ಬರ್ತ್‌ಡೇಗೆ ಶಿವಣ್ಣ ಗೈರು

ಚಿಕಿತ್ಸೆಗಾಗಿ ಲಂಡನ್‌ ಪಯಣ

Team Udayavani, Jun 12, 2019, 3:03 AM IST

Shivarajakumar-(4)

ಸಾಮಾನ್ಯವಾಗಿ ಚಿತ್ರರಂಗದಲ್ಲಿ ಸ್ಟಾರ್‌ ನಟರ ಬರ್ತ್‌ಡೇ ಅಂದ್ರೆ ಅವರ ಅಭಿಮಾನಿಗಳಿಗೆ ಹಬ್ಬವಿದ್ದಂತೆ. ತಮ್ಮ ನೆಚ್ಚಿನ ನಟನ ಬರ್ತ್‌ಡೇಯನ್ನು ವಿಭಿನ್ನವಾಗಿ ಆಚರಿಸಲು ಅಭಿಮಾನಿಗಳು ಕೂಡ ತಿಂಗಳ ಮೊದಲೇ ತಯಾರಿ ಮಾಡಿಕೊಳ್ಳುತ್ತಿರುತ್ತಾರೆ. ಯಾವುದೇ ಸ್ಟಾರ್ ಇರಲಿ ತಮ್ಮ ಬರ್ತ್‌ಡೇ ದಿನವನ್ನು ಅಭಿಮಾನಿಗಳ ಜೊತೆ ಆಚರಿಸುವುದು, ಆ ದಿನವನ್ನು ಅಭಿಮಾನಿಗಳಿಗಾಗಿ ಮೀಸಲಿಡುವುದು ಚಿತ್ರರಂಗದಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ.

ಇನ್ನು ಸುಮಾರು ಮೂರು ದಶಕಗಳಿಂದ ನಟ ಶಿವರಾಜಕುಮಾರ್‌ ಕೂಡ ತಮ್ಮ ಬರ್ತ್‌ಡೇಯನ್ನು ಅಭಿಮಾನಿಗಳ ಸಮ್ಮುಖದಲ್ಲೇ ಆಚರಿಸಿಕೊಂಡು ಈ ಸಂಪ್ರದಾಯವನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬರುತ್ತಿದ್ದಾರೆ. ಕೆಲ ಸಂದರ್ಭಗಳಲ್ಲಿ ಅದ್ಧೂರಿ ಅಲ್ಲದಿದ್ದರೂ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಸರಳವಾಗಿ ಹುಟ್ಟುಹಬ್ಬ ಆಚರಿಸಿದ್ದೂ ಇದೆ. ಆದರೆ ಈ ಬಾರಿ ಮಾತ್ರ ಈ ಸಂಪ್ರದಾಯ ಸ್ವಲ್ಪ ಬದಲಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹೌದು, ಇದೇ ಜುಲೈ 12ರಂದು ಶಿವರಾಜಕುಮಾರ್‌ ಅವರ ಹುಟ್ಟುಹಬ್ಬವಿದ್ದು, ಜುಲೈ ಮೊದಲ ವಾರದಲ್ಲೇ ಶಿವಣ್ಣ ವಿದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಹಾಗಾಗಿ ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಶಿವಣ್ಣ ಕರ್ನಾಟಕದಲ್ಲಿ ಇರುವುದಿಲ್ಲ ಎನ್ನಲಾಗುತ್ತಿದೆ. ಶಿವರಾಜ್‌ ಕುಮಾರ್‌ ಭುಜದ ನೋವಿನಿಂದ ಬಳಲುತ್ತಿದ್ದು, ಅದರ ಚಿಕಿತ್ಸೆಗಾಗಿ ಲಂಡನ್‌ಗೆ ತೆರಳಬೇಕಾಗಿದೆ.

ಜುಲೈ 6 ರಂದು ಲಂಡನ್‌ಗೆ ಪ್ರಯಾಣ ಬೆಳೆಸಲಿರುವ ಶಿವರಾಜ ಕುಮಾರ್‌ ಸುಮಾರು 20 ದಿನಗಳ ಕಾಲ ಅಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ. ಜುಲೈ ಕೊನೆವಾರ ಚಿಕಿತ್ಸೆ ಮುಗಿಸಿಕೊಂಡು ಶಿವಣ್ಣ ಬೆಂಗಳೂರಿಗೆ ವಾಪಾಸ್ಸಾಗಲಿದ್ದಾರೆ. ಹೀಗಾಗಿ ಈ ಬಾರಿ ಹುಟ್ಟುಹಬ್ಬದ ದಿನ ಅಭಿಮಾನಿಗಳಿಗೆ ಶಿವಣ್ಣ ಸಿಗುತ್ತಿಲ್ಲ .

ಇನ್ನು ಈ ವಿಷಯ ಸಹಜವಾಗಿಯೇ ಶಿವರಾಜ್‌ ಕುಮಾರ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದ್ದು, ಕೊನೆ ಕ್ಷಣದಲ್ಲಿ ಶಿವಣ್ಣ ಅವರ ಕಾರ್ಯಕ್ರಮದಲ್ಲಿ ಏನಾದರೂ ಬದಲಾವಣೆಗಳು ಆಗಬಹುದಾ, ಎಂದಿನಂತೆ ಅಭಿಮಾನಿಗಳ ಜೊತೆ ಶಿವಣ್ಣ ಹುಟ್ಟುಹಬ್ಬ ಆಚರಿಸಿಕೊಳ್ಳಬಹುದಾ ಎಂಬ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು.

ಈ ಬಾರಿಯ ಹುಟ್ಟುಹಬ್ಬಕ್ಕೆ ನಾನಿರೋದಿಲ್ಲ. ಚಿಕಿತ್ಸೆಗಾಗಿ ಲಂಡನ್‌ಗೆ ಹೋಗುತ್ತಿದ್ದೇನೆ. ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ನಂತರವೇ ಹೋಗಬೇಕೆಂದುಕೊಂಡಿದ್ದೆ. ಆದರೆ, ನನಗೆ ಅಲ್ಲಿನ ವೈದ್ಯರು ಸಿಗೋದು ಜುಲೈ 10ಕ್ಕೆ. ಆ ದಿನ ನಾನು ಅಲ್ಲಿರಲೇಬೇಕು. ಹಾಗಾಗಿ, ಜುಲೈ 6 ರಂದು ಹೋಗಿ, ಜುಲೈ 21 ರಂದು ವಾಪಾಸ್‌ ಬರುತ್ತಿದ್ದೇನೆ.
-ಶಿವರಾಜ್‌ಕುಮಾರ್‌, ನಟ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.