ಶಿವರುದ್ರಯ್ಯ ಹೊಸ ಸವಾರಿ


Team Udayavani, Oct 19, 2018, 12:05 PM IST

ramana.jpg

ನಿರ್ದೇಶಕ ಕೆ.ಶಿವರುದ್ರಯ್ಯ ಅವರು “ಮಾರಿಕೊಂಡವರು’ ಚಿತ್ರದ ನಂತರ ಮತ್ಯಾವ ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ ಎಂಬ ಪ್ರಶ್ನೆ ಇತ್ತು. ಅದಕ್ಕೆ ಉತ್ತರ “ರಾಮನ ಸವಾರಿ’. ಹೌದು, ಸದ್ದಿಲ್ಲದೆಯೇ ಶಿವರುದ್ರಯ್ಯ ಅವರು ಈ ಚಿತ್ರವನ್ನು ಮುಗಿಸಿ, ಇದೀಗ ಸೆನ್ಸಾರ್‌ಗೆ ಕಳುಹಿಸಲು ಸಜ್ಜಾಗುತ್ತಿದ್ದಾರೆ. ಕಥೆಗಾರ ಕೆ.ಸದಾಶಿವ ಅವರ “ರಾಮನ ಸವಾರಿ ಸಂತೆಗೆ ಹೋದದ್ದು’ ಕಥೆ ಆಧರಿಸಿ, “ರಾಮನ ಸವಾರಿ’ ಚಿತ್ರ ಮಾಡಿದ್ದಾರೆ ಶಿವರುದ್ರಯ್ಯ.

ಇದು ಮಕ್ಕಳ ಚಿತ್ರ. ಇಲ್ಲಿ ನಟಿ ಸೋನುಗೌಡ ಕೂಡ ಹೈಲೆಟ್‌. ಅವರೊಂದಿಗೆ ರಾಜೇಶ್‌, ಸುಧಾ ಬೆಳವಾಡಿ, ಭಾರ್ಗವಿ ಇತರರು ನಟಿಸಿದ್ದಾರೆ. “ರಾಮನ ಸವಾರಿ’ ಕುರಿತು ಮಾಹಿತಿ ಕೊಡುವ ನಿರ್ದೇಶಕ ಶಿವರುದ್ರಯ್ಯ, “ಈ ಕಥೆಯನ್ನು ಈ ಹಿಂದೆ ಗಿರೀಶ್‌ ಕಾರ್ನಾಡ್‌ ಮತ್ತು ಗಿರೀಶ್‌ ಕಾಸರವಳ್ಳಿ ಅವರು ಮಾಡಬೇಕಿತ್ತು. ಆದರೆ ಆಗಲಿಲ್ಲ. ನಾನೂ ಸಹ 2006 ರಲ್ಲೇ ಮಾಡಬೇಕು ಅಂತ ಸಾಕಷ್ಟು ಪ್ರಯತ್ನಿಸಿದ್ದೆ. ಸಾಧ್ಯವಾಗಿರಲಿಲ್ಲ. ಅದಕ್ಕೀಗ ಸಮಯ ಕೂಡಿ ಬಂದಿದೆ.

ಮಂಗಳೂರು ಮೂಲದ ಜೋಸೆಫ್ ಎಂಬ ನಿರ್ಮಾಪಕರು ತಮ್ಮ ಮಗನಿಗೆ ಈ ಕಥೆ ಮಾಡಬೇಕೆಂದು ನಿರ್ಧರಿಸಿದ್ದರಿಂದ ಚಿತ್ರವಾಗಿದೆ. ಸುಮಾರು ಐದುವರೆ ವರ್ಷದ ಹುಡುಗ ಆರ್ಯನ್‌ ಚಿತ್ರದ ಆಕರ್ಷಣೆ. ಕಥೆ ಬಗ್ಗೆ ಹೇಳುವುದಾದರೆ, ಬ್ರಾಹ್ಮಣ ಸಮುದಾಯ ಕುಟುಂಬದ ಹುಡುಗನೊಬ್ಬ ಮನೆಯವರ ಜಗಳ ನೋಡಲಾರದೆ, ಮನೆಬಿಟ್ಟು ಹೋಗುತ್ತಾನೆ. ಮೂರು ವರ್ಷಗಳ ಕಾಲ ಅವನ ಸುಳಿವೇ ಇರುವುದಿಲ್ಲ. ಕೊನೆಗೊಂದು ದಿನ ಸಂತೆಯಲ್ಲಿ ಅವನ ಅಪ್ಪನ ಕಣ್ಣಿಗೆ ಬೀಳುತ್ತಾನೆ.

ಅವನು ನನ್ನ ಮಗನೇ ಅಂತ ಗೊತ್ತಾಗಿ, ಸಂತೆಯಲ್ಲಿ ತಿಂಡಿ, ತಿನಿಸು ಕೊಡಿಸಿ, ಮನೆಗೆ ಕರೆದೊಯ್ಯಲು ಪ್ರಯತ್ನಿಸಿದರೂ ಆ ಹುಡುಗ ಹೋಗಲ್ಲ. ಆಮೇಲೆ ಏನಾಗುತ್ತೆ ಎಂಬುದು ಕಥೆ. ಆ ಹುಡುಗನಿಗೆ ಜಗಳವೆಂದರೆ ಆಗುವುದಿಲ್ಲ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆಗೆ ಹತ್ತಿರವಾದಂತಹ ಕಥೆಯ ಚಿತ್ರಣ ಇಲ್ಲಿದೆ. ಹಾಗೆಯೇ ಪ್ರಕೃತಿ ಮುಂದೆ ಯಾರೂ ದೊಡ್ಡವರಲ್ಲ, ಪ್ರಕೃತಿ ಉಳಿಸಬೇಕೆಂಬ ಸಣ್ಣ ಸಂದೇಶವೂ ಇಲ್ಲಿದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕರು.

ಇದು ಮಲೆನಾಡ ಭಾಗದ ಕಥೆಯಾದ್ದರಿಂದ ಬಹುತೇಕ ಹೊಸನಗರ, ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣಗೊಂಡಿದೆ. 1964, 1974 ರ ಕಾಲಘಟ್ಟದ ಕಥೆ ಇಲ್ಲಿ ಹೇಳಲಾಗಿದೆ. ಆಗಿನ ಕುದುರೆ ಗಾಡಿ, ಎತ್ತಿನಗಾಡಿ ಸೇರಿದಂತೆ ಆಗಿನ ಕಾಲಘಟ್ಟ ತೋರಿಸುವ ಪ್ರಯತ್ನ ಮಾಡಲಾಗಿದೆ. ವಿಶೇಷವೆಂದರೆ, ಈ ಚಿತ್ರಕ್ಕೆ ಗಿರೀಶ್‌ ಕಾಸರವಳ್ಳಿ ಅವರು ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.

ಚಿತ್ರಕ್ಕೆ ಕೆ.ಕಲ್ಯಾಣ್‌ ಅವರ ಸಂಗೀತವಿದೆ. ಎರಡು ಹಾಡುಗಳಿಗೆ ವಿಜಯಪ್ರಕಾಶ್‌, ಅನುರಾಧಭಟ್‌ ಮತ್ತು ಚಿಂತನ್‌ ಹಾಡಿದ್ದಾರೆ. ಸದ್ಯಕ್ಕೆ ಸಂಕಲನದ ಕೆಲಸದಲ್ಲಿರುವ “ರಾಮನ ಸವಾರಿ’, ಸೆನ್ಸಾರ್‌ಗೆ ರೆಡಿಯಾಗುತ್ತಿದೆ. ಜಯಂತಿ ಮರುಳಸಿದ್ದಪ್ಪ ಅವರು ವಸ್ತ್ರವಿನ್ಯಾಸ ಮಾಡಿದ್ದಾರೆ. ವಿಶ್ವನಾಥ್‌ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.