Kannada cinema; ‘ಫ್ರೈಡೇ’ ಸಂಭ್ರಮದಲ್ಲಿ ಶೃತಿ ಪ್ರಕಾಶ್: ಹೊಸಬರ ಚಿತ್ರಕ್ಕೆ ಮುಹೂರ್ತ
Team Udayavani, Dec 29, 2023, 4:06 PM IST
ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ ಮೇಡ್ ಇನ್ ಬೆಂಗಳೂರು ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ – ನಾಯಕಿಯಾಗಿ ನಟಿಸುತ್ತಿರುವ ಫ್ರೈಡೆ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು.
ಡೀಸ್ ಫಿಲಂಸ್ ಹಾಗೂ ಶೂಲಿನ್ ಮೀಡಿಯಾ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ ಹೊಸ ದಿನಚರಿ ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇರ್ಖ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
“ಈ ಹಿಂದೆ ಆಯನ, ಹೊಸ ದಿನಚರಿ ಹಾಗೂ ಗ್ರೇ ಗೇಮ್ಸ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೆವು. ಇದು ನಾಲ್ಕನೇ ಚಿತ್ರ. ಆಯನ ಹಾಗೂ ಗ್ರೇ ಗೇಮ್ಸ್ ಚಿತ್ರಗಳನ್ನು ನಾನೇ ನಿರ್ದೇಶಿಸಿದ್ದೇನೆ. ಫ್ರೈಡೆ ಚಿತ್ರವನ್ನು ಹೊಸ ದಿನಚರಿ ಚಿತ್ರದ ನಿರ್ದೇಶಕರಾದ ಕೀರ್ತಿ ಹಾಗೂ ವೈಶಾಖ್ ನಿರ್ದೇಶಿಸುತ್ತಿದ್ದಾರೆ. ಮೃತ್ಯುಂಜಯ ಶುಕ್ಲ ಹಾಗೂ ಅಲೋಕ್ ಚೌರಾಸಿಯಾ ನಿರ್ಮಾಪಕರು. ಮುಂದೆ ಕೂಡ ನಮ್ಮ ಸಂಸ್ಥೆಯಿಂದ ಸದಭಿರುಚಿ ಚಿತ್ರಗಳನ್ನು ನಿರ್ಮಿಸುವ ಇರಾದೆ ಇದೆ’ಎಂದರು
ಕ್ರಿಯೇಟಿವ್ ನಿರ್ಮಾಪಕರಾದ ಗಂಗಾಧರ್ ಸಾಲಿಮಠ. “ಸಿನಿಮಾದವರಿಗೆ ಫ್ರೈಡೆ ಎಂದರೆ ವಿಶೇಷ. ನಮಗೂ ಹಾಗೆ. ಏಕೆಂದರೆ ನಮ್ಮ ಚಿತ್ರದ ಹೆಸರು ಫ್ರೈಡೆ. ಚಿತ್ರ ಬಿಡುಗಡೆಯಾಗುವುದು ಫ್ರೈಡೆ. ಆ ಫ್ರೈಡೆಗೂ ನಮ್ಮ ಚಿತ್ರಕ್ಕೂ ನಂಟಿದೆ. ಫ್ರೈಡೆ ಬಿಡುಗಡೆಯಾದ ಹೊಸ ಚಿತ್ರವನ್ನು ನೋಡಲು ಹೋಗಿದ್ದ ದಂಪತಿ ಜೀವನದಲ್ಲಿ ನಡೆಯಬಾರದ ಘಟನೆ ನಡೆದು ಹೋಗುತ್ತದೆ. ಅದೇ ಚಿತ್ರದ ಕಥಾಹಂದರ.
ಮಧುಸೂದನ್ ಗೋವಿಂದ್, ಶೃತಿ ಪ್ರಕಾಶ್ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಾನು ಕಥೆ ರಚಿಸಿದ್ದು. ಚಿತ್ರಕಥೆಯನ್ನು ನಾನು ಹಾಗೂ ಕೀರ್ತಿ ಶೇಖರ್ ಬರೆದಿದ್ದೇವೆ. ಜನವರಿ ಮೊದಲವಾರದಲ್ಲಿ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ ಎಂದರು ನಿರ್ದೇಶಕರಲ್ಲೊಬ್ಬರಾದ ವೈಶಾಖ್ ಪುಷ್ಪಲತ.
” ಫ್ರೈಡೆ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಮೂರು ಹಾಡುಗಳಿದೆ. ಅಶ್ವಿನ್ ಹೇಮಂತ್ ಸಂಗೀತ ನಿರ್ದೇಶನ ಹಾಗೂ ಸಂದೀಪ್ ವಲ್ಲೂರಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಚಿತ್ರ ನಿರ್ಮಾಣವಾಗಲಿದೆ ಎಂದರು.
ಚಿತ್ರದ ಪ್ರಮುಖ ಪಾತ್ರಧಾರಿಗಳಾದ ಮಧುಸೂದನ್ ಗೋವಿಂದ್, ಶೃತಿ ಪ್ರಕಾಶ್ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ತಮ್ಮ ಪಾತ್ರಗಳ ಕುರಿತು ಮಾಹಿತಿ ನೀಡಿದರು. ನಿರ್ಮಾಪಕರಾದ ಮೃತ್ಯುಂಜಯ ಶುಕ್ಲ ಹಾಗೂ ಅಲೋಕ್ ಚೌರಾಸಿಯಾ ಸಹ ಫ್ರೈಡೆ ಚಿತ್ರದ ಕುರಿತು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ