
ಶ್ರೇಯಸ್ ಮಂಜು ನಟನೆಯ ‘ರಾಣ’ ನ.11ರಂದು ಬಿಡುಗಡೆ
Team Udayavani, Sep 17, 2022, 3:29 PM IST

ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ನಾಯಕನಾಗಿ ಅಭಿನಯಿಸಿರುವ “ರಾಣ’ ಚಿತ್ರ ಇದೇ ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. “ಗುಜ್ಜಲ್ ಟಾಕೀಸ್’ ಬ್ಯಾನರ್ನಲ್ಲಿ ಗುಜ್ಜಲ್ ಪುರುಷೋತ್ತಮ್ ನಿರ್ಮಿಸಿರುವ “ರಾಣ’ ಚಿತ್ರಕ್ಕೆ ನಂದಕಿಶೋರ್ ನಿರ್ದೇಶನವಿದೆ.
ಆ್ಯಕ್ಷನ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ರಾಣಾ’ ಚಿತ್ರದಲ್ಲಿ ರೀಷ್ಮಾ ನಾಣಯ್ಯ ನಾಯಕಿಯಾಗಿದ್ದು, ಉಳಿದಂತೆ ರಜನಿ ಭಾರದ್ವಾಜ್, ಅಶೋಕ್, ಗಿರಿ, ಪ್ರವೀಣ್ ಕುಮಾರ್, ನಯನಾ, ರಘು, ಮೋಹನ್ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇದನ್ನೂ ಓದಿ:ಈ ಮಗುವಿನ ದೇಹದಲ್ಲಿರುವುದು ಬಿಳಿ ರಕ್ತ…ಸ್ಯಾಂಪಲ್ ಕಂಡ ವೈದ್ಯರು ಶಾಕ್…
ಚಿತ್ರದಲ್ಲಿ ಮೂರು ಹಾಡುಗಳಿಗೆ ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣ, ಕೆ. ಎಂ ಪ್ರಕಾಶ್ ಸಂಕಲನವಿದೆ. ಪ್ರಶಾಂತ್ ರಾಜಪ್ಪ ಚಿತ್ರದ ದೃಶ್ಯಗಳಿಗೆ ಸಂಭಾಷಣೆ ಬರೆದಿದ್ದಾರೆ.
ಚಿತ್ರಕ್ಕೆ ಇಮ್ರಾನ್ ಸರ್ದಾರಿಯಾ ನೃತ್ಯ ಸಂಯೋಜನೆ ಮತ್ತು ರವಿವರ್ಮ, ಚೇತನ್ ಡಿಸೋಜ, ಡಿಫರೆಂಟ್ ಡ್ಯಾನಿ ಹಾಗೂ ಗಣೇಶ್ ಸಾಹಸ ಸಂಯೋಜನೆ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
