ಶುರುವಾಗಲಿದೆ ಶೂರ ಸಿಂಧೂರ ಲಕ್ಷ್ಮಣ


Team Udayavani, Oct 23, 2018, 11:51 AM IST

kishore-5.jpg

ಎಲ್ಲವೂ ಅಂದುಕೊಂಡಂತೆ ಸರಿಯಾಗಿ ನಡೆದಿದ್ದರೆ, ನಟ ಸುದೀಪ್‌ ಅವರು “ಶೂರ ಸಿಂಧೂರ ಲಕ್ಷ್ಮಣ’ ಚಿತ್ರದ ನಾಯಕರಾಗಿ ಅಭಿನಯಿಸಬೇಕಿತ್ತು. ಆದರೀಗ, ನಟ ಕಿಶೋರ್‌ “ಶೂರ ಸಿಂಧೂರ ಲಕ್ಷ್ಮಣ’ರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಯಾದಗಿರಿಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಆಗಿನ ಮಾಜಿ ಸಚಿವರಾಗಿದ್ದ ರಾಜುಗೌಡ ಅವರು, “ಶೂರ ಸಿಂಧೂರ ಲಕ್ಷ್ಮಣ’ ಚಿತ್ರ ಮಾಡಬೇಕೆಂದಿದ್ದು, ಆ ಚಿತ್ರದಲ್ಲಿ ಸುದೀಪ್‌ ಅವರು ಸಿಂಧೂರ ಲಕ್ಷ್ಮಣರಾಗಿ ನಟಿಸಲಿದ್ದಾರೆ ಎಂದು ಹೇಳಿದ್ದರು.

ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಅವರು ಕಳೆದ ಒಂದು ದಶಕದಿಂದ ಸಿಂಧೂರ ಲಕ್ಷ್ಮಣ ಅವರ ಕುರಿತು ಸಂಶೋಧನೆ ನಡೆಸಿ, ಎಲ್ಲೆಡೆ ಸಂಚರಿಸಿ ಸಮಗ್ರ ಕಥೆ ಸಿದ್ಧಪಡಿಸಿದ್ದರು. ಅದರ ಒನ್‌ಲೈನ್‌ ಕೇಳಿದ್ದ ರಾಜುಗೌಡ, ಈ ಕಥೆ ಸುದೀಪ್‌ ಮಾಡಿದರೆ ಚೆನ್ನಾಗಿರುತ್ತೆ ಅಂತ ಹೇಳಿದ್ದರು. “ಸಂಗೊಳ್ಳಿ ರಾಯಣ್ಣ’ ಚಿತ್ರದಲ್ಲಿ ದರ್ಶನ್‌ ನಟಿಸಿದ್ದಾರೆ. ಈ ಕಥೆಯ ಪಾತ್ರಕ್ಕೆ ಸುದೀಪ್‌ ಇದ್ದರೆ, ಅದು ಎಲ್ಲಾ ಭಾಷಿಗರಿಗೂ ಹೆಚ್ಚು ತಲುಪುತ್ತೆ ಅಂದುಕೊಂಡು ಚಿತ್ರ ಮಾಡುವ ಬಗ್ಗೆ ಪ್ರಸ್ತಾಪಿಸಿದ್ದರು.

ಆದರೆ, ಸುದೀಪ್‌ ಬಿಜಿಯಾದ್ದರಿಂದ, “ಸಿಂಧೂರ ಲಕ್ಷ್ಮಣ’ ಚಿತ್ರ ಮಾಡುವ ಬಗ್ಗೆಯೂ ಒಂದಷ್ಟು ಗೊಂದಲಗಳಾದವು. ಈ ನಡುವೆ ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಅವರು, ಇಷ್ಟು ವರ್ಷದ ಶ್ರಮ ವ್ಯರ್ಥ ಆಗಬಾರದು ಎಂಬ ಕಾರಣಕ್ಕೆ, ಅವರೇ, ಇದೀಗ ಕಿಶೋರ್‌ ಅವರನ್ನಿಟ್ಟುಕೊಂಡು “ಶೂರ ಸಿಂಧೂರ ಲಕ್ಷ್ಮಣ’ ಚಿತ್ರ ಮಾಡಲು ಮುಂದಾಗಿದ್ದಾರೆ. ಪಾತ್ರಕ್ಕೆ ಸೂಕ್ತ ನಟ ಬೇಕಿದ್ದರಿಂದ, ಕಿಶೋರ್‌ ಸರಿಹೊಂದುತ್ತಾರೆಂದು ಅವರನ್ನೇ ಆಯ್ಕೆ ಮಾಡಿದ್ದಾರೆ ಪಲ್ಲಕ್ಕಿ ರಾಧಾಕೃಷ್ಣ.

ಈ ಚಿತ್ರಕ್ಕೆ ನಾನಾ ಶಿವಶಂಕರ್‌ ದೇವನಹಳ್ಳಿ ನಿರ್ಮಾಪಕರು. ಇವರಿಗಿದು ಮೊದಲ ಚಿತ್ರ. “ಕಿಶೋರ್‌ ಚಿತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಮುಖ್ಯವಾಗಿ ಜನಪದ ಕ್ರೀಡೆಗಳ ಬಗ್ಗೆ ಗಮನಹರಿಸಿ, ಅಭ್ಯಾಸ ಮಾಡುತ್ತಿದ್ದಾರೆ. ಆಗೆಲ್ಲಾ ಹಳ್ಳಿಗಳಲ್ಲಿ ದೇಸೀ ಆಟಗಳಾದ ಚಾಟರ್‌ಬಿಲ್‌ ಪ್ರಮುಖವಾಗಿತ್ತು. ಆ ಕ್ರೀಡೆ ಮೂಲಕ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕೆಂಬುದನ್ನು ಆ ಕ್ರೀಡೆಯಿಂದ ಕಲಿಯುತ್ತಿದ್ದರು. ಹಳ್ಳಿ ಜನ ಕೈಯಲ್ಲೇ ಸರಳ ಸಾಮಾಗ್ರಿ ಬಳಸಿ ಮಾಡಿದ ಉಪಕರಣ ಸಾಕಷ್ಟು ಬಲಿಷ್ಠವಾಗಿತ್ತು.

ಅಂತಹ ಅನೇಕ ಕ್ರೀಡೆಗಳ ಛಾಯೆ ಚಿತ್ರದಲ್ಲಿವೆ. ಕಿಶೋರ್‌, ಅದಕ್ಕಾಗಿ ಪಕ್ಕಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇನ್ನು, ಸಿಂಧೂರ ಲಕ್ಷ್ಮಣ ಅವರು ಅವಿದ್ಯಾವಂತರಾಗಿ, ಬ್ರಿಟಿಷರಿಗೆ ಎಷ್ಟೆಲ್ಲಾ ಸವಾಲು ಹಾಕಿದ್ದರು ಎಂಬುದು ಚಿತ್ರದ ಹೈಲೆಟ್‌’ ಎನ್ನುತ್ತಾರೆ ನಿರ್ದೇಶಕರು. ಅಂದಹಾಗೆ, ಜನವರಿಯಲ್ಲಿ ಚಿತ್ರಕ್ಕೆ ಚಾಲನೆ ಸಿಗಲಿದೆ. ಚಿತ್ರದಲ್ಲಿ ಸಾಯಿಕುಮಾರ್‌, ಸೀಮಾ ಬಿಸ್ವಾಸ್‌, ಸೀನೂ ಮಾಕಾಳಿ, ದೊಡ್ಡಣ್ಣ, ಚರಣ್‌ರಾಜ್‌, ರವಿಶಂಕರ್‌, ಗಿರೀಶ್‌ ಗಲಿವರ್‌ ಸೇರಿದಂತೆ ಅನೇಕ ಕಲಾವಿದರು ನಟಿಸುತ್ತಿದ್ದಾರೆ. ಚಿತ್ರಕ್ಕೆ  ಅರ್ಜುನ್‌ ಜನ್ಯ ಸಂಗೀತವಿದೆ. ಥ್ರಿಲ್ಲರ್‌ ಮಂಜು ಅವರ ಸಾಹಸವಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.