ಶಿವರಾಜಕುಮಾರ್‌ ‘ಬೈರಾಗಿ’ ರೋಡ್‌ ಶೋ


Team Udayavani, Jun 19, 2022, 12:49 PM IST

shivarajkumar road show for bairagi promotion

ಶಿವಣ್ಣ ನಟನೆಯ “ಬೈರಾಗಿ’ ಚಿತ್ರ ಜುಲೈ 01 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು “ಬೈರಾಗಿ’ ರೋಡ್‌ ಶೋ ನಡೆಯಲಿದೆ. ಹೌದು, ಸಿನಿಮಾದ ಪ್ರಚಾರಾರ್ಥ ಚಿತ್ರತಂಡ ಬೇರೆ ಬೇರೆ ಊರುಗಳಿಗೆ ತೆರಳಲಿದೆ.

ಜೂನ್‌ 24ರಂದು ಬೆಂಗಳೂರಿನಿಂದ ಶುರುವಾಗುವ ರೋಡ್‌ ಶೋ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಮೈಸೂರು ತಲುಪಲಿದೆ. ನಂಜನಗೂಡು ಮಾರ್ಗವಾಗಿ ಚಾಮರಾಜನಗರ ತಲುಪಲಿದ್ದು, ಜೂನ್‌ 25ರಂದು ಕಾರ್ಯಕ್ರಮ ನಡೆಯಲಿದೆ.

ಚಾಮರಾಜನಗರದಲ್ಲಿ “ಬೈರಾಗಿ’ ಚಿತ್ರದ ಅದ್ಧೂರಿ ಪ್ರೀ ರಿಲೀಸ್‌ ಇವೆಂಟ್‌ ಆಯೋಜಿಸಲಾಗಿದೆ. ಶಿವರಾಜ್‌ಕುಮಾರ್‌ ನಟನೆಯ 123ನೇ ಚಿತ್ರ “ಬೈರಾಗಿ’ಯಾಗಿದ್ದು, ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಚಿತ್ರವನ್ನು ವಿಜಯ್‌ ಮಿಲ್ಟನ್‌ ನಿರ್ದೇಶಿಸಿದ್ದು, ಕೃಷ್ಣ ಸಾರ್ಥಕ್‌ ನಿರ್ಮಿಸಿದ್ದಾರೆ. ಈಗಾಗಲೇ ಒಟಿಟಿ, ಸ್ಯಾಟಲೈಟ್‌ ಹಕ್ಕುಗಳು ಸೇಲ್‌ ಆಗಿದ್ದು ಬಿಡುಗಡೆಗೂ ಮುಂಚೆಯೇ “ಬೈರಾಗಿ’ ಹತ್ತು ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿಕೊಂಡಿದೆ. ಈ ವಿಚಾರವನ್ನು ಸ್ವತಃ ನಿರ್ಮಾಪಕರೇ ಒಪ್ಪಿಕೊಂಡಿದ್ದಾರೆ.

“ಬೈರಾಗಿ’ ಚಿತ್ರ ಆ್ಯಕ್ಷನ್‌ ಜೊತೆಗೆ ಎಮೋಶನ್‌ ಮೇಲೆ ಸಾಗುವ ಚಿತ್ರವಾಗಿದ್ದು, ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎನ್ನುವುದು ಶಿವಣ್ಣ ಮಾತು. ಚಿತ್ರದ ಬಗ್ಗೆ ಮಾತನಾಡುವ ಶಿವಣ್ಣ, “ಚಿತ್ರದಲ್ಲಿ ಎಮೋಶನ್ಸ್‌ಗೆ ಹೆಚ್ಚಿನ ಮಹತ್ವವಿದೆ. ಮೈಮೇಲೆ ಆಗಿರುವ ಗಾಯ ವಾಸಿಯಾದರೂ ಮನಸ್ಸಿಗೆ ಆಗಿರುವ ಗಾಯ ಮಾಸುವುದಿಲ್ಲ ಎಂಬ ಅಂಶದ ಜೊತೆಗೆ ಇನ್ನೂ ಹಲವು ವಿಚಾರಗಳನ್ನು ಸಿನಿಮಾ ಒಳಗೊಂಡಿದೆ’ ಎನ್ನುತ್ತಾರೆ ಶಿವಣ್ಣ.

ಇನ್ನು, ಈಗಾಗಲೇ ಚಿತ್ರದ “ರಿದಮ್‌ ಆಫ್ ಶಿವಪ್ಪ’ ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದೆ. ಈ ಹಾಡನ್ನು ಶಿವರಾಜ್‌ಕುಮಾರ್‌ ಹಾಗೂ ಶರಣ್‌ ಜೊತೆಯಾಗಿ ಹಾಡಿದ್ದಾರೆ. ಆರಂಭದಲ್ಲಿ ಈ ಹಾಡನ್ನು ಶಿವಣ್ಣ-ಪುನೀತ್‌ ರಾಜ್‌ಕುಮಾರ್‌ ಜೊತೆಯಾಗಿ ಹಾಡಲು ನಿರ್ಧರಿಸಿದ್ದರಂತೆ. ಪುನೀತ್‌ ಅವರು ಕೂಡಾ ಈ ಹಾಡಲು ಒಪ್ಪಿದ್ದರು. ಇತ್ತೀಚೆಗಷ್ಟೇ ಈ ವಿಚಾರವನ್ನು ಶಿವಣ್ಣ ಹೇಳಿಕೊಂಡಿದ್ದಾರೆ. “ವಜ್ರಕಾಯ’ ಬಳಿಕ ಶಿವಣ್ಣನ ಸಿನಿಮಾಕ್ಕೆ ಶರಣ್‌ ದನಿಗೂಡಿಸಿದ ಹಾಡು ಮಾಸ್‌ಪ್ರಿಯರನ್ನು ಸೆಳೆಯುತ್ತಿದೆ.

ಪ್ರಮೋದ್‌ ಮರವಂತೆ ಸಾಹಿತ್ಯವಿರುವ “ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ…’ ಎಂಬ ಹಾಡು ಸಿಂಗಲ್‌ ಶಾಟ್‌ನಲ್ಲಿ ಶೂಟ್‌ ಮಾಡಿರುವುದು ಮತ್ತೂಂದು ವಿಶೇಷ. ಹಾಡು ಮಾಸ್‌ ಪ್ರಿಯರನ್ನು ಹೆಚ್ಚೆಚ್ಚು ಸೆಳೆಯುತ್ತಿದೆ.

“ರಿದಮ್‌ ಆಫ್ ಶಿವಪ್ಪ’ ಕಾನ್ಸೆಪ್ಟ್’ನಡಿ ಮೂಡಿಬಂದಿರುವ ಈ ಹಾಡಿಗೆ ಇಡೀ “ಬೈರಾಗಿ’ ತಂಡ ಹೆಜ್ಜೆ ಹಾಕಿದ್ದು, ದೇವನಹಳ್ಳಿ ಬಳಿಯಿರುವ ನೂತನ ಮಾಲ್ ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮುರಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ “ನಖರನಖ’ ಹಾಡಿಗೆ ಆ್ಯಂಥೋನಿ ದಾಸ್‌ ದನಿಗೂಡಿಸಿದ್ದರು. ಇದೀಗ “ಸಂಡೆ-ಮಂಡೆ’ ಹಾಡು ಶಿವಣ್ಣ-ಶರಣ್‌ದನಿಯಲ್ಲಿ ಮೂಡಿಬಂದಿದ್ದು ಜೆ.ಪಿ ಮ್ಯೂಸಿಕ್‌ ಯೂಟ್ಯೂಬ್‌ ಚಾನಲ್ ನಲ್ಲಿ ರಿಲೀಸ್‌ ಆಗಿದೆ. ಹಿರಿಯ ನಟ ಶಶಿಕುಮಾರ್‌, ಅನು ಪ್ರಭಾಕರ್‌, ಅಂಜಲಿ, ಯಶ ಶಿವಕುಮಾರ್‌, ಚಿಕ್ಕಣ್ಣ ಇತರ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.