ಶುಭಪೂಂಜಾ ಈಗ ತರಕಾರಿ ಮಾರುವ ಹುಡುಗಿ!


Team Udayavani, Sep 18, 2018, 11:29 AM IST

shubhaponja.jpg

ಶುಭಪೂಂಜಾ “ಕೆಲವು ದಿನಗಳ ನಂತರ’ ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಶುಭಪೂಂಜಾ ಇದೇ ಮೊದಲ ಬಾರಿಗೆ ಮಲಯಾಳಂನತ್ತ ಮುಖ ಮಾಡಿದ್ದಾರೆ. ಹೌದು, ಮಲಯಾಳಂ ಚಿತ್ರವೊಂದರಲ್ಲಿ ಶುಭಪೂಂಜಾ ನಟಿಸುತ್ತಿದ್ದಾರೆ. ಹೌದು, ಇದೇ ಮೊದಲ ಬಾರಿಗೆ ಅವರು ಮಲಯಾಳಿ ಭಾಷೆಯ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರ ಮಲಯಾಳಂ ಹಾಗು ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ಶುರುವಾಗುತ್ತಿದೆ. ಆ ಚಿತ್ರಕ್ಕೆ “ಥೆನ್‌ಕಾಸಿ ಬ್ರದರ್’ ಎಂದ ನಾಮಕರಣ ಮಾಡಲಾಗಿದೆ. ಈ ಚಿತ್ರದ ಮೂಲಕ ಅಶ್ವಿ‌ನ್‌ ಮ್ಯಾಥೀವ್‌ ನಿರ್ದೇಶಕರಾಗುತ್ತಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಬರಹಗಾರರಾಗಿರುವ ಅಶ್ವಿ‌ನ್‌ ಮ್ಯಾಥೀವ್‌, ಅಲ್ಲಿನ ಕಿರುತೆರೆಯಲ್ಲಿ ಹಲವು ಕಾಮಿಡಿ ಶೋಗಳನ್ನು ನಡೆಸಿಕೊಟ್ಟಿದ್ದಾರೆ.

“ಥೆನ್‌ಕಾಸಿ ಬ್ರದರ್’ ಚಿತ್ರದಲ್ಲಿ ಶುಭಪೂಂಜಾ ಅವರು ತರಕಾರಿ ಮಾಡುವ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದೊಂದು ಬಜಾರಿ, ಸದಾ ಬಾಯಿಬಡಕಿಯಾಗಿರುವ ಹುಡುಗಿಯ ಪಾತ್ರವಾಗಿದ್ದು, ನಟನೆಗೆ ಹೆಚ್ಚು ಜಾಗ ಇರುವಂತಹ ಪಾತ್ರ ಸಿಕ್ಕಿದೆ. ಅದೊಂದು ಕಾಮಿಡಿ ಜೊತೆಗೆ ಆ್ಯಕ್ಷನ್‌ ಇರುವಂತಹ ಚಿತ್ರ ಎನ್ನುವ ಶುಭಪೂಂಜಾ, ಈಗಾಗಲೇ ಆರು ತಮಿಳು ಚಿತ್ರಗಳಲ್ಲಿ ನಟಿಸಿದ್ದೇನೆ.

ಆದರೆ, ಮಲಯಾಳಂ ಭಾಷೆಯ ಚಿತ್ರದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಒಳ್ಳೆಯ ಸ್ಕ್ರಿಪ್ಟ್ ಬಂದರೆ, ಮಾಡುವ ಆಸೆ ಇಟ್ಟುಕೊಂಡಿದ್ದೆ. ಅದು “ಥೆನ್‌ಕಾಸಿ ಬ್ರದರ್’ ಮೂಲಕ ಈಡೇರಿದೆ’ ಎಂದು ವಿವರ ಕೊಡುತ್ತಾರೆ ಶುಭ. ಮಲಯಾಳಂ ಚಿತ್ರದಲ್ಲಿ ನಟಿಸುತ್ತಿರುವುದರಿಂದ ತುಂಬಾನೇ ಖುಷಿ ಇದೆ. ನನಗೆ ತೆಲುಗು, ತಮಿಳು ಭಾಷೆ ಗೊತ್ತು. ಆದರೆ, ಮಲಯಾಳಂ ಭಾಷೆ ಅಷ್ಟಾಗಿ ಬರುವುದಿಲ್ಲ. ಹೇಳಿದ್ದನ್ನು ಅರ್ಥ ಮಾಡಿಕೊಳ್ಳುತ್ತೇನೆ. ಆದರೆ, ಮಾತನಾಡಲು ಸ್ವಲ್ಪ ಕಷ್ಟ. ಆದಷ್ಟು ಬೇಗ ಆ ಭಾಷೆ ಕಲಿಯುವ ನಂಬಿಕೆ ಇದೆ ಎನ್ನುತ್ತಾರೆ.

ಇನ್ನು, ಕನ್ನಡದಲ್ಲೂ ಒಂದಷ್ಟು ಕಥೆಗಳು ಅವರನ್ನು ಹುಡುಕಿ ಬಂದಿವೆ. ಆ ಪೈಕಿ ಈಗಾಗಲೇ ಒಂದು ನಾಯಕಿ ಪ್ರಧಾನ ಕಥೆಯನ್ನು ಅಂತಿಮಗೊಳಿಸಿರುವ ಅವರು, ಇಷ್ಟರಲ್ಲೇ ಆ ಚಿತ್ರದ ಬಗ್ಗೆ ವಿವರ ಕೊಡುವುದಾಗಿ ಹೇಳುತ್ತಾರೆ. ಅಂದಹಾಗೆ, “ಥೆನ್‌ಕಾಸಿ ಬ್ರದರ್’ ಮಲಯಾಳಂ ಹಾಗು ತಮಿಳು ಭಾಷೆಯಲ್ಲಿ ತಯಾರಾಗುತ್ತಿರುವುದರಿಂದ ಅಲ್ಲಿನ ಕಲಾವಿದರ ದಂಡೇ ಇರಲಿದೆ. ಚಿತ್ರದಲ್ಲಿ ಯಾರೆಲ್ಲಾ ಇರುತ್ತಾರೆ ಎಂಬ ಮಾಹಿತಿ ಸದ್ಯಕ್ಕಿಲ್ಲ. ಅಕ್ಟೋಬರ್‌ನಲ್ಲಿ ಚಿತ್ರೀಕರಣ ಶುರುವಾಗಲಿದೆ ಎಂಬುದು ಶುಭ ಮಾತು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.