ಹಿಂದೆ “ವಿಶ್ವಾಸಂ’, “ವಿವೇಗಂ’, “ಪಟ್ಟಾಸ್’, “ತೋದರಿ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿರುವ ಸತ್ಯಜ್ಯೋತಿ ಫಿಲಂಸ್ ಈಗ ಶಿವರಾಜ ಕುಮಾರ್ ಸಿನಿಮಾ ಮೂಲಕ ಕನ್ನಡಕ್ಕೆ ಬರುತ್ತಿದೆ. ಈ ಚಿತ್ರವನ್ನು ರವಿ ಅರಸು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ತಮಿಳಿನಲ್ಲಿ “ಐನಾಗಾರನ್’ ಹಾಗೂ “ಎಟ್ಟಿ’ ಎನ್ನುವ ಸಿನಿಮಾ ನಿರ್ದೇಶಿಸಿರುವ ರವಿ ಈಗ ಶಿವರಾಜಕುಮಾರ್ ಅವರಿಗೆ ಸಿನಿಮಾ ಮಾಡಲಿದ್ದಾರೆ.
ಸದ್ಯ ಶಿವರಾಜಕುಮಾರ್ “ಭಜರಂಗಿ-2′ ಚಿತ್ರದಲ್ಲಿ ಬಿಝಿ ಇದ್ದಾರೆ. ಆ ಚಿತ್ರ ಮುಗಿದ ಬಳಿಕ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಈ ನಡುವೆಯೇ ಶಿವಣ್ಣ ಯೋಗಿ ಜಿ ರಾಜ್ ನಿರ್ದೇಶನದಲ್ಲೂ ನಟಿಸಲಿದ್ದು, ಆ ಚಿತ್ರದಲ್ಲಿ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೇ “ಭೈರತಿ ರಣಗಲ್’ ಚಿತ್ರದಲ್ಲೂ ಶಿವಣ್ಣ ನಟಿಸಲಿದ್ದು, ನಿರ್ಮಾಣ ಕೂಡಾ ಅವರದ್ದೇ ಇರಲಿದೆ. ಸದ್ಯ ಶಿವರಾಜಕುಮಾರ್ ಅವರ “ದ್ರೋಣ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ