ಮೆಲ್ಬರ್ನ್ನಲ್ಲಿ ಶಿವರಾಜಕುಮಾರ್‌ಗೆ ಸನ್ಮಾನ


Team Udayavani, Nov 12, 2018, 11:20 AM IST

shivanna.jpg

ಶಿವರಾಜಕುಮಾರ್‌ ಇತ್ತೀಚೆಗೆ ಆಸ್ಟ್ರೇಲಿಯಾಗೆ ತೆರಳಿದ್ದು ಎಲ್ಲರಿಗೂ ಗೊತ್ತು. ಆದರೆ, ಅಲ್ಲಿನ ಮೆಲ್ಬರ್ನ್ ಕನ್ನಡ ಸಂಘ ಅವರಿಗೊಂದು ಪ್ರಶಸ್ತಿ ನೀಡಿ ಗೌರವಿಸಿದ್ದು ಮಾತ್ರ ಬಹಳಷ್ಟು ಮಂದಿಗೆ ಗೊತ್ತಿರಲಿಕ್ಕಿಲ್ಲ. ಹೌದು, ಆಸ್ಟ್ರೇಲಿಯಾದ “ಮೆಲ್ಬರ್ನ್ ಕನ್ನಡ ಸಂಘ’ ಇತ್ತೀಚೆಗೆ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದೆ. ಆ ಕಾರ್ಯಕ್ರಮಕ್ಕೆ ನಟ ಶಿವರಾಜಕುಮಾರ್‌ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.

ಮೆಲ್ಬರ್ನ್ ಕನ್ನಡ ಸಂಘದ ಆಹ್ವಾನದಿಂದಾಗಿ, ಭಾಗವಹಿಸಿದ್ದ ಶಿವರಾಜಕುಮಾರ್‌ ಅವರಿಗೆ ಅಲ್ಲಿನ ಕನ್ನಡ ಸಂಘ “ಮುಂಬಾ ಸ್ಟಾರ್‌’ ಪ್ರಶಸ್ತಿ ನೀಡಿ ಆತ್ಮೀಯವಾಗಿ ಗೌರವಿಸಿದೆ. 1955 ರಿಂದಲೂ “ಮುಂಬಾ ಫೆಸ್ಟಿವಲ್‌’ ಎಂಬ ಹೆಸರಿನಲ್ಲಿ ಆಚರಿಸಿಕೊಂಡು ಬರಲಾಗುತ್ತಿರುವ, ನಾಲ್ಕು ದಿನಗಳ ಕಾಲ ನಡೆಯುವ ಈ ಕನ್ನಡ ಉತ್ಸವದಲ್ಲಿ ಪ್ರತಿವರ್ಷ ಕರ್ನಾಟಕದಲ್ಲಿ ವಿವಿಧ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಸಾಧಕರನ್ನು ಆಹ್ವಾನಿಸಿ, ಅವರಿಗೆ ಪ್ರೀತಿಯಿಂದ ಸನ್ಮಾನಿಸಿ, ಗೌರವಿಸಲಾಗುತ್ತದೆ.

ಈ ಬಾರಿ ಶಿವರಾಜಕುಮಾರ್‌ ಅವರನ್ನು ಆಹ್ವಾನಿಸಿದ್ದ ಮೆಲ್ಬರ್ನ್ ಕನ್ನಡ ಸಂಘ, ಕನ್ನಡ ಚಿತ್ರರಂಗದಲ್ಲಿ ಗಣನೀಯ ಸಾಧನೆ ಮಾಡಿರುವ ಶಿವರಾಜಕುಮಾರ್‌ ಅವರಿಗೆ ‘ಮುಂಬಾ ಸ್ಟಾರ್‌’ ಪ್ರಶಸ್ತಿ ನೀಡಿ ಗೌರವಿಸಿದೆ. ಇದೇ ವೇಳೆ ಮೆಲ್ಬರ್ನ್ ಕನ್ನಡ ಸಂಘ ‘ಕನ್ನಡ ಭವನ’ ನಿರ್ಮಾಣ ಮಾಡಲು ಮುಂದಾಗಿದ್ದು, ಈ ಕನ್ನಡ ಭವನ ನಿರ್ಮಾಣ ಕಾರ್ಯಕ್ಕೆ ಶಿವರಾಜಕುಮಾರ್‌ ಅವರು ಚಾಲನೆ ನೀಡುವ ಮೂಲಕ ಶುಭ ಹಾರೈಸಿದ್ದಾರೆ.

ಇನ್ನು ಮೆಲ್ಬರ್ನ್ನಲ್ಲಿ ಕನ್ನಡ ಶಾಲೆಯನ್ನು ತೆರೆದಿರುವ ಅಲ್ಲಿನ ಕನ್ನಡ ಸಂಘ, ಅಲ್ಲಿನ ಆಸಕ್ತ ಮಕ್ಕಳಿಗೆ ಉಚಿತವಾಗಿ ಕನ್ನಡ ಭಾಷೆಯನ್ನು ಕಲಿಸುತ್ತಿದೆ. ಕನ್ನಡ ಸಾಹಿತ್ಯ, ಸಂಸ್ಕೃತಿಗೆ ಸಂಬಂಧಿಸಿದ ಪುಸ್ತಕಗಳ ಗ್ರಂಥಾಲಯ ಕೂಡ ಇದೆ. 32 ವರ್ಷಗಳ ಅವಧಿಯಲ್ಲಿ ಕನ್ನಡದ ಅನೇಕ ಕಲಾವಿದರು, ಸಾಹಿತಿಗಳು, ನಾಟಕಕಾರರು ಮೆಲ್ಬರ್ನ್ ಕನ್ನಡ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ¨ªಾರೆ. ಮೆಲ್ಬರ್ನ್ ಕನ್ನಡ ಸಂಘದ ಚಟುವಟಿಕೆಗಳ ಮಾಹಿತಿ ಪಡೆದ ಶಿವರಾಜಕುಮಾರ್‌, ಸಂಘದ ಕಾರ್ಯವನ್ನು  ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.