ಶುಭಾ ‘ತ್ರಿದೇವಿ’ ದರ್ಶನ! ಆ್ಯಕ್ಷನ್ ಲುಕ್ ನಲ್ಲಿ ಎಂಟ್ರಿ


Team Udayavani, Apr 7, 2023, 4:32 PM IST

shubha

ಇಲ್ಲಿಯವರೆಗೆ ಕನ್ನಡದಲ್ಲಿ ಗ್ಲಾಮರಸ್‌ ಮತ್ತು ಹೋಮ್ಲಿ ಲುಕ್‌ನಲ್ಲಿ ಮಿಂಚಿದ್ದ ನಟಿ ಶುಭಾ ಪೂಂಜಾ, ಈಗ “ತ್ರಿದೇವಿ’ ಅವತಾರದಲ್ಲಿ ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಸದ್ಯ “ತ್ರಿದೇವಿ’ ಸಿನಿಮಾ ಬಿಡುಗಡೆಯಾಗಿದ್ದು, ಈ ಸಿನಿಮಾದಲ್ಲಿ ಶುಭಾ ಪೂಂಜಾ ಮೊದಲ ಬಾರಿಗೆ ಆ್ಯಕ್ಷನ್‌ ಲೇಡಿಯಾಗಿ ಅವತಾರವೆತ್ತಿದ್ದಾರೆ.

ಈಗಾಗಲೇ “ತ್ರಿದೇವಿ’ ಸಿನಿಮಾ ಹಲವು ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್‌ಗ‌ಳಲ್ಲಿ ಪ್ರದರ್ಶನಗೊಂಡು ವಿವಿಧ ವಿಭಾಗಗಳಲ್ಲಿ ಹತ್ತಾರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದು, ಶೀಘ್ರದಲ್ಲಿಯೇ ಕನ್ನಡ ಪ್ರೇಕ್ಷಕರ ಮುಂದೆಯೂ ಬರ್ತುದೆ.

ಇನ್ನು ಮೊದಲ ಬಾರಿಗೆ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಂಡಿರುವ ಶುಭಾ ಪೂಂಜಾ ತಮ್ಮ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. “ಹೊಸಥರದ ಪಾತ್ರವೇನಾದರೂ ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ “ತ್ರಿದೇವಿ’ ಸಿನಿಮಾದ ಈ ಪಾತ್ರ ಸಿಕ್ಕಿತು. ನಾನು ಏನು ನಿರೀಕ್ಷೆ ಮಾಡುತ್ತಿದ್ದೆನೋ, ಅದಕ್ಕೆ ಹೇಳಿ ಮಾಡಿಸಿದಂತಿತ್ತು ಈ ಪಾತ್ರ. ನಿರ್ದೇಶಕ ಅಶ್ವಿ‌ನ್‌ ಮ್ಯಾಥ್ಯೂ ಹೇಳಿದ ಕಥೆ ಮತ್ತು ಪಾತ್ರ ಎರಡೂ ತುಂಬ ಇಷ್ಟವಾಯಿತು. ಕೂಡಲೇ ಈ ಸಿನಿಮಾ ಮಾಡಲು ಒಪ್ಪಿಕೊಂಡೆ’ ಎಂಬುದು ಶುಭಾ ಮಾತು.

“ತ್ರಿದೇವಿ’ ಸಿನಿಮಾದಲ್ಲಿ ಶುಭಾ ಪೂಂಜಾ ತೆರೆಮೇಲೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಜೊತೆಗೆ, ತೆರೆಹಿಂದೆ ಸಿನಿಮಾದ ಮೇಕಿಂಗ್‌ ನಲ್ಲೂ ತಮ್ಮನ್ನು ತೊಡಗಿಸಿಕೊಂಡಿ ದ್ದಾರೆ. “ಈ ಸಿನಿಮಾದ ಕಥೆ ಆರಂಭವಾದಾಗಿನಿಂದ, ಶೂಟಿಂಗ್‌ ನಡೆದು ಕೊನೆಗೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಮುಗಿಯುವವರೆಗೂ, ನಾನು ಈ ಸಿನಿಮಾದ ಎಲ್ಲ ಹಂತದಲ್ಲೂ ಇದ್ದೇನೆ. “ತ್ರಿದೇವಿ’ ಸಿನಿಮಾದ ಮೂಲಕ ಇಡಿ ಸಿನಿಮಾ ನಿರ್ಮಾಣದ ಪ್ರಕ್ರಿಯೆ ಹೇಗೆ ಆಗುತ್ತದೆ ಎಂಬುದನ್ನು ಕಲಿತಿದ್ದೇನೆ’ ಎನ್ನುತ್ತಾರೆ ಶುಭಾ ಪೂಂಜಾ.

“”ತ್ರಿದೇವಿ’ ಸಿನಿಮಾದ ಟೈಟಲ್ಲೇ ಹೇಳುವಂತೆ, ಇದು ಮೂವರು ಹುಡುಗಿಯರ ಸುತ್ತ ನಡೆಯುವ ಸಿನಿಮಾ. “ಮೊಗ್ಗಿನ ಮನಸು’ ನಂತರ ಮೂರು ಹುಡುಗಿಯರ ಜೊತೆ ಮತ್ತೂಮ್ಮೆ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಕಂಪ್ಲೀಟ್‌ ಆ್ಯಕ್ಷನ್‌ ಪ್ಯಾಕ್‌ ಸಿನಿಮಾ ಇದಾಗಿದ್ದು, ಪಾತ್ರಕ್ಕಾಗಿ ತಿಂಗಳುಗಳ ಕಾಲ ವರ್ಕೌಟ್‌ ಕೂಡ ಮಾಡಿದ್ದೇವೆ. ಕನ್ನಡದಲ್ಲಿ ಈ ಥರದ ಸಿನಿಮಾಗಳು ಬಂದಿದ್ದು ವಿರಳ’ ಎನ್ನುವುದು ಶುಭಾ ಮಾತು.

“ತ್ರಿದೇವಿ’ ಸಿನಿಮಾದಲ್ಲಿ ಶುಭಾ ಪೂಂಜಾ ಅವರೊಂದಿಗೆ ಜ್ಯೋತ್ಸ್ನಾ ಬಿ. ರಾವ್‌, ಸಂಧ್ಯಾ ಎಲ್‌ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಅಮ್ಮನ್‌, ಜಯದೇವ್‌, ನಿಖೀಲ್‌ ಭಾರದ್ವಾಜ್‌, ಫ್ರೇಯಾ ಕೊಠಾರಿ, ಪಿ. ಡಿ ಸತೀಶ್‌, ನಂದಗೋಪಾಲ್, ಶೈಲಾ ಗೋವಿಂದರಾಜ್‌, ರವಿಕುಮಾರ್‌, ಅಶ್ವಿ‌ನ್‌ ಕಾಕುಮನು ಮೊದಲಾದವರು ಇತರ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಅಲ್ಟೆàರೆಡ್‌ ಇಗೋ ಎಂಟರ್‌ಟೈ ನ್ಮೆಂಟ್‌’ ಬ್ಯಾನರಿನಲ್ಲಿ ನಿರ್ಮಾಣವಾಗಿರುವ “ತ್ರಿದೇವಿ’ ಸಿನಿಮಾಕ್ಕೆ ಅಶ್ವಿ‌ನ್‌ ಮ್ಯಾಥ್ಯೂ ನಿರ್ದೇಶನವಿದೆ. ಇತ್ತೀಚೆಗಷ್ಟೇ ಮಾಧ್ಯಮಗಳ ಮುಂದೆ ಬಂದಿದ್ದ ಶುಭಾ ಪೂಂಜಾ ಮತ್ತು “ತ್ರಿದೇವಿ’ ಚಿತ್ರತಂಡ, ಸಿನಿಮಾದ ಬಗ್ಗೆ ಹೀಗೆ ಹಲವು ವಿಷಯಗಳನ್ನು ಹಂಚಿಕೊಂಡಿತು.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.