ವಿಭಿನ್ನ ಕಥೆಯತ್ತ ಶಿವಣ್ಣ ಚಿತ್ತ


Team Udayavani, May 30, 2017, 11:41 AM IST

Bangara-Son-Of-Bangarada-Ma.jpg

ಉರಿಯೋ ಸೂರ್ಯ ಒಬ್ಬ ಸಾಕು 
ಭೂಮಿ ಬೆಳಗೋಕೆ, ಈ ಭೂಮಿ ಬೆಳಗೋಕೆ
ರಾಜೀವ ಒಬ್ಬ ಸಾಕು 
ಹಳ್ಳಿನಾ ಬೆಳಗೋಕೆ, ಈ ಹಳ್ಳಿನಾ ಬೆಳಗೋಕೆ

“ಬಂಗಾರದ ಮನುಷ್ಯ’ ಚಿತ್ರದ ಹಾಡೊಂದರಲ್ಲಿ ಬರುವ ಈ ಸಾಲುಗಳು ಶಿವರಾಜ ಕುಮಾರ್‌ ಅವರಿಗೆ ತುಂಬಾ ಇಷ್ಟವಂತೆ. ಯಾರಿಗಾದರೂ ಸ್ಫೂರ್ತಿ ತುಂಬುವ ಈ ಸಾಲುಗಳನ್ನು ಕೇಳಿದಾಗಲೆಲ್ಲ ಶಿವಣ್ಣ ಖುಷಿಯಾಗುತ್ತಾರೆ. ಆ ಮಟ್ಟಿಗೆ ಅವರು “ಬಂಗಾರದ ಮನುಷ್ಯ’ ಚಿತ್ರವನ್ನು ಇಷ್ಟಪಟ್ಟಿದ್ದಾರೆ. ಆ ಚಿತ್ರದ ನಂತರ ಅವರಿಗೆ “ರಾಜೀವ’ ಎಂಬ ಹೆಸರು ತುಂಬಾ ಇಷ್ಟವಾಗಿಬಿಟ್ಟಿದೆ. ಏಕೆಂದರೆ, ಆ ಹೆಸರಿನಲ್ಲೆ ಒಂದು ಪವರ್‌ ಇದೆ, ಸ್ಫೂರ್ತಿ ಇದೆ ಎಂಬುದು ಅವರ ಮಾತು.

“ನನಗೆ “ಬಂಗಾರದ ಮನುಷ್ಯ’ ಚಿತ್ರದ ಈ ಸಾಲುಗಳು ತುಂಬಾ ಇಷ್ಟ. ಅದು ಸ್ಫೂರ್ತಿ ತುಂಬುವಂತಹ ಸಾಲುಗಳು. ಎಷ್ಟೋ ಜನ ಓದಿ ಪಟ್ಟಣ ಸೇರಿದರೂ ರಾಜೀವ ಮಾತ್ರ ಕೃಷಿಯತ್ತ ವಾಲುವ ಸನ್ನಿವೇಶವನ್ನು ಕಟ್ಟಿಕೊಟ್ಟ ರೀತಿ ಅದ್ಭುತ’ ಎಂದು ಖುಷಿಯಿಂದ ಹೇಳುತ್ತಾರೆ. “ಬಂಗಾರದ ಮನುಷ್ಯ’ ಆ ಸನ್ನಿವೇಶವನ್ನು ಶಿವಣ್ಣ ಈಗ ನೆನಪು ಮಾಡಿಕೊಳ್ಳಲು ಕಾರಣ “ಬಂಗಾರ ಸನ್‌ಆಫ್ ಬಂಗಾರದ ಮನುಷ್ಯ’.

ರೈತರ ಸಮಸ್ಯೆಯನ್ನೇ ಮೂಲವಾಗಿಟ್ಟುಕೊಂಡು ಬಂದ ಈ ಸಿನಿಮಾ ಈಗ ಶಿವರಾಜಕುಮಾರ್‌ ಅವರ ಕೆರಿಯರ್‌ನಲ್ಲಿ ಮತ್ತೂಂದು ವಿಭಿನ್ನ ಸಿನಿಮಾವಾಗಿ ಗುರುತಿಸಿಕೊಂಡಿದೆ. ಸಿನಿಮಾ ನೋಡಿದವರೆಲ್ಲ ಈ ತರಹದ ಒಂದು ಹೊಸ ಬಗೆಯ, ಕಮರ್ಷಿಯಲ್‌ ಜೊತೆಗೆ ಕಾಳಜಿ ಇರುವ ಸಿನಿಮಾದಲ್ಲಿ ತೊಡಗಿಸಿಕೊಂಡ ಬಗ್ಗೆ ಶಿವರಾಜಕುಮಾರ್‌ ಅವರಿಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಯಾರೇ ಸಿಕ್ಕಲಿ, “ನಿಮ್ಮ ಬಂಗಾರ ಸಿನಿಮಾ ನೋಡಿದೆ. ತುಂಬಾ ವಿಭಿನ್ನವಾಗಿದೆ. ಒಳ್ಳೆಯ ಸಂದೇಶವಿದೆ’ ಎನ್ನುತ್ತಿದ್ದಾರಂತೆ. ಇತ್ತೀಚೆಗೆ ಸಿನಿಮಾ ನೋಡಿದವರೊಬ್ಬರು ಫೋನ್‌ ಮಾಡಿ ಖುಷಿ ವ್ಯಕ್ತಪಡಿಸಿದ್ದಲ್ಲದೇ, ಮನೆಯವರಿಂದಲೂ ಫೋನ್‌ ಮಾಡಿಸಿ ಈ ತರಹದ ಸಿನಿಮಾ ಮಾಡಿದ ಬಗ್ಗೆ ಸಂತಸ ಹಂಚಿಕೊಂಡರಂತೆ. “ಕೇವಲ ನನ್ನ ಅಭಿಮಾನಿಗಳಷ್ಟೇ ಅಲ್ಲದೇ, ಸಿನಿಮಾ ನೋಡಿದ ಪ್ರತಿಯೊಬ್ಬರಿಂದಲೂ “ಬಂಗಾರ’ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ’ ಎಂದು ಖುಷಿಯಿಂದ ಹೇಳುತ್ತಾರೆ.

ಶಿವರಾಜಕುಮಾರ್‌ ಅವರಿಗೂ ಹೊಸ ಬಗೆಯ, ಸಂದೇಶವಿರುವ ಸಿನಿಮಾಗಳನ್ನು ಮಾಡಲು ಇಷ್ಟವಂತೆ. “ಎಷ್ಟು ದಿನಾಂತ ನಾನು ಅದೇ ಫೈಟ್‌, ಅದೇ ಡ್ಯಾನ್ಸ್‌ ಮಾಡಿಕೊಂಡಿರಲಿ. ನನಗೂ ಬೇರೆ ರೀತಿಯ ಸಿನಿಮಾಗಳನ್ನು ಮಾಡಬೇಕೆಂಬ ಆಸೆ ಇದೆ. ಈಗ ಅಂತಹ ಕಥೆಗಳು ಸಿಗುತ್ತಿವೆ. ಮುಂದೆ ಬರಲಿರುವ “ಲೀಡರ್‌’ನಲ್ಲಿ ಯೋಧರ ಬಗ್ಗೆ ಹೇಳಿದ್ದೇವೆ. ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲುವ ಜೊತೆಗೆ ಕಮರ್ಷಿಯಲ್‌ ಆಗಿಯೂ ಹೇಳಬೇಕು. ಅತಿಯಾಗಿ ಹೇಳಿದರೆ ಅದು ಡಾಕ್ಯುಮೆಂಟರಿಯಾಗುತ್ತದೆ’ ಎನ್ನುವುದು ಶಿವರಾಜಕುಮಾರ್‌ ಮಾತು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.