‘ಶ್ರೀಕೃಷ್ಣ ಆ್ಯಟ್‌ ಜಿಮೇಲ್‌ ಡಾಟ್‌ ಕಾಂ’ ರಿಲೀಸ್‌ ಗೆ ರೆಡಿ


Team Udayavani, Oct 11, 2021, 12:01 PM IST

shrikrishna@gami.com

ನಟ ಡಾರ್ಲಿಂಗ್‌ ಕೃಷ್ಣ, ಭಾವನಾ ಮೆನನ್‌ ಜೋಡಿಯಾಗಿ ಅಭಿನಯಿಸಿರುವ “ಶ್ರೀಕೃಷ್ಣ ಆ್ಯಟ್‌ ಜಿಮೇಲ್‌ ಡಾಟ್‌ ಕಾಂ’ ಇದೇ ದಸರಾ ಹಬ್ಬದ ಸಂದರ್ಭದಲ್ಲಿ ತೆರೆಗೆ ಬರುತ್ತಿದೆ. ಸದ್ಯ ಚಿತ್ರದ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದ್ದು, ಇದೇ ವೇಳೆ ಚಿತ್ರದ ರಿಲೀಸ್‌ ಬಗ್ಗೆ ಮಾಹಿತಿ ನೀಡಲು ನಟ ಡಾರ್ಲಿಂಗ್‌ ಕೃಷ್ಣ, ನಿರ್ಮಾಪಕ ಸಂದೇಶ್‌ ನಾಗರಾಜ್‌ ಮತ್ತು ನಿರ್ದೇಶಕ ನಾಗಶೇಖರ್‌ ಮಾಧ್ಯಮಗಳ ಮುಂದೆ ಬಂದಿದ್ದರು.

ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ಸಂದೇಶ್‌ ನಾಗರಾಜ್‌, “ಥಿಯೇಟರ್‌ಗಳಲ್ಲಿ 50% ಪ್ರೇಕ್ಷಕರ ಅವಕಾಶವಿರುವಾಗಲೇ ನಾವು ಈ ಸಿನಿಮಾ ರಿಲೀಸ್‌ ಮಾಡಬೇಕೆಂದು ನಿರ್ಧರಿಸಿದ್ದೆವು. ಸಾಕಷ್ಟು ಮುಂಚೆಯೇ ರಿಲೀಸ್‌ ಡೇಟ್‌ ಕೂಡ ನಿರ್ಧಾರವಾಗಿತ್ತು. ಈಗ ಸರ್ಕಾರ ಥಿಯೇಟರ್‌ಗಳಲ್ಲಿ ಪೂರ್ಣ ಪ್ರಮಾಣದಪ್ರವೇಶಾತಿಗೆ ಅವಕಾಶ ನೀಡಿದೆ. ಜೊತೆಗೆ ದಸರಾ ಹಬ್ಬದ ವೇಳೆ ಸಾಲುಸಾಲು ರಜೆಗಳಿದ್ದು, ಥಿಯೇಟರ್‌ಗೆ ಬರಲು ಪ್ರೇಕ್ಷಕರಿಗೂ ಅನುಕೂಲವಾಗುತ್ತದೆ. ಸಿನಿಮಾ ತುಂಬ ಚೆನ್ನಾಗಿ ಬಂದಿದ್ದು, ಈಗಾಗಲೇ ಹಾಕಿದ ಬಂಡವಾಳ ಕೂಡ ವಾಪಾಸ್‌ ಬಂದಿದೆ. ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗಲಿದೆ’ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ:‘ಕಿಂಗ್ ಈಸ್ ಬ್ಯಾಕ್..’ ಹಳೇಯ ಖದರ್ ಗೆ ಮರಳಿದ ಮಾಹಿ, ಸಂತಸದಲ್ಲಿ ತೇಲಾಡಿದ ವಿರಾಟ್

ಚಿತ್ರದ ಬಗ್ಗೆ ಮಾತಿಗಿಳಿದ ನಟ ಕೃಷ್ಣ, “ನಾನು ಮೈಸೂರಿನವನೇ ಆಗಿದ್ದರಿಂದ ಚಿಕ್ಕಂದಿನಿಂದಲೂ ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರನ್ನು ಬಲ್ಲೆ. ಅವರ ಹೋಟೆಲ್‌ಗೆ ಹೋಗುತ್ತಿದ್ದೆ. ಈಗ ಅವರ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿದೆ. ಸಿನಿಮಾದ ಕಥೆ ಹೊಸ ಥರದಲ್ಲಿದೆ. ಹಾಡುಗಳೂ ಚೆನ್ನಾಗಿದೆ. ದತ್ತಣ್ಣ ಅವರಂತಹ ಹಿರಿಯರೊಂದಿಗೆ ನಟಿಸಿದ್ದು ಮರೆಯಲಾಗದ ಅನುಭವ. ನನ್ನೊಂದಿಗೆ ಅಭಿನಯಿಸಿರುವ ಎಲ್ಲಾ ಕಲಾವಿದರ ಅಭಿನಯ ಸೊಗಸಾಗಿದೆ’ ಎಂದರು.

ನಿರ್ದೇಶಕ ನಾಗಶೇಖರ್‌ ಮಾತನಾಡಿ, “ಕೊರೊನಾ ಸಮಯದಲ್ಲಿ ಒಮ್ಮೆ ಇದ್ದಕ್ಕಿದ್ದಂತೆ ಪೋನ್‌ ಮಾಡಿದ ನಿರ್ಮಾಪಕ ಸಂದೇಶ್‌ ನಾಗರಾಜ್‌, ತಕ್ಷಣವೇ ಮೈಸೂರಿಗೆ ಬರುವಂತೆ ಹೇಳಿದರು. ಲಾಕ್‌ ಡೌನ್‌ ಸಮಯದಿಂದ ಎಷ್ಟೋ ಜನರಿಗೆ ಕೆಲಸ ಇಲ್ಲ. ನಾವು ಸಿನಿಮಾ ಶುರು ಮಾಡಿದರೆ, ಎಷ್ಟೋ ಜನಕ್ಕೆ ಕೆಲಸ ಸಿಗುತ್ತದೆ ತಕ್ಷಣವೇ ಸಿನಿಮಾ ಶುರು ಮಾಡೋಣ ಎಂದರು.

ಆ ನಂತರ ಒಂದು ಕಥೆ ಆಯ್ಕೆ ಮಾಡಿಕೊಂಡು, ಸ್ಕ್ರಿಪ್ಟ್ ರೆಡಿ ಮಾಡಿಕೊಂಡು ಅಂದುಕೊಂಡಂತೆ ಸಿನಿಮಾ ಮಾಡಿ ಮುಗಿಸಿದ್ದೇವೆ. ಇಲ್ಲಿಯವರೆಗೆ ನೇಚರ್‌ ಬ್ಯಾಗ್ರೌಂಡ್‌ನ‌ಲ್ಲಿ ಸಿನಿಮಾ ಮಾಡಿದ್ದ ನಾನು ಮೊದಲ ಬಾರಿಗೆ ಸಿಟಿ ಬ್ಯಾಗ್ರೌಂಡ್‌ನ‌ಲ್ಲಿ ಈ ಸಿನಿಮಾ ಮಾಡಿದ್ದೇವೆ. ಇದು ನಮ್ಮ ನಡುವೆಯೇ ನಡೆಯುವಂಥ ಕಥೆ. ಆದ್ರೆ ನೋಡುಗರ ಮನಸ್ಸಿನಲ್ಲಿ ಉಳಿಯುತ್ತದೆ. ಈಗಾಗಲೇ ಸಾಂಗ್ಸ್‌, ಟ್ರೇಲರ್‌ಗೆ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಸಿನಿಮಾಕ್ಕೂ ಹಾಗೇ ರೆಸ್ಪಾನ್ಸ್‌ ಸಿಗುತ್ತದೆ’ ಎಂಬ ಭರವಸೆಯ ಮಾತುಗಳನ್ನಾಡಿದರು.

ಇನ್ನು “ಶ್ರೀಕೃಷ್ಣ ಆ್ಯಟ್‌ ಜಿಮೇಲ್‌ ಡಾಟ್‌ ಕಾಂ’ ಚಿತ್ರದಲ್ಲಿ ಕೃಷ್ಣ, ಭಾವನಾ ಮೆನನ್‌ ಜೊತೆಗೆ ಹಿರಿಯ ನಟ ದತ್ತಣ್ಣ, ರಿಷಭ್‌ ಶೆಟ್ಟಿ, ಚಂದನ್‌ ಗೌಡ, ಸಾಧುಕೋಕಿಲ, ಅಚ್ಯುತರಾವ್‌, ಸಾತ್ವಿಕ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯಾ ಸಂಗೀತವಿದ್ದು, ಕವಿರಾಜ್‌ ಸಾಹಿತ್ಯವಿದೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ, ದೀಪು ಎಸ್‌. ಕುಮಾರ್‌ ಸಂಕಲನವಿದೆ

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.