“ರಾಮನ ಅವತಾರ’ಕ್ಕೆ ಶುಭ್ರ, ಚೈತ್ರಾ ಸೇರ್ಪಡೆ


Team Udayavani, Feb 18, 2019, 5:26 AM IST

shubra-aiyappa.jpg

“ರಾಮನ ಅವತಾರ’ ಎಂಬ ಸಿನಿಮಾವೊಂದು ಆರಂಭವಾಗುತ್ತಿದೆ ಎಂಬ ವಿಚಾರ ನಿಮಗೆ ಗೊತ್ತಿರಬಹುದು. ಮೂವರು ಹೀರೋಗಳಿರುವ ಈ ಚಿತ್ರಕ್ಕೆ ಈಗ ನಾಯಕಿಯರ ಆಯ್ಕೆಯಾಗಿದೆ. ಈಗಾಗಲೇ ಚಿತ್ರಕ್ಕೆ ಪ್ರಣೀತಾ ನಾಯಕಿಯಾಗಿ ಆಯ್ಕೆಯಾಗಿದ್ದು, ಇನ್ನಿಬ್ಬರು ನಾಯಕಿಯರ ತಲಾಶ್‌ನಲ್ಲಿತ್ತು ಚಿತ್ರತಂಡ. ಈಗ ಚಿತ್ರಕ್ಕೆ ಇಬ್ಬರು ನಾಯಕಿಯರು ಸಿಕ್ಕಿದ್ದಾರೆ. ಶುಭ್ರ ಅಯ್ಯಪ್ಪ ಹಾಗೂ ಚೈತ್ರಾ ಈಗ “ರಾಮನ ಅವತಾರ’ ತಂಡ ಸೇರಿಕೊಂಡಿದ್ದಾರೆ.

ಯಾವ ಶುಭ್ರ ಎಂದು ನೀವು ಕೇಳಿದರೆ ಶಿವರಾಜಕುಮಾರ್‌ ನಾಯಕರಾಗಿರುವ “ವಜ್ರಕಾಯ’ ಚಿತ್ರದ ಬಗ್ಗೆ ಹೇಳಬೇಕಾಗುತ್ತದೆ. ಆ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿದ್ದ ಶುಭ್ರ ಅಯ್ಯಪ್ಪ, ಆ ನಂತರ ಯಾವುದೇ ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಸುನಿ ನಿರ್ದೇಶನದ “ಜಾನ್‌ ಸೀನ’ ಚಿತ್ರದಲ್ಲಿ ನಟಿಸಿದ್ದರೂ, ಆ ಚಿತ್ರ ಇನ್ನೂ ತೆರೆಕಂಡಿಲ್ಲ. ಈಗ ಶುಭ್ರ “ರಾಮನ ಅವತಾರ’ ತಂಡ ಸೇರಿಕೊಂಡಿದ್ದಾರೆ.

ಇನ್ನು, ಚೈತ್ರಾ ಕೂಡಾ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. “ಮಹಿರ’ ಚಿತ್ರದಲ್ಲಿ ನಾಯಕಿಯಾಗಿರುವ ಚೈತ್ರಾಗೆ ಇಲ್ಲಿ ಅವಕಾಶ ಸಿಕ್ಕಿದೆ.  ಚಿತ್ರದಲ್ಲಿ ರಿಷಿ, ದಾನಿಶ್‌ ಸೇಠ್ ಹಾಗೂ ರಾಜ್‌ ಬಿ ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ವಿಕಾಸ್‌ ಪಂಪಾಪತಿ ಹಾಗೂ ವಿನಯ್‌ ಪಂಪಾಪತಿ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಶೀರ್ಷಿಕೆ “ರಾಮನ ಅವತಾರ’ ಅಂತಿದ್ದರೂ, ಪುರಾಣ-ಪುಣ್ಯ ಕಥೆಗಳಲ್ಲಿ ಬರುವ ರಾಮನಿಗೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ!

ಇದು ಪಕ್ಕಾ ಇಂದಿನ ಜಮಾನದ ಕಥೆ, ಕಲಿಯುಗದ ಕಥೆ. ಈ ಕಥೆಯೊಳಗೆ ರಾಮ ಎಂಬ ಪಾತ್ರವೊಂದು ಬರುತ್ತದೆ. ಅದಕ್ಕಾಗಿ ಚಿತ್ರದ ಶೀರ್ಷಿಕೆಯನ್ನು “ರಾಮನ ಅವತಾರ’ ಅಂತ ಇಟ್ಟಿದ್ದೇವೆ ಎನ್ನುತ್ತದೆ ಚಿತ್ರತಂಡ. ಚಿತ್ರದಲ್ಲಿ  ರಿಷಿ ರಾಮನಾಗಿ, “ಹಂಬಲ್‌ ಪೊಲಿಟಿಶಿಯನ್‌’ ಚಿತ್ರ ಖ್ಯಾತಿಯ ದಾನೀಶ್‌ ಸೇಠ್ ಫ್ಲೈಯಿಂಗ್‌ ಮ್ಯಾನ್‌ ಹಾಗೂ ರಾಜ್‌ ಬಿ. ಶೆಟ್ಟಿ ಜೇಮ್ಸ್ ಬಾಂಡ್‌ ಗೆಟಪ್‌ನಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

“ರಾಮನ ಅವತಾರ’ ಚಿತ್ರದ ಕಥೆ ಡಾರ್ಕ್‌ ಕಾಮಿಡಿ ಜಾನರ್‌ನಲ್ಲಿ ಸಾಗುತ್ತದೆ. ಚಿತ್ರದಲ್ಲಿ ಪ್ರಮುಖ ಪಾತ್ರವೊಂದು ಟ್ರಾವೆಲ್‌ ಮಾಡುತ್ತಾ ಹೋಗುತ್ತದೆ. ಉಳಿದ ಪಾತ್ರಗಳು ಅದನ್ನು ಸಂಧಿಸುತ್ತ ಹೋಗುತ್ತವೆ. ಅಂತಿಮವಾಗಿ ಏನಾಗಲಿದೆ ಅನ್ನೋದೆ ಚಿತ್ರದ ಸಸ್ಪೆನ್ಸ್‌ ಮತ್ತು ಕ್ಲೈಮ್ಯಾಕ್‌ ಅಂತೆ. ಬೆಂಗಳೂರು, ಚಿತ್ರದುರ್ಗ, ಮಂಗಳೂರು, ಗೋವಾ ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸುವ ಯೋಜನೆ ಇದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.