ಶಿವ ಮೆಚ್ಚಿದ ಕವಚ


Team Udayavani, Nov 18, 2018, 11:29 AM IST

kavachaactress18-11-18.jpg

ಶಿವರಾಜಕುಮಾರ್‌ ನಟನೆಯ “ಕವಚ’ ಚಿತ್ರ ಡಿಸೆಂಬರ್‌ ಮೊದಲ ವಾರದಲ್ಲಿ  ಬಿಡುಗಡೆಯಾಗುತ್ತಿದ್ದು, ಈಗಾಗಲೇ ಹಾಡುಗಳು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿವೆ. ಸಿನಿಮಾವನ್ನು ಕೂಡಾ ಜನ ಇಷ್ಟಪಡುವ ವಿಶ್ವಾಸವಿದೆ. ಆ ವಿಶ್ವಾಸ, ಸಿನಿಮಾ ಮೂಡಿಬಂದ ರೀತಿಯ ಬಗ್ಗೆ ಚಿತ್ರತಂಡ ತಮ್ಮ ಅನುಭವ ಹಂಚಿಕೊಂಡಿದೆ. 

“ನಮ್ಮ ಆಯ್ಕೆ ಶಿವಣ್ಣ ಬಿಟ್ಟು ಬೇರೆ ಯಾರೂ ಆಗಿರಲಿಲ್ಲ’ ಹೀಗೆ ಹೇಳಿಕೊಳ್ಳುತ್ತಾರೆ  ಜಿವಿಆರ್‌ ವಾಸು. ವಾಸು ಬೇರಾರು ಅಲ್ಲ, ಬಿಡುಗಡೆಗೆ ಸಿದ್ಧವಾಗಿರುವ “ಕವಚ’ ಚಿತ್ರದ ನಿರ್ದೇಶಕರು. ರಾಮ್‌ಗೊಪಾಲ್‌ ವರ್ಮಾ ಅವರ ಜೊತೆ ಸಹಾಯಕ ನಿರ್ದೇಶಕರಾಗಿದ್ದ ವಾಸು ಅವರು ಈಗ ಕನ್ನಡದಲ್ಲಿ “ಕವಚ’ ಚಿತ್ರ ನಿರ್ದೇಶಿಸಿದ್ದಾರೆ. ಚಿತ್ರ ಡಿಸೆಂಬರ್‌ ಮೊದಲ ವಾರದಲ್ಲಿ ತೆರೆಕಾಣುತ್ತಿದ್ದು, ಈಗಾಗಲೇ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿದೆ.

ಎಲ್ಲಾ ಕನ್ನಡದಲ್ಲೇ ಈ ಸಿನಿಮಾ ಮಾಡಬೇಕು ಎಂಬ ಆಸೆ ಹುಟ್ಟಿದ್ದು ಯಾಕೆ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಅದಕ್ಕೂ ವಾಸು ಉತ್ತರಿಸುತ್ತಾರೆ. “ಇದೊಂದು ಅಪರೂಪದ ಕಥೆಯಾಗಿದ್ದರಿಂದ, ಕನ್ನಡದಲ್ಲಿ ಇದನ್ನು ಚಿತ್ರ ಮಾಡಬೇಕು ಎಂದು ಆಯ್ಕೆ ಮಾಡಿಕೊಂಡಾಗ ನಮಗೆ ಮೊದಲು ನಮಗೆ ನೆನಪಾಗಿದ್ದೇ ನಟ ಶಿವರಾಜಕುಮಾರ್‌. ನಮ್ಮ ಕಥೆಗೆ ಶಿವಣ್ಣ ಅವರೇ ಮೊದಲ ಮತ್ತು ಕೊನೆಯ ಆಯ್ಕೆ ಆಗಿದ್ದರಿಂದ, ಅವರಿಗೆ ಈ ಕಥೆಯನ್ನು ಹೇಳಿದೆವು.

ನಮ್ಮ ನಿರೀಕ್ಷೆಯಂತೆ ಶಿವಣ್ಣ ಕಥೆ ಮೆಚ್ಚಿಕೊಂಡು, ಚಿತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡರು. ಅಂತಿಮವಾಗಿ ಎಲ್ಲಾ ಕಲಾವಿದರು ಮತ್ತು ತಂತ್ರಜ್ಞರ ಸಹಕಾರದಿಂದ ಒಂದೊಳ್ಳೆ ಚಿತ್ರವನ್ನು ಮಾಡಿದ್ದೇವೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ. ಶಿವರಾಜಕುಮಾರ್‌ ಜೊತೆ ಯಾರೇ ಸಿನಿಮಾ ಮಾಡಿದರೂ ಅವರು ಖುಷಿಯಾಗಿರುತ್ತಾರೆ. ಅದಕ್ಕೆ ಕಾರಣ ಅವರು ಆ ತಂಡದ ಜೊತೆ ನಡೆದುಕೊಳ್ಳುವ ರೀತಿ. ಇದರಿಂದ ವಾಸು ಕೂಡಾ ಹೊರತಾಗಿಲ್ಲ.

ಶಿವರಾಜಕುಮಾರ್‌ ಜೊತೆ ಸಿನಿಮಾ ಮಾಡಿದ ಖುಷಿಯನ್ನು ವಾಸು ಹಂಚಿಕೊಳ್ಳುತ್ತಾರೆ.  “ಮೊದಲ ಬಾರಿಗೆ ಕನ್ನಡದಲ್ಲಿ ಶಿವಣ್ಣ ಅವರಂಥ ದೊಡ್ಡ ನಟನ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಠ. ಶಿವಣ್ಣ ನಿರ್ದೇಶಕರ ನಟ ಎಂಬ ಮಾತು ಅವರ ಜೊತೆ ಕೆಲಸ ಮಾಡಿದ ನಂತರ ಅಕ್ಷರಶಃ ನಿಜವೆನಿಸಿತು. ಇಲ್ಲಿಯವರೆಗೂ ಯಾವ ಚಿತ್ರದಲ್ಲೂ ಕಾಣದ ಶಿವಣ್ಣ, ಈ ಚಿತ್ರದಲ್ಲಿ ಕಾಣುತ್ತಾರೆ. ಕನ್ನಡದಲ್ಲಿ ಹೊಸಥರದ ಕಥೆಯನ್ನು ಮೆಚ್ಚುವ ಪ್ರೇಕ್ಷಕರು ಇರುವುದರಿಂದ, ಅವರಿಗೆ ಕವಚ ಚಿತ್ರ ಖಂಡಿತಾ ಇಷ್ಟವಾಗಲಿದೆ’ ಎನ್ನುತ್ತಾರೆ.

ಶಿವಣ್ಣ ಖುಷಿಯಿಂದ ಒಪ್ಪಿದ ಚಿತ್ರ: “ಕವಚ’ ಚಿತ್ರದ ಪಾತ್ರವನ್ನು ಶಿವರಾಜಕುಮಾರ್‌ ತುಂಬಾ ಖುಷಿಯಿಂದ ಒಪ್ಪಿದರಂತೆ. ಅದಕ್ಕೆ ಕಾರಣ ಅದರಲ್ಲಿನ ಪಾತ್ರ. ಮೊದಲ ಬಾರಿಗೆ ಶಿವರಾಜಕುಮಾರ್‌ ಈ ಚಿತ್ರದಲ್ಲಿ ಅಂಧನಾಗಿ ಕಾಣಿಸಿಕೊಂಡಿದ್ದಾರೆ. ಶಿವರಾಜಕುಮಾರ್‌ ಅವರಿಗೆ ಈ ಪಾತ್ರ ಮಾಡುವ ಮೊದಲು ಸಹಜವಾಗಿಯೇ ಒಂದಷ್ಟು ಭಯವಿತ್ತಂತೆ. ಏಕೆಂದರೆ ಈ ತರಹದ ಪಾತ್ರ ಅವರು ಈ ಹಿಂದೆಂದೂ ಮಾಡಿಲ್ಲ.

ಆದರೆ, ಸೆಟ್‌ಗೆ ಹೋದ ನಂತರ ಒಬ್ಬೊಬ್ಬರು ಒಂದಷ್ಟು ಹೇಳಿಕೊಡುತ್ತಲೇ ಶಿವಣ್ಣ ಪಾತ್ರ ಪೋಷಣೆ ಮಾಡಿದ್ದಾರೆ. ಪಾತ್ರದ ಬಗ್ಗೆ ಮಾತನಾಡುವ ಶಿವಣ್ಣ,”ಸೆಟ್‌ಗೆ ಯಾವುದೇ ಪೂರ್ವತಯಾರಿ ಇಲ್ಲದೇ ಹೋದೆ. ಅಲ್ಲಿ ಏನು ಹೇಳಿಕೊಡುತ್ತಿದ್ದರೊ, ಅದನ್ನೇ ಮಾಡುತ್ತಾ ಹೋದೆ. ಅಂಧರು ಅಂದಾಕ್ಷಣ, ಎಲ್ಲರೂ ಒಂದೇ ರೀತಿ ಇರಲ್ಲ. ಇಲ್ಲಿ ಸಾಗರ ಎಂಬ ಊರಿನ ಬಗ್ಗೆ ಅವನಿಗೆ ಎಲ್ಲವೂ ಗೊತ್ತಿರುತ್ತೆ.

ಹಾಗಾಗಿ, ಎಲ್ಲೆಂದರಲ್ಲಿ, ಹೇಗೆಂದರೆ ಹಾಗೆ ವೇಗವಾಗಿ ಅವನ ಪಾಡಿಗೆ ಅವನು ನಡೆದಾಡುತ್ತಿರುತ್ತಾನೆ. ಇನ್ನು, ಆ ಪಾತ್ರ ನಗುವುದು, ಅಳುವುದು ಓವರ್‌ ಆಗುತ್ತಾ ಎಂಬ ಪ್ರಶ್ನೆ ಇತ್ತು. ಮಾನಿಟರ್‌ ನೋಡಿ, ನೋಡಿ ನೈಜತೆ ಕಟ್ಟಿಕೊಡುವ ಉದ್ದೇಶದಿಂದ ಪಾತ್ರ ನಿರ್ವಹಿಸುತ್ತಿದ್ದೆ. ಜನ ಈ ಸಿನಿಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸವಿದೆ’ ಎನ್ನುವುದು ಶಿವಣ್ಣ ಮಾತು.

ಅದ್ಭುತ ಅನುಭವ: “ಕವಚ’ ಚಿತ್ರದಲ್ಲಿ ಕೃತಿಕಾ ನಾಯಕಿಯಾಗಿ ನಟಿಸಿದ್ದಾರೆ. ಮೊದಲ ಬಾರಿಗೆ ಶಿವರಾಜಕುಮಾರ್‌ ಜೊತೆ ನಟಿಸಿರುವ ಅವರು ಸಹಜವಾಗಿಯೇ ಎಕ್ಸೆ„ಟ್‌ ಆಗಿದ್ದಾರೆ. ಅದೇ ಕಾರಣದಿಂದ “ಕವಚ’ ನನ್ನ ಬದುಕಿನಲ್ಲಿ ಮರೆಯಲಾರದ ಸಿನಿಮಾ ಎನ್ನುತ್ತಾರೆ. “ಚಿತ್ರದ ತುಂಬಾ ಸಿನಿಮಾ ಪ್ರೀತಿಸುವ ಕಲಾವಿದರು, ತಾಂತ್ರಿಕ  ವರ್ಗ ಇದ್ದಿದ್ದರಿಂದಲೇ ಈ ಸಿನಿಮಾ ಇಷ್ಟೊಂದು ಚೆನ್ನಾಗಿ ಬರೋದಕ್ಕೆ ಸಾಧ್ಯವಾಯಿತು.

ಚಿತ್ರದ ಸೆಟ್‌ನಲ್ಲಿ ಪ್ರತಿಯೊಬ್ಬರಿಂದಲೂ, ಒಂದೊಂದು ವಿಷಯಗಳನ್ನು ಕಲಿತುಕೊಂಡಿದ್ದೇನೆ. ಒಂದೇ ಚಿತ್ರದ ಸಾಕಷ್ಟು ಅನುಭವಗಳನ್ನು ಕೊಟ್ಟಿದೆ. ಈ ಚಿತ್ರದಲ್ಲಿ ರೇವತಿ ಎಂಬ ಪಾತ್ರವನ್ನು ನಿರ್ವಹಿಸಿದ್ದೇನೆ. ಪ್ರತಿಯೊಂದನ್ನೂ ಸೂಕ್ಷ್ಮವಾಗಿ ಗಮನಿಸುವ ತುಂಬ ಪ್ರಬುದ್ಧ ನನ್ನದು. ಎಲ್ಲಾ ಪಾತ್ರಗಳು ತುಂಬ ಸಹಜವಾಗಿರುವುದರಿಂದ, ಚಿತ್ರ ಕೂಡ ತುಂಬ ಚೆನ್ನಾಗಿ ಬಂದಿದೆ.

ಕನ್ನಡ ಪ್ರೇಕ್ಷಕರು ಇಂಥ ಚಿತ್ರಗಳನ್ನು ನೋಡಿ ಪ್ರೋತ್ಸಾಹಿಸುತ್ತಾರೆ’ ಎಂಬ ವಿಶ್ವಾಸವಿದೆ ಎನ್ನುತ್ತಾರೆ ಕೃತಿಕಾ. ಶಿವರಾಜಕುಮಾರ್‌ ಅವರೊಂದಿಗೆ ಇಶಾ ಕೊಪ್ಪಿಕರ್‌, ರವಿಕಾಳೆ, ರಾಜೇಶ್‌ ನಟರಂಗ, ವಸಿಷ್ಠ ಸಿಂಹ, ಬೇಬಿ ಮೀನಾಕ್ಷಿ, ಜಯಪ್ರಕಾಶ್‌ ಮೊದಲಾದ ಕಲಾವಿದರ ತಾರಾಗಣವಿದೆ. “ಹೆಚ್‌.ಎಂ.ಎ ಸಿನಿಮಾ’ ಬ್ಯಾನರ್‌ನಲ್ಲಿ ಎಂ.ವಿ.ವಿ ಸತ್ಯ ನಾರಾಯಣ್‌ “ಕವಚ’ ಚಿತ್ರವನ್ನು ನಿರ್ಮಿಸಿದ್ದಾರೆ.

“ಕವಚ’ದ ದೃಶ್ಯಗಳನ್ನು ರಾಹುಲ್‌ ಶ್ರೀವಾತ್ಸವ್‌ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದರೆ, ಜೊ.ನಿ ಹರ್ಷ ಚಿತ್ರದ ಸಂಕಲನ ಕಾರ್ಯವನ್ನು ನಿರ್ವಹಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜನೆ ಇದೆ.  ಕೆ. ಕಲ್ಯಾಣ್‌, ಡಾ. ವಿ ನಾಗೇಂದ್ರ ಪ್ರಸಾದ್‌, ಕವಿರಾಜ್‌ ಚಿತ್ರದ ಹಾಡುಗಳಿಗೆ ಸಾಹಿತ್ಯವನ್ನು ಒದಗಿಸಿದ್ದಾರೆ. ರವಿವರ್ಮ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.