![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
“ರಾಬರ್ಟ್’ ತಂಡದಲ್ಲಿ ಸೋನಾಲ್
Team Udayavani, Dec 31, 2019, 7:02 AM IST
![sonal](https://www.udayavani.com/wp-content/uploads/2019/12/sonal-620x413.jpg)
ದರ್ಶನ್ ನಾಯಕರಾಗಿರುವ “ರಾಬರ್ಟ್’ ಚಿತ್ರಕ್ಕೆ ದಿನದಿಂದ ದಿನಕ್ಕೆ ಹೊಸ ಕಲಾವಿದರು ಸೇರಿಕೊಳ್ಳುತ್ತಲೇ ಇದ್ದಾರೆ. ಈಗಾಗಲೇ ವಿನೋದ್ ಪ್ರಭಾಕರ್, ತೇಜಸ್ವಿನಿ ಸೇರಿರುವ ಸುದ್ದಿಯನ್ನು ನೀವು ಓದಿರಬಹುದು. ಈಗ ಸೋನಾಲ್ ಮೊಂತೆರೋ ಸರದಿ. ಯಾವ ಸೋನಾಲ್ ಮೊಂತೆರೋ ಎಂದರೆ “ಪಂಚತಂತ್ರ’ ಸಿನಿಮಾ ಬಗ್ಗೆ ಹೇಳಬೇಕು. ಯೋಗರಾಜ್ ಭಟ್ ನಿರ್ದೇಶನದ “ಪಂಚತಂತ್ರ’ ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿದ ಸೋನಾಲ್ಗೆ “ರಾಬರ್ಟ್’ ಚಿತ್ರದಿಂದಲೂ ಅವಕಾಶ ಸಿಕ್ಕಿದೆ.
ಹಾಗಂತ ನಾಯಕಿಯಾಗಿಯಲ್ಲ, ಪ್ರಮುಖ ಪಾತ್ರವೊಂದರದಲ್ಲಿ. ಈಗಾಗಲೇ ಸೋನಾಲ್ ನಟಿಸಿರುವ ದೃಶ್ಯಗಳನ್ನು ನಿರ್ದೇಶಕ ತರುಣ್ ಸುಧೀರ್ ಚಿತ್ರೀಕರಿಸಿಕೊಂಡಿದ್ದಾರೆ. ಸಿನಿಮಾ ಆರಂಭವಾದ ಕೆಲವೇ ದಿನಗಳಲ್ಲಿ ಸೋನಾಲ್ ಅವರ ದೃಶ್ಯ ಚಿತ್ರೀಕರಿಸಿಕೊಂಡಿರುವ ತರುಣ್, ಈ ವಿಷಯವನ್ನು ಈಗಲೇ ಎಲ್ಲೂ ಹಂಚಿಕೊಳ್ಳಬೇಡಿ ಎಂದಿದ್ದರಂತೆ. ಅದೇ ಕಾರಣದಿಂದ ಸೋನಾಲ್ ಆ ಬಗ್ಗೆ ಮಾತನಾಡಿರಲಿಲ್ಲ.
ಈಗ “ರಾಬರ್ಟ್’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು, ವಾರಾಣಾಸಿ ಸೇರಿದಂತೆ ಹಲವು ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಚಿಕ್ಕದಲ್ಲಿ ಸೋನಾಲ್ ಅವರ ಪಾತ್ರಕ್ಕೆ ಪ್ರಾಮುಖ್ಯತೆ ಇದೆಯಂತೆ. ಮಂಗಳೂರು ಮೂಲದ ಸೋನಾಲ್ ತುಳು ಸೇರಿದಂತೆ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಸದ್ಯ ಉಪೇಂದ್ರ ನಾಯಕರಾಗಿರುವ “ಬುದ್ಧಿವಂತ-2′ ಚಿತ್ರಕ್ಕೂ ಸೋನಾಲ್ ನಾಯಕಿ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.