ನೇತ್ರದಾನಕ್ಕೆ ಮುಂದಾದ ಶಿವಣ್ಣ
Team Udayavani, Mar 31, 2021, 2:18 PM IST
ಕನ್ನಡ ಚಿತ್ರರಂಗದ ಮೇರುನಟ, ನಟ ಸಾರ್ವಭೌಮ ಡಾ.ರಾಜಕುಮಾರ್ ನೇತ್ರದಾನ ಮಾಡಿದ್ದು ಬಹುತೇಕರಿಗೆ ಗೊತ್ತೇ ಇದೆ. ಡಾ. ರಾಜಕುಮಾರ್ ನಿಧನದ ನಂತರ ಅವರ ಕಣ್ಣುಗಳನ್ನು ಅವರ ಇಚ್ಛೆಯಂತೆ ದಾನಮಾಡಲಾಗಿತ್ತು. ಡಾ. ರಾಜಕುಮಾರ್ ಅವರ ಈ ಸಾರ್ಥಕ ಕಾರ್ಯದಿಂದ ಪ್ರೇರಣೆಗೊಂಡು, ಅದೆಷ್ಟೋ ಮಂದಿ ಸ್ವಯಂಪ್ರೇರಿತ ನೇತ್ರದಾನಕ್ಕೆ ಮುಂದಾಗುತ್ತಿದ್ದು, ನೇತ್ರದಾನ ಮಾಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಈಗ ಡಾ. ರಾಜಕುಮಾರ್ ಅವರಂತೆಯೇ, ಅವರ ಪುತ್ರ ಶಿವರಾಜಕುಮಾರ್ ಕೂಡ ತಮ್ಮ ಕಣ್ಣುಗಳನ್ನು ದಾನ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ಡಾ.ರಾಜಕುಮಾರ್ ಅವರ ನೇತ್ರವನ್ನು ದಾನ ಮಾಡಲಾದ ನಾರಾಯಣ ನೇತ್ರಾಲಯದಲ್ಲಿಯೇ ಶಿವರಾಜ ಕುಮಾರ್ ಅವರು ತಮ್ಮ ಕಣ್ಣುಗಳನ್ನು ದಾನಮಾಡಲು ಒಪ್ಪಿಗೆ ಸೂಚಿಸಿ ಸಹಿ ಮಾಡಿದ್ದಾರೆ.
ಇದನ್ನೂ ಓದಿ:ಶತಕೋಟಿ ವೀರ ದರ್ಶನ್ : ನೂರು ಕೋಟಿ ಗಳಿಸಿದ ‘ರಾಬರ್ಟ್’
ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಕನ್ನಡದ “ಅಕ್ಷಿ’ ಚಿತ್ರತಂಡ, ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಿವರಾಜಕುಮಾರ್ ನೇತ್ರದಾನ ಮಾಡಲು ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿದ್ದಾರೆ. ಜೊತೆಗೆ ನೇತ್ರದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.
ಅಂದ ಹಾಗೆ, 1994 ರಲ್ಲಿ ಡಾ. ರಾಜಕುಮಾರ್ ನೇತ್ರ ಬ್ಯಾಂಕ್ ಸ್ಥಾಪನೆ ಆಗಿತ್ತು. ಅಂದು ಡಾ. ರಾಜಕುಮಾರ್ ನೇತ್ರ ಬ್ಯಾಂಕ್ ಉದ್ಘಾಟನೆ ಮಾಡಿ, ನೇತ್ರದಾನಕ್ಕೆ ಒಪ್ಪಿಗೆ ನೀಡಿದ್ದರು. ರಾಜಕುಮಾರ್ ಮರಣದ ನಂತರ ಅವರ ನೇತ್ರವನ್ನು ಸಂರಕ್ಷಿಸಿ ಕಣ್ಣಿಲ್ಲದವರಿಗೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ