ಮತ್ತೆ ಸುದೀಪ್ ಜೊತೆ ಸಿನಿಮಾ ಮಾಡ್ತೀನಿ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
Team Udayavani, Mar 16, 2021, 1:08 PM IST
ಬೆಂಗಳೂರು : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜತೆ ಮತ್ತೊಮ್ಮೆ ಸಿನಿಮಾ ಮಾಡುವುದಾಗಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿಲಾಷೆ ವ್ಯಕ್ತಪಡಿಸಿದ್ದಾರೆ.
ಕಿಚ್ಚ ಸುದೀಪ್ ಅವರು ಚಿತ್ರರಂಗಕ್ಕೆ ಕಾಲಿರಿಸಿ 25 ವರ್ಷ ಪೂರೈಸಿದ ಹಿನ್ನೆಲೆ ಸೋಮವಾರ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು. ಕೋಟಿಗೊಬ್ಬ 3 ಚಿತ್ರತಂಡದಿಂದ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಪ್ರೇಮಲೋಕದ ದೊರೆ ರವಿಚಂದ್ರನ್, ನಟ ರಮೇಶ್ ಅರವಿಂದ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹಾಗೂ ಆರ್ಮುಗಂ ಖ್ಯಾತಿಯ ರವಿಶಂಕರ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ದಿಗ್ಗಜರು ಹಾಜರಿದ್ದರು.
ಇಳಿಸಂಜೆಯಲ್ಲಿ ನಡೆದ ಬೆಳ್ಳಿ ಮಹೋತ್ಸವದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ತಮ್ಮ ಮನದಾಳದ ಮಾತೊಂದನ್ನು ಹೊರಹಾಕಿದರು. ಸ್ಯಾಂಡಲ್ವುಡ್ ಬಾದ್ ಷಾ ಕಿಚ್ಚ ಸುದೀಪ್ ಜತೆ ಬಹುತಾರಾಗಣದ ಸಿನಿಮಾ ಮಾಡುವುದಾಗಿ ಹೇಳಿಕೊಂಡರು.
ಈ ಹಿಂದೆ ‘ದಿ ವಿಲನ್’ ಸಿನಿಮಾದಲ್ಲಿ ಸುದೀಪ್ ಹಾಗೂ ಶಿವಣ್ಣ ತೆರೆ ಹಂಚಿಕೊಂಡಿದ್ದರು. ಜೋಗಿ ಪ್ರೇಮ್ ನಿರ್ದೇಶನದ ಈ ಸಿನಿಮಾ ಬಹುನಿರೀಕ್ಷೆಯಿಂದಲೇ ತೆರೆಗೆ ಅಪ್ಪಳಿಸಿತ್ತು. ಆದರೆ, ಸಿನಿಮಾ ಬಿಡುಗಡೆಯ ನಂತರ ನಡೆದ ಕೆಲ ಬೆಳವಣೆಗೆಗಳು ಸಿನಿಮಾ ವಿವಾದದ ಸುಳಿಗೆ ಸಿಲುಕುವಂತೆ ಮಾಡಿತ್ತು. ಶಿವಣ್ಣನ ಅಭಿಮಾನಿಗಳು ಪ್ರೇಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ‘ದಿ ವಿಲನ್’ ಸಿನಿಮಾ ಬಳಿಕ ಮತ್ತೊಂದು ಬಾರಿ ಈ ಉಭಯ ನಟರು ಒಂದೇ ಚಿತ್ರದಲ್ಲಿ ಒಟ್ಟಾಗಿ ನಟಿಸುವವರೇ ? ಎನ್ನುವ ಪ್ರಶ್ನೆ ಮೂಡಿತ್ತು. ಇದೀಗ ಈ ಪ್ರಶ್ನೆಗೆ ಶಿವಣ್ಣ ಉತ್ತರ ನೀಡಿದ್ದು, ಕಿಚ್ಚನ ಜತೆ ಮತ್ತೆ ತೆರೆ ಹಂಚಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…