ಗಾಯಕ ಹೇಮಂತ್‌ ಈಗ ಸಂಗೀತ ನಿರ್ದೇಶಕ


Team Udayavani, May 15, 2018, 11:14 AM IST

gayaaka.jpg

ಸಂಗೀತ ನಿರ್ದೇಶಕರು ಗಾಯಕರಾಗಿದ್ದಾರೆ. ಗಾಯಕರು ಸಂಗೀತ ನಿರ್ದೇಶಕರೂ ಆಗಿದ್ದಾರೆ. ಈಗ ಆ ಸಾಲಿಗೆ ಗಾಯಕ ಹೇಮಂತ್‌ ಹೊಸ ಸೇರ್ಪಡೆ. ಹೌದು, ಹೇಮಂತ್‌ ಇದುವರೆಗೆ ನೂರಾರು  ಹಾಡುಗಳನ್ನು ಹಾಡಿರುವ ಹೇಮಂತ್‌ ಅಂದಾಕ್ಷಣ ಥಟ್ಟನೆ ನೆನಪಾಗೋದೇ “ಪ್ರೀತ್ಸೆ ಪ್ರೀತ್ಸೆ..’ ಹಾಡು. ಆ ಹಾಡು ಸೂಪರ್‌ ಹಿಟ್‌ ಆಗುತ್ತಿದ್ದಂತೆಯೇ, ಹೇಮಂತ್‌ ಅವರನ್ನು ಹುಡುಕಿ ಬಂದ ಹಾಡುಗಳಿಗೆ ಲೆಕ್ಕವಿಲ್ಲ.

ಆ ಬಳಿಕೆ ಹೇಮಂತ್‌ ಅದೆಷ್ಟೋ ಜನಪ್ರಿಯ ಹಾಡುಗಳಿಗೆ ಧ್ವನಿಯಾದರು. “ಕುರಿಗಳು ಸಾರ್‌ ಕುರಿಗಳು’ ಚಿತ್ರದಲ್ಲಿ “ನಿದಿರೆ ಬರದಿರೆ ಏನಂತೀ…’, “ಕುಟುಂಬ’ ಚಿತ್ರದ “ನೀ ನನ್‌ ಅಪ್ಪಿಕೊಳ್ಳಲ್ವಾ..’, “ದುನಿಯಾ’ ಚಿತ್ರದ “ಪ್ರೀತಿ ಮಾಯೆ ಹುಷಾರು…’ , “ಇಂತಿ ನಿನ್ನ ಪ್ರೀತಿಯ’ ಚಿತ್ರದ “ಓ ಕನಸ ಜೋಕಾಲಿ …’ ಹಾಡುಗಳು ಇಂದಿಗೂ ಗುನುಗುವಂತಿವೆ. ಅದಲ್ಲದೆ ಸಾಕಷ್ಟು ಸ್ಟಾರ್‌ ನಟರ ಚಿತ್ರಗಳಿಗೆ ಹೇಮಂತ್‌ ಹಾಡಿದ್ದಾರೆ.

ಹಿನ್ನೆಲೆ ಗಾಯನಕ್ಕೆ ಎರಡು ಬಾರಿ ರಾಜ್ಯ ಪ್ರಶಸ್ತಿ ಪಡೆದ ಅವರೀಗ, ಇದೇ ಮೊದಲ ಬಾರಿಗೆ ಸಂಗೀತ ನಿರ್ದೇಶಕರಾಗಿದ್ದಾರೆ. “ಕರ್ಷಣಂ’ ಚಿತ್ರಕ್ಕೆ ನಾಲ್ಕು ಹಾಡುಗಳನ್ನು ಕಟ್ಟಿಕೊಟ್ಟಿದ್ದಾರೆ ಹೇಮಂತ್‌. ಈ ಚಿತ್ರಕ್ಕೆ ನಾಗೇಂದ್ರ ಪ್ರಸಾದ್‌ ಅವರು ಗೀತೆಗಳನ್ನು ರಚಿಸಿದ್ದಾರೆ. ಅಂದಹಾಗೆ, ಈ ಚಿತ್ರವನ್ನು “ಮಹಾಭಾರತ’ ಧಾರಾವಾಹಿ ಖ್ಯಾತಿಯ ಶರವಣ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

ಧನಂಜಯ ಅತ್ರೆ ಈ ಚಿತ್ರದ ನಿರ್ಮಾಣದ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ. ನಾಯಕರಾಗಿ ಇದು ಇವರ ಮೊದಲ ಚಿತ್ರ. ಕಿರುತೆರೆಯಲ್ಲಿ ನಟರಾಗಿ ಗುರುತಿಸಿಕೊಂಡಿರುವ ಧನಂಜಯ್‌ ಅತ್ರೆ, “ಚಿತ್ರಲೇಖ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಹಲವು ಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ್ದ ಧನಂಜಯ್‌ ಅತ್ರೆಗೆ “ಕರ್ಷಣಂ’ ಮೊದಲ ಚಿತ್ರ.

ಈಗಾಗಲೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಇತ್ತೀಚೆಗೆ, ಸ್ಲಂ ಒಂದರಲ್ಲಿ “ಹೊಂಬಾಳೆ ಕಟ್ಟು ಗುರು, ಚಪ್ಪಾಳೆ ತಟ್ಟು ಗುರು…’ ಎಂಬ ನಾಯಕನ ಪರಿಚಯಿಸುವ ಹಾಡಿನೊಂದಿಗೆ ಚಿತ್ರಕ್ಕೆ ಕುಂಬಳಕಾಯಿ ಒಡೆಯಲಾಗಿದೆ. ಅಂದಹಾಗೆ, ಇದೊಂದು ಸಸ್ಪೆನ್ಸ್‌ ಥ್ರಿಲ್ಲರ್‌ ಕಥೆ. 

ಚಿತ್ರಕ್ಕೆ ಮೋಹನ್‌ ಎಂ.ಮುಗುಡೇಶ್ವರ ಛಾಯಾಗ್ರಹಣ, ಹೇಮಂತ್‌ ಸಂಗೀತ ನಿರ್ದೇಶನ, ನಾಗೇಂದ್ರ ಪ್ರಸಾದ್‌ ಸಾಹಿತ್ಯ, ಗೌರಿ ಅತ್ರೆ ಕಥೆ, ವೆಂಕಟೇಶ್‌ ಸಂಕಲನ, ಗಿರೀಶ್‌ ನೃತ್ಯ ನಿರ್ದೇಶನ, ಅಶೋಕ್‌ ಸಾಹಸ, ವಸಂತರಾವ್‌ ಕುಲಕರ್ಣಿ ಕಲಾನಿರ್ದೇಶನವಿದೆ. ಧನಂಜಯ ಅತ್ರೆ, ಅನೂಷಾರೈ, ಶ್ರೀನಿವಾಸ ಮೂರ್ತಿ, ಮನಮೋಹನ್‌ ರೈ, ವಿಜಯ ಚಂಡೂರು, ಗೌತಮ್‌ ರಾಜ್‌, ಯಮುನಾ ಶ್ರೀನಿಧಿ ಇನ್ನು ಮುಂತಾದವರ ತಾರಾಬಳಗವಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.