‘ವರದ’ನಿಗೆ ಮುರಳಿ ಸಾಥ್: ಓಂ ಹರಿ ಹರಿ ಓಂ ಹಾಡು ಬಂತು
Team Udayavani, Jan 23, 2022, 11:44 AM IST
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ’ ಚಿತ್ರಕ್ಕಾಗಿ ನಂದೀಶ್ ಅವರು ಬರೆದಿರುವ “ಓಂ ಹರಿ ಹರಿ ಓಂ’ ಎಂಬ ಹಾಡನ್ನು ಸರಿಗಮಪ ಖ್ಯಾತಿಯ ಅಶ್ವಿನ್ ಶರ್ಮ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋವನ್ನು ನಟ ಶ್ರೀಮುರಳಿ ಬಿಡುಗಡೆ ಮಾಡಿದ್ದಾರೆ. ಉದಯಪ್ರಕಾಶ್ ನಿರ್ದೇಶನ ಹಾಗೂ ಪ್ರದೀಪ್ ವರ್ಮ ಸಂಗೀತ ನೀಡಿರುವ ಈ ಹಾಡನ್ನು ಅಶ್ವಿನ್ ಶರ್ಮ ಹಾಡಿದ್ದಾರೆ.
ಜನವರಿ 28 ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಕೊರೊನಾ ಕಾರಣದಿಂದ ಚಿತ್ರಮಂದಿರಗಳಲ್ಲಿ ಐವತ್ತರಷ್ಟು ಭರ್ತಿಗೆ ಮಾತ್ರ ಸರ್ಕಾರ ಒಪ್ಪಿಗೆ ನೀಡಿದೆ. ಹಾಗಾಗಿ ನೂರರಷ್ಟು ಭರ್ತಿಗೆ ಒಪ್ಪಿಗೆ ಸಿಕ್ಕ ಕೂಡಲೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎನ್ನುತ್ತಾರೆ ಉದಯಪ್ರಕಾಶ್.
ಇದನ್ನೂ ಓದಿ:ಪ್ರಣಯ ರಾಜನ ಕನಸಿನ ಕೂಸು ‘ಆರ್ಟ್ ಎನ್ ಯು’
ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್. ಕೆ.ಕಲ್ಯಾಣ್ , ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕ ರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್, ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೀಘ್ರದಲ್ಲಿ ‘ಕೆಜಿಎಫ್ 3’ ಚಿತ್ರೀಕರಣ ಪ್ರಾರಂಭಿಸುವುದಿಲ್ಲ: ಕಾರ್ಯಕಾರಿ ನಿರ್ಮಾಪಕ
ನೇಣು ಬಿಗಿದ ಸ್ಥಿತಿಯಲ್ಲಿ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಮೃತದೇಹ ಪತ್ತೆ!
ಸಾರಾ ಅಬೂಬಕ್ಕರ್ ಕಾದಂಬರಿ ಆಧಾರಿತ ‘ಸಾರಾ ವಜ್ರ’ ಮೇ 20 ರಂದು ತೆರೆಗೆ
ಪೃಥ್ವಿ ಅಂಬರ್ ನಟನೆಯ ‘ದೂರದರ್ಶನ’ ಸಿನಿಮಾದ ಶೂಟಿಂಗ್ ಕಂಪ್ಲೀಟ್
ವರ್ಷಾಂತ್ಯಕ್ಕೆ ‘ಕೆಜಿಎಫ್ 3’ ಶೂಟಿಂಗ್ ಆರಂಭ; ಮಹತ್ವದ ಮಾಹಿತಿ ನೀಡಿದ ವಿಜಯ್ ಕಿರಗಂದೂರು