ತಾರಕಾಸುರನಿಗೆ ಶ್ರುತಿ ಹರಿಹರನ್‌ ಜೋಡಿ


Team Udayavani, May 18, 2017, 5:00 PM IST

56.jpg

ಶ್ರುತಿ ಹರಿಹರನ್‌ ಈಗ ಬಿಝಿಯಾಗುತ್ತಿದ್ದಾರೆ. ಸದ್ದಿಲ್ಲದೇ ಒಂದೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾ ಹೋಗುತ್ತಿರುವ ಶ್ರುತಿ ಹರಿಹರನ್‌ ಈಗ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿರುವ ಸುದ್ದಿ ಬಂದಿದೆ. ಅದು “ತಾರಕಾಸುರ’. ಹೌದು, ಮೊನ್ನೆಯಷ್ಟೇ “ತಾರಕಾಸುರ’ ಚಿತ್ರದ ಫ‌ಸ್ಟ್‌ ಲುಕ್‌ ಬಿಡುಗಡೆಯಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಬಿಝಿಯಾಗಿರುವ ನಾಯಕಿಯೊಬ್ಬರು “ತಾರಕಾಸುರ’ದಲ್ಲಿ ನಟಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ ಚಂದ್ರಶೇಖರ ಬಂಡಿಯಪ್ಪ ಹೇಳಿದ್ದರು. ಅದರಂತೆ ಈಗ ಚಿತ್ರಕ್ಕೆ ಶ್ರುತಿ ಹರಿಹರನ್‌ ನಾಯಕಿಯಾಗಿರುವ ಸುದ್ದಿ ಬಂದಿದೆ. ಈ ಮೂಲಕ ಶ್ರುತಿ ಮತ್ತೂಮ್ಮೆ ಹೊಸಬರ ಸಿನಿಮಾ ಒಪ್ಪಿಕೊಂಡಂತಾಗಿದೆ. ನಿರ್ದೇಶಕ ಚಂದ್ರಶೇಖರ್‌ ಬಂಡಿಯಪ್ಪ ಈಗಾಗಲೇ ಎರಡು ಸಿನಿಮಾ ಮಾಡಿದ್ದರೂ ಈ ಚಿತ್ರದ ನಾಯಕ ವೈಭವ್‌ಗೆ ಕನ್ನಡ ಸಿನಿ ಪ್ರೇಕ್ಷಕರಿಗೆ ಹೊಸ ಮುಖ. ಈಗ ಇವರಿಗೆ ಶ್ರುತಿ ಹರಿಹರನ್‌ ಜೋಡಿಯಾಗಿ ನಟಿಸಲಿದ್ದಾರೆಂಬ ಸುದ್ದಿ ಬಂದಿದೆ.

ಶ್ರುತಿ ಹರಿಹರನ್‌ ಆರಂಭದಿಂದಲೂ ತನಗೆ ಇಷ್ಟವಾದ ಪಾತ್ರ ಸಿಕ್ಕರೆ ಅದನ್ನು ಒಪ್ಪಿಕೊಳ್ಳುತ್ತಾ ಬಂದಿದ್ದಾರೆ. ಅದರಲ್ಲಿ ಹೊಸಬರ, ಸ್ಟಾರ್‌ಗಳ ಎಂದು ಅವರು ಹಿಂದೇಟು ಹಾಕಿಲ್ಲ. ಮೊನ್ನೆ ಮೊನ್ನೆಯಷ್ಟೇ ಶ್ರುತಿ ನಟಿಸಿರುವ “ಹ್ಯಾಪಿ ನ್ಯೂ ಇಯರ್‌’ ಚಿತ್ರ ಬಿಡುಗಡೆಯಾಗಿದೆ. ಸದ್ಯ ದರ್ಶನ್‌ ನಾಯಕರಾಗಿರುವ “ತಾರಕ್‌’, ಅರ್ಜುನ್‌ ಸರ್ಜಾ ಅವರ 150ನೇ ಚಿತ್ರ “ವಿಸ್ಮಯ’ ಚಿತ್ರದಲ್ಲೂ ಶ್ರುತಿ ನಟಿಸುತ್ತಿದ್ದು, ಪ್ರೇಮ್‌ ನಿರ್ದೇಶನದ “ದಿ ವಿಲನ್‌’ನಲ್ಲೂ ಶ್ರುತಿಗೆ ಅವಕಾಶ ಸಿಕ್ಕಿದೆ. 

ಈಗ “ತಾರಕಾಸುರ’ನಿಗೆ ಶ್ರುತಿ ಜೋಡಿಯಾಗಿದ್ದಾರೆ. ಈ ಚಿತ್ರದಲ್ಲೂ ಶ್ರುತಿಗೆ ವಿಭಿನ್ನ ಪಾತ್ರ ಸಿಕ್ಕಿದೆಯಂತೆ. “ರಥಾವರ’ ಚಿತ್ರದ ನಂತರ ಚಂದ್ರಶೇಖರ್‌ ಬಂಡಿಯಪ್ಪ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಬಂಡಿಯಪ್ಪ ಇಲ್ಲಿ ಅಳಿವಿನಂಚಿನಲ್ಲಿರುವ ಜಾನಪದ ಕಲೆಯೊಂದರ ಸುತ್ತ ಕಥೆ ಮಾಡಿಕೊಂಡಿದ್ದು, ಅದನ್ನು ಕಮರ್ಷಿಯಲ್‌ ಆಗಿ ಹೇಳಲು ಹೊರಟಿದ್ದಾರಂತೆ. 

ಹೀರೋ ಇಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮೊದಲ ಶೇಡ್‌ನ‌ಲ್ಲಿ ಗಡ್ಡ ಬಿಟ್ಟು ಸಖತ್‌ ರಗಡ್‌ ಆಗಿ ಕಾಣಿಸಿಕೊಂಡರೆ, ಎರಡನೇ ಶೇಡ್‌ನ‌ಲ್ಲಿ ಸ್ಟೈಲಿಶ್‌ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು, ಮೂರನೇ ಶೇಡ್‌ನ‌ಲ್ಲಿ ಹೈಸ್ಕೂಲ್‌ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ವೈಭವ್‌, ಆ ಪಾತ್ರಕ್ಕಾಗಿ 15 ಕೆ.ಜಿ. ತೂಕ ಕೂಡಾ ಇಳಿಸಿಕೊಳ್ಳಲಿದ್ದಾರಂತೆ. ಈ ಸಿನಿಮಾವನ್ನು ನರಸಿಂಹಲು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.