ಕಾಂತಾರದಿಂದ “ಸಿಂಗಾರ ಸಿರಿಯೇ” ಹಾಡು ಸೋಮವಾರ ಬಿಡುಗಡೆ
Team Udayavani, Aug 14, 2022, 3:43 PM IST
ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ “ಕಾಂತಾರ’ ಚಿತ್ರದ ಮೊದಲ ಹಾಡು ಸ್ವಾತಂತ್ರ್ಯ ದಿನಾಚರಣೆ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ.
ನಟ-ನಿರ್ದೇಶಕ ರಿಷಭ್ ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸಿ, ನಾಯಕರಾಗಿ ನಟಿಸಿದ್ದಾರೆ. ಪ್ರಮೋದ್ ಮರವಂತೆ ರಚಿಸಿರುವ “ಸಿಂಗಾರ ಸಿರಿಯೇ..’ ಎಂಬ ಹಾಡಿನಲ್ಲಿ ಜಾನಪದ ಸೊಗಡನ್ನು ಎತ್ತಿಹಿಡಿಯಲಾಗಿದೆ.
ಗಾಯಕ ವಿಜಯ್ ಪ್ರಕಾಶ್, ಅನನ್ಯ ಭಟ್ ಹಾಗೂ ನಾಗರಾಜ್ ಪನ್ನಾರ್ ವಲ್ಟಾರ್ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ರಿಷಭ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಸೆಪ್ಟೆಂಬರ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ